AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ವರ್ಷ ನಂತರ ‘ಅನಂತ’ ಸಂಪತ್ತಿನ ದೇಗುಲ ವಿವಾದ ಇತ್ಯರ್ಥ, ಸುಪ್ರೀಂ ಆದೇಶ ಏನು?

ಅನಂತಪದ್ಮನಾಭ ದೇಗುಲದಲ್ಲಿ ತಿರುವಾಂಕೂರು ರಾಜಮನೆತನಕ್ಕೆ ಸಭಾಹಿತ ಅಧಿಕಾರ ಅಂದ್ರೆ ಪೂಜೆ ನಡೆಸುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯೇ ಇನ್ನು ಮುಂದೆಯೂ ದೇವಾಲಯದ ಆಡಳಿತ ನೋಡಿಕೊಳ್ಳುತ್ತೆ ಎಂದು ಅನಂತಪದ್ಮನಾಭ ದೇಗುಲ ಬಗ್ಗೆ ಸುಪ್ರೀಂಕೋರ್ಟ್ ಇದೀಗತಾನೆ ಆದೇಶ ನೀಡಿದೆ. ದೇವಾಲಯಕ್ಕೆ ಆಡಳಿತಾತ್ಮಕ ಸಮಿತಿ ರಚಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್, ತಿರುವನಂತಪುರಂ ಜಿಲ್ಲಾಧಿಕಾರಿ ಸಮಿತಿಗೆ ಅಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದೆ. 2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ ದೇಗುಲದಲ್ಲಿ […]

9 ವರ್ಷ ನಂತರ ‘ಅನಂತ’ ಸಂಪತ್ತಿನ ದೇಗುಲ ವಿವಾದ ಇತ್ಯರ್ಥ, ಸುಪ್ರೀಂ ಆದೇಶ ಏನು?
ಸಾಧು ಶ್ರೀನಾಥ್​
|

Updated on:Jul 13, 2020 | 12:48 PM

Share

ಅನಂತಪದ್ಮನಾಭ ದೇಗುಲದಲ್ಲಿ ತಿರುವಾಂಕೂರು ರಾಜಮನೆತನಕ್ಕೆ ಸಭಾಹಿತ ಅಧಿಕಾರ ಅಂದ್ರೆ ಪೂಜೆ ನಡೆಸುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿಯೇ ಇನ್ನು ಮುಂದೆಯೂ ದೇವಾಲಯದ ಆಡಳಿತ ನೋಡಿಕೊಳ್ಳುತ್ತೆ ಎಂದು ಅನಂತಪದ್ಮನಾಭ ದೇಗುಲ ಬಗ್ಗೆ ಸುಪ್ರೀಂಕೋರ್ಟ್ ಇದೀಗತಾನೆ ಆದೇಶ ನೀಡಿದೆ.

ದೇವಾಲಯಕ್ಕೆ ಆಡಳಿತಾತ್ಮಕ ಸಮಿತಿ ರಚಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್, ತಿರುವನಂತಪುರಂ ಜಿಲ್ಲಾಧಿಕಾರಿ ಸಮಿತಿಗೆ ಅಧ್ಯಕ್ಷರಾಗಿರುತ್ತಾರೆ ಎಂದು ತಿಳಿಸಿದೆ.

2009ರಲ್ಲಿ ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿಯ ಪುರಾತನ ದೇಗುಲದಲ್ಲಿ ಅಗಾಧ ಪ್ರಮಾಣದ ಅತ್ಯಮೂಲ್ಯ ಸಂಪತ್ತು ಬಹಿರಂಗವಾಗಿತ್ತು. ಅದಾದ ಬಳಿಕ ‘ಅನಂತ’ ಸಂಪತ್ತಿನ ದೇಗುಲ ಯಾರಿಗೆ ಸೇರಬೇಕು ಎಂಬುದು ವಿವಾದದ ಗೂಡಾಗಿತ್ತು.

ಇನ್ನೂ ಓಪನ್ ಆಗಿಲ್ಲ ಒಂದು ಕೊಠಡಿ ತಿರುವನಂತಪುರದ ಅನಂತ ಪದ್ಮನಾಭ ಸ್ವಾಮಿ ದೇಗುಲದಲ್ಲಿ 5 ಕೊಠಡಿಗಳಲ್ಲಿ 1 ಲಕ್ಷ ಕೋಟಿ ರೂ ಮೌಲ್ಯದ ಪುರಾತನ ಚಿನ್ನ ಬೆಳ್ಳಿ ವಜ್ರ ವೈಢೂರ್ಯ ಸಂಪತ್ತು ಪತ್ತೆಯಾಗಿತ್ತು. ಆದ್ರೆ ಇನ್ನೂ ಒಂದು ಕೊಠಡಿಯ ದ್ವಾರವನ್ನು ಇನ್ನೂ ತೆಗೆದು ಸಂಪತ್ತಿನ ಮೌಲ್ಯಮಾಪನ ನಡೆದಿಲ್ಲ. ಸುಪ್ರೀಂಕೋರ್ಟ್ ಅದಕ್ಕೆ ಈ ಹಿಂದೆ ತಡೆ ನೀಡಿದೆ.

2009ರಲ್ಲಿ ಮಾಜಿ IPS ಅಧಿಕಾರಿ ಟಿಪಿ ಸುಂದರರಾಜನ್ ಎಂಬುವವರು ಕೇರಳ ಹೈಕೋರ್ಟ್​ಗೆ ಮನವಿ ಸಲ್ಲಿಸಿ, ಅನಂತ ಪದ್ಮನಾಭ ಸ್ವಾಮಿ ದೇಗುಲದ ಮಾಲೀಕತ್ವವವನ್ನು ತಿರುವಾಂಕೂರು ರಾಜಮನೆತನದಿಂದ ವಾಪಸ್ ಪಡೆದು, ಕೇರಳ ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕು ಎಂದು ಕೋರಿದ್ದರು. ಮಾಲೀಕತ್ವ ಮತ್ತು ಪೂಜೆ ಸಂಬಂಧ 1949ರಲ್ಲಿ ಭಾರತ ಸರ್ಕಾರ ಮತ್ತು ತಿರುವಾಂಕೂರು ರಾಜಮನೆತನ ಮಧ್ಯೆ ಒಪ್ಪಂದ ಏರ್ಪಟ್ಟಿದೆ.

Published On - 11:00 am, Mon, 13 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ