AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ – ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು

ಸುಪ್ರೀಂ ಕೋರ್ಟ್​ ಮತ್ತು ಹೈಕೋರ್ಟ್​ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದು ಕಡ್ಡಾಯ ಎಂದು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ.

ಸುಪ್ರೀಂ - ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು
ಸುಪ್ರೀಂ ಕೋರ್ಟ್​​ Image Credit source: freeimages
ಅಕ್ಷಯ್​ ಪಲ್ಲಮಜಲು​​
|

Updated on:Aug 09, 2023 | 11:26 AM

Share

ದೆಹಲಿ, ಆ.9: ಇನ್ನು ಮುಂದೆ ಸುಪ್ರೀಂ ಕೋರ್ಟ್(Supreme Court) ಮತ್ತು ಹೈಕೋರ್ಟ್​ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಶಾಸನವನ್ನು ತರಲು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ. ಇದರ ಜತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ, ನೇಮಕಾತಿಗೆ ಸಂಬಂಧಿಸಿದ ವರದಿಯನ್ನು ಕೂಡ ನೀಡಲಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಆದಾಯ ವಾರ್ಷಿಕ ವರದಿಯನ್ನು ಸಲ್ಲಿಸಬೇಕು ಎಂಬ ನಿಯಮದ ಬಗ್ಗೆ ಸದನಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಈ ವರದಿಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರ ಅಧ್ಯಕ್ಷತೆಯ ಸ್ಥಾಯಿ ಸಮಿತಿಯು ಸಲ್ಲಿಸಿದೆ. ಸಂಸದರು ಅಥವಾ ಶಾಸಕರಾಗಿ ಚುನಾವಣೆಗೆ ನಿಂತಿರುವವರ ಆಸ್ತಿಯನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗೆ ಇನ್ನು ಮುಂದೆ  ಸಾರ್ವಜನಿಕ ಹುದ್ದೆಯಲ್ಲಿ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರು ಕೂಡ ತಮ್ಮ ಆಸ್ತಿಯ ವಾರ್ಷಿಕ ರಿಟರ್ನ್ಸ್​​​ನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಹೇಳಿದೆ. ಸರ್ಕಾರಿ ಮತ್ತು ಸಂವಿಧಾನಿಕ ಹುದ್ದೆಯಲ್ಲಿರುವವರ ಆಸ್ತಿ ವಿವರಗಳನ್ನು ಸಾರ್ವಜನಿಕರಿಗೆ ತಿಳಿಕೊಳ್ಳುವುದು ಮತ್ತು ಈ ವರದಿಯನ್ನು ಸಾರ್ವಜನಿಕ ಡೊಮೇನ್‌ಗೆ ಅಪ್‌ಲೋಡ್ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್ ನೀಡಿದ ಲೋಕಾಯುಕ್ತ ನ್ಯಾಯಮೂರ್ತಿ

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ವಾರ್ಷಿಕ ಆಧಾರದ ಮೇಲೆ ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರವು ಸೂಕ್ತ ಕಾನೂನನ್ನು ತರಲು ಸಮಿತಿ ಶಿಫಾರಸು ಮಾಡಿದೆ. ಉನ್ನತ ನ್ಯಾಯಾಂಗದ ನ್ಯಾಯಾಧೀಶರು ಆಸ್ತಿಗಳ ಘೋಷಣೆಯು ಸಾರ್ವಜನಿಕ ವ್ಯವಸ್ಥೆಯಲ್ಲಿ ಹೆಚ್ಚಿನ ನಂಬಿಕೆ ಮತ್ತು ವಿಶ್ವಾಸಾರ್ಹತೆಯನ್ನು ತರುತ್ತದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 9 August 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ