AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಆಮ್ಲಜನಕ ‘ಹೆಚ್ಚಿಗೆ  ಬಳಕೆ’ ವರದಿಯನ್ನು ಸುಪ್ರೀಂಕೋರ್ಟ್  ಸಮಿತಿ ಅನುಮೋದಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಮನೀಶ್ ಸಿಸೋಡಿಯಾ

Manish Sisodia: ದೆಹಲಿಯಲ್ಲಿ ಆಮ್ಲಜನಕದ ಬೇಡಿಕೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯೊಂದರಲ್ಲಿ ಉಲ್ಲೇಖಿಸಲಾಗಿದೆ. ಅಂತಹ ಯಾವುದೇ ವರದಿ ಇಲ್ಲ. ಬಿಜೆಪಿ ಹಂಚಿಕೊಳ್ಳುತ್ತಿರುವ ವರದಿ ಎಲ್ಲೂ ಅಸ್ತಿತ್ವದಲ್ಲಿಲ್ಲ. ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ದೆಹಲಿಯಲ್ಲಿ ಆಮ್ಲಜನಕ 'ಹೆಚ್ಚಿಗೆ  ಬಳಕೆ' ವರದಿಯನ್ನು ಸುಪ್ರೀಂಕೋರ್ಟ್  ಸಮಿತಿ ಅನುಮೋದಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ
TV9 Web
| Edited By: |

Updated on: Jun 25, 2021 | 2:07 PM

Share

ದೆಹಲಿ: ಸುಪ್ರೀಂಕೋರ್ಟ್‌ನ ಆಮ್ಲಜನಕ ಲೆಕ್ಕಪರಿಶೋಧನಾ ಸಮಿತಿಯ ಸದಸ್ಯರು ಮಧ್ಯಂತರ ವರದಿಗೆ “ಸಹಿ ಮಾಡಿಲ್ಲ ಅಥವಾ ಅನುಮೋದಿಸಿಲ್ಲ” ಎಂದು ದೆಹಲಿ ಸರ್ಕಾರ ಶುಕ್ರವಾರ ಹೇಳಿದೆ. ದೇಶದಲ್ಲಿ ಕೊವಿಡ್ ಎರಡನೇ ಅಲೆಯ ಉತ್ತುಂಗದಲ್ಲಿದ್ದಾಗ ದೆಹಲಿ ವೈದ್ಯಕೀಯ ಆಮ್ಲಜನಕವನ್ನು ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಬಳಸಿಕೊಂಡಿದೆ ಎಂದು ಮಧ್ಯಂತರ ವರದಿಯಲ್ಲಿ ಹೇಳಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಜೆಪಿ ಪಕ್ಷ ಶೇರ್ ಮಾಡಿರುವ ವರದಿ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಿದ್ಧಪಡಿಸಿರುವುದು. ಸುಪ್ರೀಂಕೋರ್ಟ್  ಸಮಿತಿ ಸಿದ್ಧಪಡಿಸಿದ ಮಧ್ಯಂತರ ವರದಿಯನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದಿದ್ದಾರೆ.

“ದೆಹಲಿಯಲ್ಲಿ ಆಮ್ಲಜನಕದ ಬೇಡಿಕೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯೊಂದರಲ್ಲಿ ಉಲ್ಲೇಖಿಸಲಾಗಿದೆ. ಅಂತಹ ಯಾವುದೇ ವರದಿ ಇಲ್ಲ. ಬಿಜೆಪಿ ಹಂಚಿಕೊಳ್ಳುತ್ತಿರುವ ವರದಿ ಎಲ್ಲೂ ಅಸ್ತಿತ್ವದಲ್ಲಿಲ್ಲ. ಅವರು ಸುಳ್ಳು ಹೇಳುತ್ತಿದ್ದಾರೆ. ನಾವು ಮಾತನಾಡಿದ ಸಮಿತಿಯ ಸದಸ್ಯರು ಯಾವುದೇ ವರದಿಗೆ ಸಹಿ ಮಾಡಿಲ್ಲ ಅಥವಾ ಅನುಮೋದಿಸಿಲ್ಲ ಎಂದು ಹೇಳುತ್ತಿದ್ದಾರೆ. ಈ ವಿಷಯವು ನ್ಯಾಯಾಲಯಕ್ಕೆ ಸಂಬಂಧಪಟ್ಟಿದ್ದು ನ್ಯಾಯಾಲಯದಲ್ಲಿರುವ ವಿಷಯಗಳ ಬಗ್ಗೆ ರಾಜಕೀಯ ಮಾಡಬಾರದು ಎಂದು ಸಿಸೋಡಿಯಾ ಹೇಳಿದರು.

“ದೆಹಲಿಯು ಏಪ್ರಿಲ್‌ನಲ್ಲಿ ಕೊವಿಡ್ ಎರಡನೇ ಅಲೆಯ ಉತ್ತುಂಗದಲ್ಲಿ ತೀವ್ರ ಆಮ್ಲಜನಕದ ಕೊರತೆಯನ್ನು ಎದುರಿಸಿತು. ಆಮ್ಲಜನಕದ ನಿರ್ವಹಣೆ ಕೇಂದ್ರದ ಜವಾಬ್ದಾರಿಯಾಗಿದೆ. ಅವರು ನಿಜವಾಗಿ ಕೇಜ್ರಿವಾಲ್ ಅವರನ್ನು ನಿಂದಿಸುತ್ತಿಲ್ಲ. ಕೇಂದ್ರ ಈ ವಾದಗಳ ಮೂಲಕ, ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿಸೊಡಿಯಾ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದೆ.

“ರೋಗಿಗಳು, ಅವರ ಸಂಬಂಧಿಗಳು ಮತ್ತು ವೈದ್ಯರು ಸುಳ್ಳು ಹೇಳಿದ್ದಾರೆಯೇ? ಅಂತಹ ಸಾವುಗಳ ಬಗ್ಗೆ ನ್ಯಾಯಾಲಯಕ್ಕೆ ತೆರಳಿದವರ ಬಗ್ಗೆ ಏನಂತೀರಿ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ.

ಕೊವಿಡ್ ಉತ್ತುಂಗದಲ್ಲಿದ್ದಾಗ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಸರ್ಕಾರ ಆಮ್ಲಜನಕ ಪೂರೈಕೆಯನ್ನು ರಾಜಕೀಯಗೊಳಿಸಿದ್ದನ್ನು ನಂಬಲಾಗದು. ಇದು ಅಂತಹ ಸಣ್ಣ ರಾಜಕೀಯ. ವರದಿಯಲ್ಲಿ ಆಕ್ಸಿಜನ್ ಆಡಿಟ್ ಸಮಿತಿ ಮಂಡಿಸಿದ ಅಂಕಿ ಅಂಶಗಳು ಆಘಾತಕಾರಿ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರ ಪ್ರತಿಕ್ರಿಯಿಸಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್  ಮಾಡಿದೆ.

ಇದನ್ನೂ ಓದಿ: ದೆಹಲಿ ಸರ್ಕಾರ ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಆಮ್ಲಜನಕವನ್ನು ಕೇಳಿತ್ತು: ಸುಪ್ರೀಂಕೋರ್ಟ್ ಸಮಿತಿ

(Supreme Court’s oxygen audit committee have not signed or approved the interim report says Delhi Deputy CM Manish Sisodia )

Follow Us
Web contact
Web contact

TV9 Kannada

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!