AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ – ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು

ಸುಪ್ರೀಂ ಕೋರ್ಟ್​ ಮತ್ತು ಹೈಕೋರ್ಟ್​ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದು ಕಡ್ಡಾಯ ಎಂದು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ.

ಸುಪ್ರೀಂ - ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು
ಸುಪ್ರೀಂ ಕೋರ್ಟ್​​ Image Credit source: freeimages
ಅಕ್ಷಯ್​ ಪಲ್ಲಮಜಲು​​
|

Updated on:Aug 09, 2023 | 11:26 AM

Share

ದೆಹಲಿ, ಆ.9: ಇನ್ನು ಮುಂದೆ ಸುಪ್ರೀಂ ಕೋರ್ಟ್(Supreme Court) ಮತ್ತು ಹೈಕೋರ್ಟ್​ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಶಾಸನವನ್ನು ತರಲು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ. ಇದರ ಜತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ, ನೇಮಕಾತಿಗೆ ಸಂಬಂಧಿಸಿದ ವರದಿಯನ್ನು ಕೂಡ ನೀಡಲಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಆದಾಯ ವಾರ್ಷಿಕ ವರದಿಯನ್ನು ಸಲ್ಲಿಸಬೇಕು ಎಂಬ ನಿಯಮದ ಬಗ್ಗೆ ಸದನಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಈ ವರದಿಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರ ಅಧ್ಯಕ್ಷತೆಯ ಸ್ಥಾಯಿ ಸಮಿತಿಯು ಸಲ್ಲಿಸಿದೆ. ಸಂಸದರು ಅಥವಾ ಶಾಸಕರಾಗಿ ಚುನಾವಣೆಗೆ ನಿಂತಿರುವವರ ಆಸ್ತಿಯನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗೆ ಇನ್ನು ಮುಂದೆ  ಸಾರ್ವಜನಿಕ ಹುದ್ದೆಯಲ್ಲಿ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರು ಕೂಡ ತಮ್ಮ ಆಸ್ತಿಯ ವಾರ್ಷಿಕ ರಿಟರ್ನ್ಸ್​​​ನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಹೇಳಿದೆ. ಸರ್ಕಾರಿ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ತಿಳಿಕೊಳ್ಳುವುದು ಮತ್ತು ಈ ವರದಿಯನ್ನು ಸಾರ್ವಜನಿಕ ಡೊಮೇನ್‌ಗೆ ಅಪ್‌ಲೋಡ್ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ವಾರ್ಷಿಕ ಆಧಾರದ ಮೇಲೆ ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರವು ಸೂಕ್ತ ಕಾನೂನನ್ನು ತರಲು ಸಮಿತಿ ಶಿಫಾರಸು ಮಾಡಿದೆ. ಉನ್ನತ ನ್ಯಾಯಾಂಗದ ನ್ಯಾಯಾಧೀಶರು ಆಸ್ತಿಗಳ ಘೋಷಣೆಯು ಸಾರ್ವಜನಿಕ ವ್ಯವಸ್ಥೆಯಲ್ಲಿ ಹೆಚ್ಚಿನ ನಂಬಿಕೆ ಮತ್ತು ವಿಶ್ವಾಸಾರ್ಹತೆಯನ್ನು ತರುತ್ತದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 9 August 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!