AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಪದವಿ ಇಲ್ಲದ ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತೆರೆದಿದ್ದರು. ಆಸ್ಪತ್ರೆ ಉದ್ಘಾಟನೆಗೆ ಮುದ್ರಿತವಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಸೂರತ್ ಪೊಲೀಸ್ ಉನ್ನತಾಧಿಕಾರಿಗಳು, ಪೊಲೀಸ್ ಕಮಿಷನರ್ ಮತ್ತು ಕಾರ್ಪೊರೇಷನ್ ಕಮಿಷನರ್ ಅವರ ಹೆಸರನ್ನೂ ಕೇಳದೆ ಮುದ್ರಿಸಲಾಗಿತ್ತು.

ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ಆಸ್ಪತ್ರೆ Image Credit source: NDTV
ನಯನಾ ರಾಜೀವ್
|

Updated on: Nov 19, 2024 | 2:54 PM

Share

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಪದವಿ ಇಲ್ಲದ ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ತೆರೆದಿದ್ದರು. ಆಸ್ಪತ್ರೆ ಉದ್ಘಾಟನೆಗೆ ಮುದ್ರಿತವಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಸೂರತ್ ಪೊಲೀಸ್ ಉನ್ನತಾಧಿಕಾರಿಗಳು, ಪೊಲೀಸ್ ಕಮಿಷನರ್ ಮತ್ತು ಕಾರ್ಪೊರೇಷನ್ ಕಮಿಷನರ್ ಅವರ ಹೆಸರನ್ನೂ ಕೇಳದೆ ಮುದ್ರಿಸಲಾಗಿತ್ತು.

ಆಸ್ಪತ್ರೆಯ ಉದ್ಘಾಟನೆಗೆ ಯಾವುದೇ ಅಧಿಕಾರಿಗಳು ಹಾಜರಾಗದಿದ್ದರೂ, ಆಸ್ಪತ್ರೆಯ ಉದ್ಘಾಟನೆಯ ಮರುದಿನವೇ ಗುಜರಾತ್ ನ ಆರೋಗ್ಯ ಇಲಾಖೆ ಕ್ರಮ ಕೈಗೊಂಡು ಆಸ್ಪತ್ರೆಗೆ ಸೀಲ್ ಮಾಡಿದೆ. ನಕಲಿ ಪದವಿಗಳ ಹೆಸರಿನಲ್ಲಿ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ವಂಚಕರನ್ನು ಸೂರತ್ ಪೊಲೀಸರು ಬಂಧಿಸಿದ್ದಾರೆ.

ಐವರು ಆರೋಪಿಗಳ ಪೈಕಿ ಇಬ್ಬರ ನಕಲಿ ಪದವಿ ಬಹಿರಂಗಗೊಂಡ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಉಳಿದ ಆರೋಪಿಗಳ ಪದವಿಯನ್ನು ತನಿಖೆ ನಡೆಸುತ್ತಿದ್ದಾರೆ. ಸೂರತ್‌ನ ಪಾಂಡೆಸರಾ ಪ್ರದೇಶದಲ್ಲಿ ಜನಸೇವಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಲಾಗಿತ್ತು. ಆಹ್ವಾನ ಪತ್ರಿಕೆಯಲ್ಲಿ ವೈದ್ಯರ ಹೆಸರನ್ನು ಬರೆಯಲಾಗಿದ್ದು, ಅದರಲ್ಲಿ ಒಬ್ಬ ವೈದ್ಯನ ಹೆಸರು ಬಬ್ಲು ರಾಮ್ ಆದರೆ ಶುಕ್ಲಾ ಎಂದು ತನ್ನನ್ನು ತಾನು ವೈದ್ಯ ಎಂದು ಕರೆದುಕೊಂಡಿದ್ದಾನೆ.

ಮತ್ತಷ್ಟು ಓದಿ: ಯೂಟ್ಯೂಬ್ ನೋಡಿ ಆಪರೇಷನ್ ಮಾಡಿದ ನಕಲಿ ವೈದ್ಯ, ಬಾಲಕ ಸಾವು

ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್, ಸೂರತ್ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಶಾಲಿನಿ ಅಗರ್ವಾಲ್ ಮತ್ತು ಜಂಟಿ ಪೊಲೀಸ್ ಕಮಿಷನರ್ ರಾಘವೇಂದ್ರ ವತ್ಸ್ ಅವರ ಹೆಸರನ್ನು ಸಹ ಈ ಆಸ್ಪತ್ರೆಯ ಆಹ್ವಾನ ಪತ್ರಿಕೆಯಲ್ಲಿ ಕೇಳದೆಯೇ ಪ್ರಕಟಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ