AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಪೀಠಿಕೆಯಿಂದ ‘ಜಾತ್ಯತೀತ’, ‘ಸಮಾಜವಾದ’ ಪದಗಳನ್ನು ಅಳಿಸುವಂತೆ ಕೋರಿ ಅರ್ಜಿ

"ಶೈಕ್ಷಣಿಕ ಉದ್ದೇಶಕ್ಕಾಗಿ, ಅಂಗೀಕಾರದ ದಿನಾಂಕವನ್ನು ಬದಲಾಯಿಸದೆ ನಮೂದಿಸಲಾದ ದಿನಾಂಕವನ್ನು ಹೊಂದಿರುವ ಪೀಠಿಕೆಯನ್ನು ಬದಲಾಯಿಸಬಹುದೇ. ಇಲ್ಲದಿದ್ದರೆ, ಹೌದು ಪೀಠಿಕೆಯನ್ನು ತಿದ್ದುಪಡಿ ಮಾಡಬಹುದು. ಅದರಲ್ಲಿ ಯಾವುದೇ ಸಮಸ್ಯೆ ಇಲ್ಲ" ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದತ್ತಾ ಹೇಳಿದ್ದಾರೆ

ಸಂವಿಧಾನದ ಪೀಠಿಕೆಯಿಂದ ‘ಜಾತ್ಯತೀತ’, ‘ಸಮಾಜವಾದ’ ಪದಗಳನ್ನು ಅಳಿಸುವಂತೆ ಕೋರಿ ಅರ್ಜಿ
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Feb 09, 2024 | 7:51 PM

Share

ದೆಹಲಿ ಫೆಬ್ರುವರಿ 09: ಸಂವಿಧಾನದ ಪೀಠಿಕೆಯಿಂದ (Preamble of the Constitution)’ಜಾತ್ಯತೀತ’ ಮತ್ತು ‘ಸಮಾಜವಾದ’ ಪದಗಳನ್ನು ತೆಗೆದುಹಾಕುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಶುಕ್ರವಾರ ಮುಂದೂಡಿದ್ದು ಅಂಗೀಕಾರದ ದಿನಾಂಕ ನವೆಂಬರ್ 26, 1949ವನ್ನು ಹಾಗೇ ಇಟ್ಟುಕೊಂಡು ಪೀಠಿಕೆಯನ್ನು ತಿದ್ದುಪಡಿ ಮಾಡಬಹುದೇ ಎಂದು ಪ್ರಶ್ನಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಸ್ವಾಮಿ ಮತ್ತು ವಕೀಲ ವಿಷ್ಣು ಶಂಕರ್ ಜೈನ್ ಅವರಿಗೆ ಪ್ರಶ್ನೆಯನ್ನು ಕೇಳಿತು. “ಶೈಕ್ಷಣಿಕ ಉದ್ದೇಶಕ್ಕಾಗಿ, ಅಂಗೀಕಾರದ ದಿನಾಂಕವನ್ನು ಬದಲಾಯಿಸದೆ ನಮೂದಿಸಲಾದ ದಿನಾಂಕವನ್ನು ಹೊಂದಿರುವ ಪೀಠಿಕೆಯನ್ನು ಬದಲಾಯಿಸಬಹುದೇ. ಇಲ್ಲದಿದ್ದರೆ, ಹೌದು ಪೀಠಿಕೆಯನ್ನು ತಿದ್ದುಪಡಿ ಮಾಡಬಹುದು. ಅದರಲ್ಲಿ ಯಾವುದೇ ಸಮಸ್ಯೆ ಇಲ್ಲ” ಎಂದು ನ್ಯಾಯಮೂರ್ತಿ ದತ್ತಾ ಹೇಳಿದರು.

ಸುಪ್ರೀಂಕೋರ್ಟ್ ಹೇಳಿದ್ದೇನು?

ನ್ಯಾಯಮೂರ್ತಿ ದತ್ತಾ ಅವರು, “ಬಹುಶಃ ನಾನು ನೋಡಿದ ಏಕೈಕ ಪೀಠಿಕೆಯು ದಿನಾಂಕದೊಂದಿಗೆ ಬರುತ್ತದೆ. ನಾವು ಈ ಸಂವಿಧಾನವನ್ನು ನಮಗೆ ಈ ದಿನಾಂಕದಂದು ನೀಡುತ್ತೇವೆ … ಮೂಲತಃ ಈ ಎರಡು ಪದಗಳು (ಸಮಾಜವಾದ ಮತ್ತು ಸೆಕ್ಯುಲರ್) ಇರಲಿಲ್ಲ.” ಭಾರತದ ಸಂವಿಧಾನದ ಪೀಠಿಕೆಯು ನಿರ್ದಿಷ್ಟ ದಿನಾಂಕದೊಂದಿಗೆ ಬರುತ್ತದೆ, ಆದ್ದರಿಂದ ಚರ್ಚೆಯಿಲ್ಲದೆ ಅದನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಮತ್ತೊಬ್ಬ ವಕೀಲರು ಹೇಳಿದ್ದಾರೆ.

ಸ್ವಾಮಿ ಮಧ್ಯಪ್ರವೇಶಿಸಿ, ತುರ್ತುಪರಿಸ್ಥಿತಿ (1975-77) ಅವಧಿಯಲ್ಲಿ 42ನೇ ತಿದ್ದುಪಡಿ ಕಾಯಿದೆಯನ್ನು ಅಂಗೀಕರಿಸಲಾಯಿತು ಎಂದಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಆರಂಭದಲ್ಲಿ ಸ್ವಾಮಿಗೆ, ನ್ಯಾಯಾಧೀಶರು ಬೆಳಿಗ್ಗೆಯೇ ಪ್ರಕರಣದ ಫೈಲ್‌ಗಳನ್ನು ಸ್ವೀಕರಿಸಿದ್ದಾರೆ. ಸಮಯದ ಕೊರತೆಯಿಂದಾಗಿ ಅವರು ಅವುಗಳನ್ನು ವಿಚಾರಣೆ ಮಾಡುವುದಿಲ್ಲ ಎಂದು ಹೇಳಿದರು.

ಈ ವಿಷಯದ ಬಗ್ಗೆ ವಿವರವಾದ ಚರ್ಚೆಯ ಅಗತ್ಯವಿದೆ ಎಂದು ಪೀಠ ಹೇಳಿದ್ದು ಎರಡು ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 29 ಕ್ಕೆ ಮುಂದೂಡಿತು.

ಮನವಿಯಲ್ಲಿ ಹೇಳಿದ್ದೇನು?

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 1976ರ 42ನೇ ಸಂವಿಧಾನ ತಿದ್ದುಪಡಿ ಕಾಯ್ದೆಯ ಮೂಲಕ ಪೀಠಿಕೆಯಲ್ಲಿ ಸೇರಿಸಲಾದ ಎರಡು ಪದಗಳು, 1973ರಲ್ಲಿ 13 ನ್ಯಾಯಾಧೀಶರ ಪೀಠವು ಪ್ರಸಿದ್ಧ ಕೇಶವಾನಂದ ಭಾರತಿ ತೀರ್ಪಿನಲ್ಲಿ ಪ್ರತಿಪಾದಿಸಿದ ಮೂಲ ರಚನೆಯ ಸಿದ್ಧಾಂತವನ್ನು ಉಲ್ಲಂಘಿಸಿದೆ ಎಂದು ಸ್ವಾಮಿ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ. ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವನ್ನು ಸಂವಿಧಾನದ ಮೂಲಭೂತ ಲಕ್ಷಣಗಳೊಂದಿಗೆ ತಿದ್ದುಪಡಿ ಮಾಡುವುದನ್ನು ನಿರ್ಬಂಧಿಸಲಾಗಿದೆ.

“ಸಂವಿಧಾನದ ರಚನೆಕಾರರು ಸಂವಿಧಾನದಲ್ಲಿ ಈ ಎರಡು ಪದಗಳನ್ನು ಸೇರಿಸುವುದನ್ನು ನಿರ್ದಿಷ್ಟವಾಗಿ ತಿರಸ್ಕರಿಸಿದ್ದಾರೆ. ಪ್ರಜಾಸತ್ತಾತ್ಮಕ ಆಡಳಿತದಲ್ಲಿ ಸಮಾಜವಾದ ಮತ್ತು ಜಾತ್ಯತೀತ ಪರಿಕಲ್ಪನೆಗಳನ್ನು ಪರಿಚಯಿಸಲು ಎಂದಿಗೂ ಉದ್ದೇಶಿಸದಿದ್ದರೂ ಸಹ ಈ ಎರಡು ಪದಗಳನ್ನು ನಾಗರಿಕರ ಮೇಲೆ ಹೇರಲಾಗಿದೆ ಎಂದು ಆರೋಪಿಸಿದ್ದಾರೆ” ಎಂದು ಸ್ವಾಮಿ ಹೇಳಿದ್ದಾರೆ. ಎರಡು ಪದಗಳ ಅಳವಡಿಕೆಯು ಆರ್ಟಿಕಲ್ 368 ರ ಅಡಿಯಲ್ಲಿ ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದೆ ಎಂದು ವಾದಿಸಲಾಯಿತು.

ಸಂವಿಧಾನವು ನಾಗರಿಕರ ಆಯ್ಕೆಯ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಕೆಲವು ರಾಜಕೀಯ ಸಿದ್ಧಾಂತಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲದ ಕಾರಣ ಡಾ ಬಿಆರ್ ಅಂಬೇಡ್ಕರ್ ಅಂತಹ ಪದಗಳ ಸೇರ್ಪಡೆಯನ್ನು ತಿರಸ್ಕರಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಆ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಬೇಕು: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಅಧಿಕಾರಿ ವಿರುದ್ಧ ಗುಡುಗಿದ ಸುಪ್ರೀಂಕೋರ್ಟ್ 

ಪ್ರಕರಣದ ಹಿನ್ನೆಲೆ

ಸೆಪ್ಟೆಂಬರ್ 2, 2022 ರಂದು, ಸುಪ್ರೀಂ ಕೋರ್ಟ್ ಸ್ವಾಮಿಯ ಮನವಿಯನ್ನು ಮತ್ತೊಂದು ಬಾಕಿ ಉಳಿದಿರುವ ವಿಷಯದೊಂದಿಗೆ ಟ್ಯಾಗ್ ಮಾಡಿತ್ತು.ಇದನ್ನು ವಿಚಾರಣೆಗಾಗಿ ಬಲರಾಮ್ ಸಿಂಗ್ ಮತ್ತು ಇತರರು ಸಲ್ಲಿಸಿದ್ದರು. ಸ್ವಾಮಿ ಮತ್ತು ಸಿಂಗ್ ಇಬ್ಬರೂ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆದುಹಾಕಲು ಪ್ರಯತ್ನಿಸಿದರು. 1976 ರಲ್ಲಿ ಇಂದಿರಾ ಗಾಂಧಿ ಸರ್ಕಾರವು ಮಂಡಿಸಿದ 42 ನೇ ಸಾಂವಿಧಾನಿಕ ತಿದ್ದುಪಡಿಯ ಅಡಿಯಲ್ಲಿ ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ಸೇರಿಸಲಾಯಿತು.

ತಿದ್ದುಪಡಿಯು ಪೀಠಿಕೆಯಲ್ಲಿನ ಭಾರತದ ವಿವರಣೆಯನ್ನು “ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ” ದಿಂದ “ಸಾರ್ವಭೌಮ, ಸಮಾಜವಾದ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣರಾಜ್ಯ” ಎಂದು ಬದಲಾಯಿಸಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ