AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi surname case: ಇಂದು ಸುಪ್ರೀಂಕೋರ್ಟ್​ನಲ್ಲಿ ರಾಹುಲ್​​​​ ಗಾಂಧಿ ಅರ್ಜಿ ವಿಚಾರಣೆ, ಎಲ್ಲರ ಚಿತ್ತ ಕೋರ್ಟ್​ನತ್ತ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್​​​​ ಗಾಂಧಿ ಭವಿಷ್ಯ ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ ನೆಟ್ಟಿದೆ.

Modi surname case: ಇಂದು ಸುಪ್ರೀಂಕೋರ್ಟ್​ನಲ್ಲಿ ರಾಹುಲ್​​​​ ಗಾಂಧಿ ಅರ್ಜಿ ವಿಚಾರಣೆ, ಎಲ್ಲರ ಚಿತ್ತ ಕೋರ್ಟ್​ನತ್ತ
ರಾಹುಲ್ ಗಾಂಧಿImage Credit source: Hindustan Times
ರಮೇಶ್ ಬಿ. ಜವಳಗೇರಾ
|

Updated on: Jul 21, 2023 | 7:08 AM

Share

ನವದೆಹಲಿ, (ಜುಲೈ 21): ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್​ನಲ್ಲಿ(Supreme Court) ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್​​​​ ಗಾಂಧಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್​ ನ್ಯಾಯಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂಕೋರ್ಟ್ ಜುಲೈ 21ರಂದು ವಿಚಾರಣೆ ನಡೆಸಲಾಗುವುದು ಎಂದು ದಿನಾಂ ನಿಗದಿ ಮಾಡಿತ್ತು. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದು. ಆದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​​ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್​ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್​ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಜತೆಗೆ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಅಭಿಷೇಕ್ ಮನು ಸಿಂಘ್ವಿ ಸಹ ಮನವಿ ಮಾಡಿಕೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ