AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Demonetisation ನೋಟು ಅಮಾನ್ಯೀಕರಣ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್; ನವೆಂಬರ್ 9ಕ್ಕೆ ವಿಚಾರಣೆ

ಸರ್ಕಾರದ ನೀತಿ ನಿರ್ಧಾರಗಳ ನ್ಯಾಯಾಂಗ ಪರಾಮರ್ಶೆಯಲ್ಲಿ "ಲಕ್ಷ್ಮಣ ರೇಖೆ" ಬಗ್ಗೆ ತಿಳಿದಿದೆ. ಆದರೆ ಈ ವಿಷಯವು ಕೇವಲ ತಾತ್ವಿಕ ಪ್ರಕ್ರಿಯೆಯೇ ಎಂದು ನಿರ್ಧರಿಸಲು 2016 ರ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಪರಿಶೀಲಿಸಬೇಕು ಎಂದು ಪೀಠ ಹೇಳಿದೆ.

Demonetisation ನೋಟು ಅಮಾನ್ಯೀಕರಣ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ ಸುಪ್ರೀಂಕೋರ್ಟ್; ನವೆಂಬರ್ 9ಕ್ಕೆ ವಿಚಾರಣೆ
ಸುಪ್ರೀಂಕೋರ್ಟ್
TV9 Web
| Edited By: |

Updated on:Oct 12, 2022 | 6:26 PM

Share

2016 ರಲ್ಲಿ ನರೇಂದ್ರ ಮೋದಿ ಸರ್ಕಾರವು ನಡೆಸಿದ ನೋಟು ಅಮಾನ್ಯೀಕರಣದ ನಿರ್ಧಾರ ತೆಗೆದುಕೊಂಡ ಪ್ರಕ್ರಿಯೆಯನ್ನು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್ ಬುಧವಾರ ಹೇಳಿದೆ. ಅದೇ ವೇಳೆ  ವಿವರವಾದ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ಕೇಂದ್ರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್​​ಗೆ  ಸುಪ್ರೀಂಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎಸ್‌ಎ ನಜೀರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಮುಂದಿನ ನವೆಂಬರ್ 9 ರಂದು ಪ್ರಕರಣದ ವಿಚಾರಣೆ ನಡೆಸಲಿದೆ. ಸಾಂವಿಧಾನಿಕ ಪೀಠದ ಮುಂದೆ ಸಮಸ್ಯೆ ಉದ್ಭವಿಸಿದಾಗ ಉತ್ತರಿಸುವುದು ಅದರ ಕರ್ತವ್ಯ ಎಂದು ಪೀಠ ಹೇಳಿದೆ. ಸರ್ಕಾರದ ನೀತಿ ನಿರ್ಧಾರಗಳ ನ್ಯಾಯಾಂಗ ಪರಾಮರ್ಶೆಯಲ್ಲಿ “ಲಕ್ಷ್ಮಣ ರೇಖೆ” ಬಗ್ಗೆ ತಿಳಿದಿದೆ. ಆದರೆ ಈ ವಿಷಯವು ಕೇವಲ ತಾತ್ವಿಕ ಪ್ರಕ್ರಿಯೆಯೇ ಎಂದು ನಿರ್ಧರಿಸಲು 2016 ರ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಪರಿಶೀಲಿಸಬೇಕು ಎಂದು ಪೀಠ ಹೇಳಿದೆ. ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮಾತನಾಡಿ, 1978ರಲ್ಲಿ ಜಾರಿಗೆ ಬಂದಿರುವ ಅಧಿಕ ಮುಖಬೆಲೆಯ ಬ್ಯಾಂಕ್ ನೋಟುಗಳ (ಡಿಮಾನಿಟೈಸೇಶನ್) ಕಾಯಿದೆಯನ್ನು ಸರಿಯಾದ ದೃಷ್ಟಿಕೋನದಲ್ಲಿ ಪ್ರಶ್ನಿಸದ ಹೊರತು, ಸಮಸ್ಯೆ ಹಾಗೇ ಉಳಿಯುತ್ತದೆ ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಎಎಸ್ ಬೋಪಣ್ಣ, ವಿ ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಎಸ್‌ಸಿ ಪೀಠವು, ಪ್ರಕ್ರಿಯೆ ತಾತ್ವಿಕ ಆಗಿದೆಯೇ ಅಥವಾ ನಿರುಪಯುಕ್ತವಾಗಿದೆಯೇ ಎಂದು ಘೋಷಿಸಲು, ಎರಡೂ ಕಡೆಯವರು ಒಪ್ಪದ ಕಾರಣ ವಿಷಯವನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಿದರು.

ಲಕ್ಷ್ಮಣ ರೇಖೆ ಎಲ್ಲಿದೆ ಎಂದು ನಮಗೆ ಯಾವಾಗಲೂ ತಿಳಿದಿದೆ. ಆದರೆ ಅದನ್ನು ಮಾಡಿದ ವಿಧಾನವನ್ನು ಪರಿಶೀಲಿಸಬೇಕು. ಅದನ್ನು ನಿರ್ಧರಿಸಲು ನಾವು ವಕೀಲರನ್ನು ಕೇಳಬೇಕು ಎಂದು ಪೀಠ ಹೇಳಿದೆ.

ಸರ್ಕಾರ ₹ 500 ಮತ್ತು ₹ 1,000 ನೋಟುಗಳನ್ನು ರದ್ದುಗೊಳಿಸಿದಾಗ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್  ಇಂದು (ಅಕ್ಟೋಬರ್ 12 ರಂದು) ವಿಚಾರಣೆ ನಡೆಸಿದೆ. ಒಂದು ಕಕ್ಷಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ ಚಿದಂಬರಂ, ಈ ವಿಚಾರವು ತಾತ್ವಿಕ ಅಲ್ಲ ಮತ್ತು ಇದನ್ನು ಉನ್ನತ ನ್ಯಾಯಾಲಯವು ನಿರ್ಧರಿಸಬೇಕು. ಈ ರೀತಿಯ ನೋಟು ಅಮಾನ್ಯೀಕರಣಕ್ಕೆ ಸಂಸತ್ತಿನ ಪ್ರತ್ಯೇಕ ಕಾಯಿದೆಯ ಅಗತ್ಯವಿದೆ ಎಂದರು.

Published On - 5:49 pm, Wed, 12 October 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್