Sign In

By signing in or creating an account, you agree with Associated Broadcasting Company's Terms & Conditions and Privacy Policy.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 07, 2022 | 11:22 AM

ದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections – EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು. ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ  ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್​ಸಿ), ಪರಿಶಿಷ್ಟ ವರ್ಗ (ಎಸ್​ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.

ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನ 8) ನಿವೃತ್ತರಾಗಲಿದ್ದಾರೆ.

Published On - 11:10 am, Mon, 7 November 22

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ