AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
TV9 Web
| Edited By: |

Updated on:Nov 07, 2022 | 11:22 AM

Share

ದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections – EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು. ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ  ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್​ಸಿ), ಪರಿಶಿಷ್ಟ ವರ್ಗ (ಎಸ್​ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.

ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನ 8) ನಿವೃತ್ತರಾಗಲಿದ್ದಾರೆ.

Published On - 11:10 am, Mon, 7 November 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ