ಆಯುಧದ ಮೇಲಿನ ರಕ್ತದ ಜೊತೆ ಕೊಲೆಯಾದ ವ್ಯಕ್ತಿಯ ರಕ್ತ ಹೊಂದಿಕೆಯಾದರೆ ಶಿಕ್ಷೆ ನೀಡಲಾಗದು; ಸುಪ್ರೀಂ ಕೋರ್ಟ್ ತೀರ್ಪು

ಕೊಲೆಯಾದ ವ್ಯಕ್ತಿಯ ರಕ್ತದ ಜೊತೆ ಆರೋಪಿಯಿಂದ ವಶಕ್ಕೆ ಪಡೆಯಲಾದ ಆಯುಧದ ಮೇಲಿನ ರಕ್ತದ ಗುಂಪು ಹೊಂದಾಣಿಕೆಯಾಗಿದೆ ಎಂದ ಮಾತ್ರಕ್ಕೆ ಆತನ ಮೇಲಿನ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ. ಅದು ಕೊಲೆ ಶಿಕ್ಷೆಗೆ ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೊಲೆ ಆರೋಪಿಯ ಖುಲಾಸೆಯನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಆಗ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಯುಧದ ಮೇಲಿನ ರಕ್ತದ ಜೊತೆ ಕೊಲೆಯಾದ ವ್ಯಕ್ತಿಯ ರಕ್ತ ಹೊಂದಿಕೆಯಾದರೆ ಶಿಕ್ಷೆ ನೀಡಲಾಗದು; ಸುಪ್ರೀಂ ಕೋರ್ಟ್ ತೀರ್ಪು
Verdict

Updated on: Jun 27, 2025 | 5:13 PM

ನವದೆಹಲಿ, ಜೂನ್ 27: ರಾಜಸ್ಥಾನದಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್ (High Court) ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಕೊಲೆ ಮಾಡಿದ ಆಯುಧದಲ್ಲಿ ಕಂಡುಬಂದ ರಕ್ತವು ಮೃತ ವ್ಯಕ್ತಿಯ ರಕ್ತದ ಗುಂಪಿಗೆ ಹೊಂದಿಕೆಯಾಗಿದೆ ಎಂಬುದು ಮಾತ್ರ ಆ ಆರೋಪವನ್ನು ಸಾಬೀತುಪಡಿಸಲು ಸಾಕ್ಷಿಯಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ (Supreme Court) ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರ ಪೀಠವು ಮೇ 15, 2015ರಂದು ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ. ಈ ತೀರ್ಪಿನಲ್ಲಿ ಆರೋಪಿಯ ಮೇಲೆ ವಿಚಾರಣಾ ನ್ಯಾಯಾಲಯ ವಿಧಿಸಿದ ಅಪರಾಧ ಮತ್ತು ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು. ವಿಚಾರಣಾ ನ್ಯಾಯಾಲಯವು ಡಿಸೆಂಬರ್ 10, 2008ರಂದು ಐಪಿಸಿಯ ಸೆಕ್ಷನ್ 302ರ ಅಡಿಯಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ಮತ್ತು 100 ರೂ. ದಂಡ ವಿಧಿಸಿತ್ತು.

ಆ ಕೊಲೆ ಆರೋಪಿಯ ಖುಲಾಸೆಯನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ಈ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಆಯುಧದ ಮೇಲಿನ ರಕ್ತದೊಂದಿಗೆ ಮೃತ ವ್ಯಕ್ತಿಯ ರಕ್ತದ ಗುಂಪನ್ನು ಹೊಂದಾಣಿಕೆಯಾಗುವುದು ಕೊಲೆ ಆರೋಪದಲ್ಲಿ ವ್ಯಕ್ತಿಯನ್ನು ಶಿಕ್ಷಿಸಲು ಸಾಕಷ್ಟು ಪುರಾವೆಯಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರ ಪೀಠವು ಮೇ 15, 2015ರಂದು ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿದಿದ್ದು, ವಿಚಾರಣಾ ನ್ಯಾಯಾಲಯವು ಆರೋಪಿಗಳಿಗೆ ವಿಧಿಸಿದ್ದ ಅಪರಾಧ ಮತ್ತು ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದೆ. ರಾಜ ನಾಯಕ್ vs ಛತ್ತೀಸ್‌ಗಢ ರಾಜ್ಯ ಪ್ರಕರಣದ ಆಧಾರದ ಮೇಲೆ ಈ ತೀರ್ಪು ನೀಡಲಾಗಿದೆ. ಅದಕ್ಕಾಗಿಯೇ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ.

ಇದನ್ನೂ ಓದಿ: ಕೋಟಾದಲ್ಲಿ ಮಾತ್ರ ಏಕೆ ಸಾಯುತ್ತಿದ್ದಾರೆ?; ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ರಾಜಸ್ಥಾನ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡುವಾಗ, ನಾವು ಎಫ್‌ಎಸ್‌ಎಲ್ ವರದಿಯನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇವೆ. ಆದರೆ ಅದು ಯಾರನ್ನಾದರೂ ಶಿಕ್ಷೆಗೆ ಒಳಪಡಿಸಲು ಸಾಕಷ್ಟು ಪುರಾವೆಯಾಗುವುದಿಲ್ಲ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡುವಾಗ, ರಾಜಾ ನಾಯ್ಕರ್ vs ಛತ್ತೀಸ್‌ಗಢ ಪ್ರಕರಣವನ್ನು ಉಲ್ಲೇಖಿಸಿತು. ಅದು ಮೃತ ವ್ಯಕ್ತಿಯ ರಕ್ತದ ಗುಂಪಿಗೆ ಹೊಂದಿಕೆಯಾಗುವ ರಕ್ತದ ಕಲೆಗಳಿರುವ ಆಯುಧವನ್ನು ವಶಪಡಿಸಿಕೊಂಡ ಮಾತ್ರಕ್ಕೆ ಆ ವ್ಯಕ್ತಿಯನ್ನು ಕೊಲೆ ಆರೋಪಕ್ಕೆ ಶಿಕ್ಷೆಗೆ ಒಳಪಡಿಸಲು ಸಾಕಾಗುವುದಿಲ್ಲ ಎಂದು ಹೇಳಿದೆ.

 

ಕೆಳ ನ್ಯಾಯಾಲಯದಿಂದ ಶಿಕ್ಷೆ ಪಡೆದ ನಂತರ ಆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಆರೋಪಿ ಭಾವಿಸಿದರೆ ಮೇಲ್ಮನವಿ ಸಲ್ಲಿಸಬಹುದು. ಈ ಸಾಕ್ಷ್ಯಗಳ ಆಧಾರದ ಮೇಲೆ ಅವನನ್ನು ಶಿಕ್ಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದಲ್ಲೂ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನ್ಯಾಯಾಲಯ ಒಪ್ಪಿಕೊಂಡಿದೆ. ಇದೇ ಕಾರಣಕ್ಕೆ ಆರೋಪಿಯನ್ನು ಖುಲಾಸೆಗೊಳಿಸಲಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರು ಅರಮನೆ ಜಮೀನು ವಿವಾದ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್

ಏನಿದು ಪ್ರಕರಣ?:

ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಪ್ರಕರಣವು 2008ರದ್ದಾಗಿದೆ. ಪ್ರತಿವಾದಿ ಎಂದರೆ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ವ್ಯಕ್ತಿ ಮತ್ತು ಆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ವ್ಯಕ್ತಿ. ಡಿಸೆಂಬರ್ 10, 2008ರಂದು ಐಪಿಸಿಯ ಸೆಕ್ಷನ್ 302 ರ ಅಡಿಯಲ್ಲಿ ಆ ಪ್ರತಿವಾದಿ ಅಪರಾಧಿ ಎಂದು ಸಾಬೀತಾಯಿತು. ಆತನಿಗೆ 100 ರೂ. ದಂಡದೊಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಈ ಪ್ರಕರಣವು 2007ರ ಮಾರ್ಚ್ 1 ಮತ್ತು 2ರ ಮಧ್ಯರಾತ್ರಿ ನಡೆದ ಛೋಟು ಲಾಲ್ ಎಂಬ ವ್ಯಕ್ತಿಯ ಕೊಲೆಗೆ ಸಂಬಂಧಿಸಿದೆ. ಆರಂಭದಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಅನುಮಾನ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ದೋಷಾರೋಪಣೆಗೆ ಒಳಪಡಿಸಲಾಯಿತು. ಆರೋಪಿಯು ಮೃತರ ಪತ್ನಿಯನ್ನು ಪಡೆಯಲು ಆಸೆಪಟ್ಟಿದ್ದ ಎಂಬ ಆರೋಪದ ಮೇಲೆ ಆತನಿಂದ ಕೊಲೆಯ ಆಯುಧದ ವಶಪಡಿಸಿಕೊಳ್ಳುವಿಕೆ ಮತ್ತು ಆಯುಧದಲ್ಲಿನ ರಕ್ತದ ಗುಂಪು ಮೃತರ ರಕ್ತದ ಗುಂಪು (ಬಿ+ವಿ)ಗೆ ಹೊಂದಿಕೆಯಾಗುತ್ತದೆ ಎಂದು ತೋರಿಸಿದ ಎಫ್‌ಎಸ್‌ಎಲ್ ವರದಿಯನ್ನು ಪ್ರಾಸಿಕ್ಯೂಷನ್ ಅವಲಂಬಿಸಿತ್ತು. ಇದರ ಆಧಾರದಲ್ಲಿ ಆತನಿಗೆ ಶಿಕ್ಷೆ ನೀಡಲಾಗಿತ್ತು. ಅದೇ ಶಿಕ್ಷೆಯನ್ನು ಪ್ರಶ್ನಿಸಿದ್ದ ಆರೋಪಿಗೆ ಮೊದಲು ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿತ್ತು. ನಂತರ ಈಗ ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us