AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ವರ್ಷ ನಂತರ ‘ಅನಂತ’ ಸಂಪತ್ತಿನ ದೇಗುಲ ವಿವಾದ ಇತ್ಯರ್ಥ, ಸುಪ್ರೀಂ ಆದೇಶ ಏನು?

ಅನಂತಪದ್ಮನಾಭ ದೇಗುಲದಲ್ಲಿ ತಿರುವಾಂಕೂರು ರಾಜಮನೆತನಕ್ಕೆ ಸಭಾಹಿತ ಅಧಿಕಾರ ಅಂದ್ರೆ ಪೂಜೆ ನಡೆಸುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯೇ ಇನ್ನು ಮುಂದೆಯೂ ದೇವಾಲಯದ ಆಡಳಿತ ನೋಡಿಕೊಳ್ಳುತ್ತೆ ಎಂದು ಅನಂತಪದ್ಮನಾಭ ದೇಗುಲ ಬಗ್ಗೆ ಸುಪ್ರೀಂಕೋರ್ಟ್ ಇದೀಗತಾನೆ ಆದೇಶ ನೀಡಿದೆ. ದೇವಾಲಯಕ್ಕೆ ಆಡಳಿತಾತ್ಮಕ ಸಮಿತಿ ರಚಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್, ತಿರುವನಂತಪುರಂ ಜಿಲ್ಲಾಧಿಕಾರಿ ಸಮಿತಿಗೆ ಅಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದೆ. 2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ ದೇಗುಲದಲ್ಲಿ […]

9 ವರ್ಷ ನಂತರ ‘ಅನಂತ’ ಸಂಪತ್ತಿನ ದೇಗುಲ ವಿವಾದ ಇತ್ಯರ್ಥ, ಸುಪ್ರೀಂ ಆದೇಶ ಏನು?
ಸಾಧು ಶ್ರೀನಾಥ್​
|

Updated on:Jul 13, 2020 | 12:48 PM

Share

ಅನಂತಪದ್ಮನಾಭ ದೇಗುಲದಲ್ಲಿ ತಿರುವಾಂಕೂರು ರಾಜಮನೆತನಕ್ಕೆ ಸಭಾಹಿತ ಅಧಿಕಾರ ಅಂದ್ರೆ ಪೂಜೆ ನಡೆಸುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯೇ ಇನ್ನು ಮುಂದೆಯೂ ದೇವಾಲಯದ ಆಡಳಿತ ನೋಡಿಕೊಳ್ಳುತ್ತೆ ಎಂದು ಅನಂತಪದ್ಮನಾಭ ದೇಗುಲ ಬಗ್ಗೆ ಸುಪ್ರೀಂಕೋರ್ಟ್ ಇದೀಗತಾನೆ ಆದೇಶ ನೀಡಿದೆ.

ದೇವಾಲಯಕ್ಕೆ ಆಡಳಿತಾತ್ಮಕ ಸಮಿತಿ ರಚಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್, ತಿರುವನಂತಪುರಂ ಜಿಲ್ಲಾಧಿಕಾರಿ ಸಮಿತಿಗೆ ಅಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದೆ.

2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ ದೇಗುಲದಲ್ಲಿ ಅಗಾಧ ಪ್ರಮಾಣದ ಅತ್ಯಮೂಲ್ಯ ಸಂಪತ್ತು ಬಹಿರಂಗವಾಗಿತ್ತು. ಅದಾದ ಬಳಿಕ ‘ಅನಂತ’ ಸಂಪತ್ತಿನ ದೇಗುಲ ಯಾರಿಗೆ ಸೇರಬೇಕು ಎಂಬುದು ವಿವಾದದ ಗೂಡಾಗಿತ್ತು.

ಇನ್ನೂ ಓಪನ್ ಆಗಿಲ್ಲ ಒಂದು ಕೊಠಡಿ ತಿರುವನಂತಪುರದ ಅನಂತ ಪದ್ಮನಾಭ ಸ್ವಾಮಿ ದೇಗುಲದಲ್ಲಿ 5 ಕೊಠಡಿಗಳಲ್ಲಿ 1 ಲಕ್ಷ ಕೋಟಿ ರೂ ಮೌಲ್ಯದ ಪುರಾತನ ಚಿನ್ನ ಬೆಳ್ಳಿ ವಜ್ರ ವೈಢೂರ್ಯ ಸಂಪತ್ತು ಪತ್ತೆಯಾಗಿತ್ತು. ಆದ್ರೆ ಇನ್ನೂ ಒಂದು ಕೊಠಡಿಯ ದ್ವಾರವನ್ನು ಇನ್ನೂ ತೆಗೆದು ಸಂಪತ್ತಿನ ಮೌಲ್ಯಮಾಪನ ನಡೆದಿಲ್ಲ. ಸುಪ್ರೀಂಕೋರ್ಟ್ ಅದಕ್ಕೆ ಈ ಹಿಂದೆ ತಡೆ ನೀಡಿದೆ.

2009ರಲ್ಲಿ ಮಾಜಿ IPS ಅಧಿಕಾರಿ ಟಿಪಿ ಸುಂದರರಾಜನ್ ಎಂಬುವವರು ಕೇರಳ ಹೈಕೋರ್ಟ್​ಗೆ ಮನವಿ ಸಲ್ಲಿಸಿ, ಅನಂತ ಪದ್ಮನಾಭ ಸ್ವಾಮಿ ದೇಗುಲದ ಮಾಲೀಕತ್ವವವನ್ನು ತಿರುವಾಂಕೂರು ರಾಜಮನೆತನದಿಂದ ವಾಪಸ್ ಪಡೆದು, ಕೇರಳ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕೋರಿದ್ದರು. ಮಾಲೀಕತ್ವ ಮತ್ತು ಪೂಜೆ ಸಂಬಂಧ 1949ರಲ್ಲಿ ಭಾರತ ಸರ್ಕಾರ ಮತ್ತು ತಿರುವಾಂಕೂರು ರಾಜಮನೆತನ ಮಧ್ಯೆ ಒಪ್ಪಂದ ಏರ್ಪಟ್ಟಿದೆ.

Published On - 11:00 am, Mon, 13 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ