AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಿಎಸ್​ವೈ, ಡಿಕೆಶಿಗೆ ‘ಬೆನ್ನಿಗಾನಹಳ್ಳಿ’ ಕಂಟಕ, ಸುಪ್ರೀಂಕೋರ್ಟ್​ನಲ್ಲಿಂದು ಮೇಲ್ಮನವಿ ಅರ್ಜಿ ವಿಚಾರಣೆ

ದೆಹಲಿ: ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಇಬ್ಬರು ರಾಜಕೀಯ ವೈರಿಗಳನ್ನು ಒಂದಾಗುವಂತೆ ಮಾಡಿದೆ.‌ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಯಡಿಯೂರಪ್ಪ ಬೆನ್ನಿಗಾನಹಳ್ಳಿ ಬಳಿ 4.20 ಎಕರೆ ಜಮೀನು ಡಿನೋಟಿಫೈ ಮಾಡಿ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್​ಗೆ ಸಹಾಯವಾಗುವಂತೆ ಮಾಡಿದ್ರು. ಆದ್ರೀಗ ಇದೇ ಡಿನೋಟಿಫೈ ಕೇಸ್ ಒಳಸುಳಿಗೆ ಸಿಲುಕಿ ಇಬ್ಬರು ನಾಯಕರು ನಲುಗುತ್ತಿದ್ದಾರೆ. ಅಕ್ರಮ ಡಿನೋಟಿಫಿಕೇಷನ್ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಹಾಗೂ ಡಿ.ಕೆ‌.ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.‌ ಸಾಮಾಜಿಕ‌ ಹೋರಾಟಗಾರ ಕಬ್ಬಾಳೆಗೌಡ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ. […]

ಸಿಎಂ ಬಿಎಸ್​ವೈ, ಡಿಕೆಶಿಗೆ ‘ಬೆನ್ನಿಗಾನಹಳ್ಳಿ’ ಕಂಟಕ, ಸುಪ್ರೀಂಕೋರ್ಟ್​ನಲ್ಲಿಂದು ಮೇಲ್ಮನವಿ ಅರ್ಜಿ ವಿಚಾರಣೆ
ಸಾಧು ಶ್ರೀನಾಥ್​
|

Updated on: Jan 07, 2020 | 6:56 AM

Share

ದೆಹಲಿ: ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಇಬ್ಬರು ರಾಜಕೀಯ ವೈರಿಗಳನ್ನು ಒಂದಾಗುವಂತೆ ಮಾಡಿದೆ.‌ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಯಡಿಯೂರಪ್ಪ ಬೆನ್ನಿಗಾನಹಳ್ಳಿ ಬಳಿ 4.20 ಎಕರೆ ಜಮೀನು ಡಿನೋಟಿಫೈ ಮಾಡಿ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್​ಗೆ ಸಹಾಯವಾಗುವಂತೆ ಮಾಡಿದ್ರು. ಆದ್ರೀಗ ಇದೇ ಡಿನೋಟಿಫೈ ಕೇಸ್ ಒಳಸುಳಿಗೆ ಸಿಲುಕಿ ಇಬ್ಬರು ನಾಯಕರು ನಲುಗುತ್ತಿದ್ದಾರೆ. ಅಕ್ರಮ ಡಿನೋಟಿಫಿಕೇಷನ್ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಹಾಗೂ ಡಿ.ಕೆ‌.ಶಿವಕುಮಾರ್ ವಿರುದ್ಧ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.‌ ಸಾಮಾಜಿಕ‌ ಹೋರಾಟಗಾರ ಕಬ್ಬಾಳೆಗೌಡ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ.

ಇಂದು ‘ಸುಪ್ರೀಂ’ ವಿಚಾರಣೆ: ಸುಪ್ರೀಂಕೋರ್ಟ್​ನಲ್ಲಿ ಮುಂದುವರಿದ ವಿಚಾರಣೆ ನಡೆಯಲಿದೆ. ಸಮಾಜಪರಿವರ್ತನ ಸಮುದಾಯದ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಾಡ್ತಿದ್ದಾರೆ. ಇತ್ತ ಯಡಿಯೂರಪ್ಪ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಪ್ರತಿವಾದ ಮಾಡ್ತಿದ್ದಾರೆ. ಡಿ.ಕೆ ಶಿವಕುಮಾರ್ ಪರವೂ ಮುಕುಲ್ ರೋಹಟಗಿ ವಾದ ಮಾಡುವ ಸಾಧ್ಯತೆ ಇದೆ. ಇಲ್ಲದಿದ್ರೆ ಡಿಕೆಶಿ ಪರ ಹಿರಿಯ ವಕೀಲರಾದ ಕಿಪಿಲ್ ಸಿಬಲ್‌ ಅಥವಾ ಅಭಿಷೇಕ್ ಮನುಸಿಂಘ್ವಿ ಪ್ರತಿವಾದ ಮಾಡಲಿದ್ದಾರೆ.

ನಿರಾಳರಾಗಿದ್ದ ಬಿಎಸ್​ವೈ, ಡಿಕೆಶಿಗೆ ಮತ್ತೆ ಟ್ರಬಲ್? ಬೆನ್ನಿಗಾನಹಳ್ಳಿ ಡಿನೋಟಿಪೀಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬಾಳೆಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ರು. ಕಳೆದ ವರ್ಷ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಾಪಸ್ ಪಡೆದು ಕಬ್ಬಾಳೆಗೌಡ ಅಚ್ಚರಿ ಮೂಡಿಸಿದ್ರು. ಆದ್ರೆ, ಕಬ್ಬಾಳೆಗೌಡ ಅರ್ಜಿ ವಾಪಸ್ ಪಡೆದ ಬಳಿಕ, ಅರ್ಜಿ ವಾಪಸ್ ಪಡೆದುದ್ದನ್ನು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.‌ ಡಿ.ಕೆ.ಶಿವಕುಮಾರ್ ಯಡಿಯೂರಪ್ಪ ವಿರುದ್ಧದ ಅರ್ಜಿಯನ್ನು ನಾವು ಮುಂದುವರೆಸುತ್ತೇವೆ ಅಂತಾ ಸುಪ್ರೀಂಕೋರ್ಟ್​ನಲ್ಲಿ ಕೇಳಿಕೊಂಡಿದ್ರು. ಹೀಗಾಗಿ, ಸುಪ್ರೀಂಕೋರ್ಟ್ ವಿಚಾರಣೆ ಮುಂದುವರೆಸಲು ಅವಕಾಶ ನೀಡಿತ್ತು. ಈಗ ಮತ್ತೆ ಇಬ್ಬರು ನಾಯಕರಿಗೆ ಟ್ರಬಲ್ ಶುರುವಾಗಿದೆ.

ಒಟ್ನಲ್ಲಿ, ಒಂದು ಡಿನೋಟಿಫಿಕೇಷನ್ ಕೇಸ್ ಇಬ್ಬರು ರಾಜಕೀಯ ವೈರಿಗಳನ್ನು ಒಂದಾಗುವಂತೆ ಮಾಡಿತ್ತು. ಆದ್ರೀಗ ಇದೇ ಕೇಸ್​ನಿಂದ ಬಿಎಸ್​ವೈ ಮತ್ತು ಡಿಕೆಶಿಗೆ ಕಂಟಕ ಶುರುವಾಗಿದೆ. ಹೀಗಾಗಿ, ಸುಪ್ರೀಂಕೋರ್ಟ್​ನಲ್ಲಿ ಒಟ್ಟಾಗಿ ಹೋರಾಟ ಮಾಡ್ತಿದ್ದಾರೆ.

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!