AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
TV9 Web
| Edited By: |

Updated on:Nov 07, 2022 | 11:22 AM

Share

ದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections – EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು. ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ  ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್​ಸಿ), ಪರಿಶಿಷ್ಟ ವರ್ಗ (ಎಸ್​ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.

ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನ 8) ನಿವೃತ್ತರಾಗಲಿದ್ದಾರೆ.

Published On - 11:10 am, Mon, 7 November 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ