AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣದಂಡನೆ ಶಿಕ್ಷೆ ಜಾರಿ ಹೇಗೆ ಇರಲಿ? ಇಂಜೆಕ್ಷನ್, ಶೂಟ್, ಗ್ಯಾಸ್ ವಿಧಾನ ಬೇಡ, ಗಲ್ಲಿಗೇರಿಸುವ ಪದ್ಧತಿಯೇ ಇರಲಿ ಎಂದ ಸುಪ್ರೀಂ

Supreme Court wants hanging to be continued for death sentence execution: ಭಾರತದಲ್ಲಿ ಮರಣದಂಡನೆ ಜಾರಿಗೊಳಿಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗಲ್ಲಿಗೇರಿಸುವ ಪದ್ಧತಿಗಿಂತ ಕಡಿಮೆ ನೋವು ತರುವ ಇತರ ಪರ್ಯಾಯ ವಿಧಾನಗಳಿಂದ ಮರಣದಂಡನೆ ಜಾರಿಗೊಳಿಸಿ ಎನ್ನುವ ಮನವಿಯನ್ನು ಕೋರ್ಟ್ ತಳ್ಳಿಹಾಕಿದೆ. ಸರಿಯಾದ ವೈಜ್ಞಾನಿಕ ಆಧಾರ ಸಿಗುವವರೆಗೂ ಸದ್ಯಕ್ಕೆ ಮರಣದಂಡನೆ ಪದ್ಧತಿಯೇ ಮುಂದುವರಿಯಲಿ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಮಾನಿಸಿದೆ.

ಮರಣದಂಡನೆ ಶಿಕ್ಷೆ ಜಾರಿ ಹೇಗೆ ಇರಲಿ? ಇಂಜೆಕ್ಷನ್, ಶೂಟ್, ಗ್ಯಾಸ್ ವಿಧಾನ ಬೇಡ, ಗಲ್ಲಿಗೇರಿಸುವ ಪದ್ಧತಿಯೇ ಇರಲಿ ಎಂದ ಸುಪ್ರೀಂ
ಸುಪ್ರೀಂ ಕೋರ್ಟ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 18, 2026 | 1:32 PM

Share

ನವದೆಹಲಿ, ಆಗಸ್ಟ್ 18: ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ‘ಗಲ್ಲಿಗೇರಿಸುವ’ ಪದ್ಧತಿಯನ್ನೇ ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಕೂಡಿದ ಇತರ ವಿಧಾನಗಳಾದ ಮಾರಣಾಂತಿಕ ಇಂಜೆಕ್ಷನ್ ಅಥವಾ ಗುಂಡಿಕ್ಕುವ ವಿಧಾನ ಮೂಲಕ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Surpeme Court) ವಜಾಗೊಳಿಸಿದೆ.

ಮರಣದಂಡನೆಯನ್ನು ಗಲ್ಲಿಗೇರಿಸುವ ಬದಲಾಗಿ ಕಡಿಮೆ ನೋವಿನ ವಿಧಾನಗಳನ್ನು ಬಳಸಬೇಕು ಮತ್ತು ಇದು ಘನತೆಯಿಂದ ಕೂಡಿರಬೇಕು ಎಂದು ಕೋರಿ ವಕೀಲ ರಿಷಿ ಮಲ್ಹೋತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಗಲ್ಲಿಗೇರಿಸುವಿಕೆಯು ಕ್ರೂರ ಮತ್ತು ನೋವಿನಿಂದ ಕೂಡಿರುತ್ತದೆ. ವ್ಯಕ್ತಿಯ ಘನತೆಗೆ ಕುಂದು ಬರುವಂತಿರುತ್ತದೆ ಎಂಬುದು ಅವರ ವಾದ. ಆದರೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಅರ್ಜಿಯನ್ನು ತಳ್ಳಿಹಾಕಿದೆ.

ಇದನ್ನು ಓದಿ: 14 ರಾಜ್ಯಗಳ ಮುಖ್ಯಮಂತ್ರಿಗಳ ವಿರುದ್ಧ ಇವೆ ಗಂಭೀರ ಕ್ರಿಮಿನಲ್ ಪ್ರಕರಣಗಳು: ತೆಲಂಗಾಣ ಸಿಎಂ ಮೇಲೆ ಅತೀ ಹೆಚ್ಚು ಕೇಸ್​​

ಅರ್ಜಿದಾರರ ವಾದದ ಪ್ರಕಾರ, ಗಲ್ಲಿಗೇರಿಸುವ ವ್ಯಕ್ತಿ ದೀರ್ಘಕಾಲ ಬಾಧೆ ಪಡಬೇಕಾಗುತ್ತದೆ. ಆತ ಸತ್ತಿದ್ದಾನೆಂದು ಖಚಿತಪಡಿಸಲು 40 ನಿಮಿಷ ಬೇಕಾಗುತ್ತದೆ. ಆದರೆ, ಗ್ಯಾಸ್ ಚೇಂಬರ್, ಲೆಥಲ್ ಇಂಜೆಕ್ಷನ್, ಶೂಟ್ ವಿಧಾನಗಳಲ್ಲಿ 5 ನಿಮಿಷದಲ್ಲಿ ವ್ಯಕ್ತಿಯ ಸಾವನ್ನು ಖಚಿತಪಡಿಸಬಹುದು.

ಮರಣದಂಡನೆ ವಿಧಾನ ಮುಂದುವರಿಯುತ್ತದೆ, ಆದರೆ, ಇದು ಅಂತಿಮ ತೀರ್ಪಲ್ಲ…

ಸದ್ಯಕ್ಕೆ ದೇಶದಲ್ಲಿ ಮರಣದಂಡನೆಗಾಗಿ ಗಲ್ಲಿಗೇರಿಸುವ ಪದ್ಧತಿಯು ಸಂವಿಧಾನಬದ್ಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಇದು ಅಂತಿಮ ತೀರ್ಪಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಎಸ್​ಐಟಿ ಕ್ಲೀನ್ ಚಿಟ್

ಮರಣದಂಡನೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಮತ್ತು ವೈದ್ಯಕೀಯ ಸಾಕ್ಷ್ಯಾಧಾರಗಳು ಮುಂದೆ ಬಂದರೆ, ಪರ್ಯಾಯ ಮರಣದಂಡನೆ ಜಾರಿ ವಿಧಾನಗಳ ಕುರಿತು ಮರುಪರಿಶೀಲನೆ ನಡೆಸುವ ಅಧಿಕಾರ ಸರ್ಕಾರಕ್ಕಿದೆ. ಕೇಂದ್ರ ಸರ್ಕಾರವು ಬೇಕಿದ್ದರೆ ತಜ್ಞರ ಸಮಿತಿಯನ್ನು ರಚಿಸಿ ಪರ್ಯಾಯ ವಿಧಾನಗಳ ಬಗ್ಗೆ ಚರ್ಚಿಸಬಹುದು ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿದೆ.

ಸರ್ಕಾರದ ನಿಲುವು: ಈ ಹಿಂದೆ ವಿಚಾರಣೆಯ ವೇಳೆ, ಗಲ್ಲಿಗೇರಿಸುವಿಕೆಗೆ ಬದಲಾಗಿ ಬೇರೆ ಪದ್ಧತಿಯನ್ನು ಅಳವಡಿಸುವುದು ಪ್ರಾಯೋಗಿಕವಾಗಿ ಅಸಾಧ್ಯವೆಂದು ಕೇಂದ್ರ ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ ತಿಳಿಸಿತ್ತು. ಈ ತೀರ್ಪಿನ ಮೂಲಕ, ಮರಣದಂಡನೆ ಶಿಕ್ಷೆಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತನ್ನ ಹಿಂದಿನ ನಿಲುವನ್ನೇ ಎತ್ತಿಹಿಡಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿಗೆ ಹರಿಯುತ್ತಿದೆಯಾ ಲೆಕ್ಕಕ್ಕಿಂತ ಹೆಚ್ಚು ನೀರು?
ತಮಿಳುನಾಡಿಗೆ ಹರಿಯುತ್ತಿದೆಯಾ ಲೆಕ್ಕಕ್ಕಿಂತ ಹೆಚ್ಚು ನೀರು?
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ