AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಧ್ರಾ ರೈಲು ದುರಂತ ಪ್ರಕರಣ; ಸುಪ್ರೀಂ ಕೋರ್ಟ್​ನಿಂದ ಫೆಬ್ರವರಿ 13ರಂದು ವಿಚಾರಣೆ

ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 11 ಆರೋಪಿಗಳಿಗೆ ಹೈಕೋರ್ಟ್​ ವಿಧಿಸಿದ ಜೀವಾವಧಿ ಶಿಕ್ಷೆಯ ಬದಲು ಮರಣದಂಡನೆ ವಿಧಿಸುವಂತೆ ಕೋರುವುದಾಗಿ ಗುಜರಾತ್ ಸರ್ಕಾರ ಫೆಬ್ರವರಿ 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಫೆಬ್ರವರಿ 13ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. 2002ರಲ್ಲಿ ಗೋದ್ರಾ ರೈಲು ದುರಂತ ಸಂಭವಿಸಿ 59 ಜನರು ಮೃತಪಟ್ಟಿದ್ದರು.

ಗೋಧ್ರಾ ರೈಲು ದುರಂತ ಪ್ರಕರಣ; ಸುಪ್ರೀಂ ಕೋರ್ಟ್​ನಿಂದ ಫೆಬ್ರವರಿ 13ರಂದು ವಿಚಾರಣೆ
Supreme Court
Follow us
ಸುಷ್ಮಾ ಚಕ್ರೆ
|

Updated on: Jan 16, 2025 | 3:38 PM

ನವದೆಹಲಿ: 2002ರ ಗೋಧ್ರಾ ರೈಲು ಸುಟ್ಟು ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿದ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು (ಜನವರಿ 16) ಹೇಳಿದೆ. ಮುಂದಿನ ವಿಚಾರಣೆಯ ದಿನದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ.

2002ರ ಫೆಬ್ರವರಿ 27ರಂದು ಗುಜರಾತ್‌ನ ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಕೋಚ್‌ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವನ್ನಪ್ಪಿದ್ದರು. ಇದು ಗುಜರಾತ್​ನಲ್ಲಿ ಗಲಭೆಗೆ ಕಾರಣವಾಯಿತು. ಗುಜರಾತ್ ಹೈಕೋರ್ಟ್ ಅಕ್ಟೋಬರ್ 2017ರಲ್ಲಿ ನೀಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಹೈಕೋರ್ಟ್ ಈ ಪ್ರಕರಣದಲ್ಲಿ ಹಲವಾರು ಅಪರಾಧಿಗಳ ಶಿಕ್ಷೆಯನ್ನು ಎತ್ತಿಹಿಡಿದು 11 ಜನರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು.

ಇದನ್ನೂ ಓದಿ: ನೋವಿನ ದೃಶ್ಯಗಳು, ಮೃತದೇಹಗಳನ್ನು ಕಂಡು ಕುಗ್ಗಿಹೋಗಿದ್ದೆ; ಪಾಡ್‌ಕ್ಯಾಸ್ಟ್‌ನಲ್ಲಿ ಗೋಧ್ರಾ ಗಲಭೆ ಬಗ್ಗೆ ಪ್ರಧಾನಿ ಮೋದಿ ಮಾತು

ಇಂದು ಅಪರಾಧಿಗಳ ಪರ ಹಾಜರಾದ ವಕೀಲರು ಸಮಯ ಕೋರಿದ ನಂತರ ಸುಪ್ರೀಂ ಕೋರ್ಟ್ ಫೆಬ್ರವರಿ 13ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ಈ ಹಿಂದೆ ಸುಪ್ರೀಂ ಕೋರ್ಟ್ ಮುಂದೆ ನಡೆದ ವಿಚಾರಣೆಯ ಸಮಯದಲ್ಲಿ ಗುಜರಾತ್​​ನ ಪರ ವಕೀಲರು 11 ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿದೆ ಮತ್ತು ಇತರ 20 ಜನರಿಗೆ ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ 31 ಅಪರಾಧಿಗಳಿಗೆ ಹೈಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿತ್ತು. 11 ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. 11 ಅಪರಾಧಿಗಳಿಗೆ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವುದರ ವಿರುದ್ಧ ಗುಜರಾತ್ ಮೇಲ್ಮನವಿ ಸಲ್ಲಿಸಿದ್ದರೂ, ಹಲವಾರು ಅಪರಾಧಿಗಳು ಈ ಪ್ರಕರಣದಲ್ಲಿ ತಮ್ಮ ಶಿಕ್ಷೆಯನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Supreme Court Job: ಸುಪ್ರೀಂ ಕೋರ್ಟ್‌ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

2002ರ ಗೋಧ್ರಾ ರೈಲು ಸುಟ್ಟು ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಮುಂದಿನ ವಿಚಾರಣೆಯ ದಿನದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್