AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್‌ಗೆ ಶೀಘ್ರದಲ್ಲೇ ಐವರು ನೂತನ ನ್ಯಾಯಾಧೀಶರ ನೇಮಕ: ಕೇಂದ್ರ ಸರ್ಕಾರ

Supreme Court: ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್ 13 ರಂದು ಶಿಫಾರಸು ಮಾಡಲಾಗಿದ್ದು, ಒಮ್ಮೆ ಅವರು ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿಕೆ ಆಗಲಿದೆ

ಸುಪ್ರೀಂಕೋರ್ಟ್‌ಗೆ ಶೀಘ್ರದಲ್ಲೇ ಐವರು ನೂತನ ನ್ಯಾಯಾಧೀಶರ ನೇಮಕ: ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:Feb 03, 2023 | 1:43 PM

Share

ಸುಪ್ರೀಂಕೋರ್ಟ್‌ಗೆ (Supreme Court) ಶೀಘ್ರದಲ್ಲೇ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಮೂವರು ಹೈಕೋರ್ಟ್(High Court) ಮುಖ್ಯ ನ್ಯಾಯಮೂರ್ತಿಗಳು ಮತ್ತು ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರನ್ನು ಭಾನುವಾರದೊಳಗೆ ಅಂತಿಮಗೊಳಿಸಲಾಗುವುದು ಎಂದು ಅಟಾರ್ನಿ ಜನರಲ್ ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ಗೆ ಬಡ್ತಿ  ಶಿಫಾರಸು ಮಾಡಲಾದ ಮೂವರು ಮುಖ್ಯ ನ್ಯಾಯಮೂರ್ತಿಗಳು- ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ಮಣಿಪುರ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್. ಇನ್ನಿಬ್ಬರು ನ್ಯಾಯಾಧೀಶರು ಪಾಟ್ನಾ ಹೈಕೋರ್ಟ್‌ನ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್‌ನ ಮನೋಜ್ ಮಿಶ್ರಾ.

ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್ 13 ರಂದು ಶಿಫಾರಸು ಮಾಡಲಾಗಿದ್ದು, ಒಮ್ಮೆ ಅವರು ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿಕೆ ಆಗಲಿದೆ. ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರು ಅಲ್ಲಿರಬಹುದು. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಹೆಸರನ್ನು ಮಂಗಳವಾರ ಕೊಲಿಜಿಯಂ ಶಿಫಾರಸು ಮಾಡಿದೆ.

ಇದನ್ನೂ ಓದಿ:

ಅವರ ಹೆಸರನ್ನು ಶಿಫಾರಸು ಮಾಡುವಾಗ ಡಿಸೆಂಬರ್‌ನಲ್ಲಿ ಶಿಫಾರಸು ಮಾಡಿದ ಹೆಸರುಗಳಿಗೆ ‘ಪ್ರಾಶಸ್ತ್ಯವಿರುತ್ತದೆ’ ಎಂದು ಸರ್ಕಾರ ಕಾನೂನು ಸಚಿವಾಲಯಕ್ಕೆ ತಿಳಿಸಿದೆ. ‘‘ಆದ್ದರಿಂದ ಡಿಸೆಂಬರ್ 13ರಂದು ಶಿಫಾರಸು ಮಾಡಿರುವ ಐವರು ನ್ಯಾಯಮೂರ್ತಿಗಳ ನೇಮಕವನ್ನು ಪ್ರತ್ಯೇಕವಾಗಿ ಮತ್ತು ಮೊದಲೇ ತಿಳಿಸಬೇಕು ಎಂದಿತ್ತು  ಕೊಲಿಜಿಯಂ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 3 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ