ಗೋಧ್ರಾ ರೈಲು ದುರಂತ ಪ್ರಕರಣ; ಸುಪ್ರೀಂ ಕೋರ್ಟ್​ನಿಂದ ಫೆಬ್ರವರಿ 13ರಂದು ವಿಚಾರಣೆ

ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 11 ಆರೋಪಿಗಳಿಗೆ ಹೈಕೋರ್ಟ್​ ವಿಧಿಸಿದ ಜೀವಾವಧಿ ಶಿಕ್ಷೆಯ ಬದಲು ಮರಣದಂಡನೆ ವಿಧಿಸುವಂತೆ ಕೋರುವುದಾಗಿ ಗುಜರಾತ್ ಸರ್ಕಾರ ಫೆಬ್ರವರಿ 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಫೆಬ್ರವರಿ 13ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. 2002ರಲ್ಲಿ ಗೋದ್ರಾ ರೈಲು ದುರಂತ ಸಂಭವಿಸಿ 59 ಜನರು ಮೃತಪಟ್ಟಿದ್ದರು.

ಗೋಧ್ರಾ ರೈಲು ದುರಂತ ಪ್ರಕರಣ; ಸುಪ್ರೀಂ ಕೋರ್ಟ್​ನಿಂದ ಫೆಬ್ರವರಿ 13ರಂದು ವಿಚಾರಣೆ
Supreme Court

Updated on: Jan 16, 2025 | 3:38 PM

ನವದೆಹಲಿ: 2002ರ ಗೋಧ್ರಾ ರೈಲು ಸುಟ್ಟು ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿದ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು (ಜನವರಿ 16) ಹೇಳಿದೆ. ಮುಂದಿನ ವಿಚಾರಣೆಯ ದಿನದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ.

2002ರ ಫೆಬ್ರವರಿ 27ರಂದು ಗುಜರಾತ್‌ನ ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಕೋಚ್‌ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವನ್ನಪ್ಪಿದ್ದರು. ಇದು ಗುಜರಾತ್​ನಲ್ಲಿ ಗಲಭೆಗೆ ಕಾರಣವಾಯಿತು. ಗುಜರಾತ್ ಹೈಕೋರ್ಟ್ ಅಕ್ಟೋಬರ್ 2017ರಲ್ಲಿ ನೀಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಹೈಕೋರ್ಟ್ ಈ ಪ್ರಕರಣದಲ್ಲಿ ಹಲವಾರು ಅಪರಾಧಿಗಳ ಶಿಕ್ಷೆಯನ್ನು ಎತ್ತಿಹಿಡಿದು 11 ಜನರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು.

ಇದನ್ನೂ ಓದಿ: ನೋವಿನ ದೃಶ್ಯಗಳು, ಮೃತದೇಹಗಳನ್ನು ಕಂಡು ಕುಗ್ಗಿಹೋಗಿದ್ದೆ; ಪಾಡ್‌ಕ್ಯಾಸ್ಟ್‌ನಲ್ಲಿ ಗೋಧ್ರಾ ಗಲಭೆ ಬಗ್ಗೆ ಪ್ರಧಾನಿ ಮೋದಿ ಮಾತು

ಇಂದು ಅಪರಾಧಿಗಳ ಪರ ಹಾಜರಾದ ವಕೀಲರು ಸಮಯ ಕೋರಿದ ನಂತರ ಸುಪ್ರೀಂ ಕೋರ್ಟ್ ಫೆಬ್ರವರಿ 13ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ಈ ಹಿಂದೆ ಸುಪ್ರೀಂ ಕೋರ್ಟ್ ಮುಂದೆ ನಡೆದ ವಿಚಾರಣೆಯ ಸಮಯದಲ್ಲಿ ಗುಜರಾತ್​​ನ ಪರ ವಕೀಲರು 11 ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿದೆ ಮತ್ತು ಇತರ 20 ಜನರಿಗೆ ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ 31 ಅಪರಾಧಿಗಳಿಗೆ ಹೈಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿತ್ತು. 11 ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. 11 ಅಪರಾಧಿಗಳಿಗೆ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವುದರ ವಿರುದ್ಧ ಗುಜರಾತ್ ಮೇಲ್ಮನವಿ ಸಲ್ಲಿಸಿದ್ದರೂ, ಹಲವಾರು ಅಪರಾಧಿಗಳು ಈ ಪ್ರಕರಣದಲ್ಲಿ ತಮ್ಮ ಶಿಕ್ಷೆಯನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Supreme Court Job: ಸುಪ್ರೀಂ ಕೋರ್ಟ್‌ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

2002ರ ಗೋಧ್ರಾ ರೈಲು ಸುಟ್ಟು ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಮುಂದಿನ ವಿಚಾರಣೆಯ ದಿನದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us