AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ರಾತ್ರೋರಾತ್ರಿ ಬುಲ್ಡೋಜರ್ ದಾಳಿಗೆ ಬಿದ್ದ 100 ಮನೆಗಳು; ಅಧಿಕಾರಿಗಳಿಗೂ ಗೊತ್ತಿಲ್ಲ; ಭೂಮಾಫಿಯಾ ಕರಾಮತ್ತಾ?

Illegal Demolition in Surat: ಗುಜರಾತ್‌ನ ಸೂರತ್‌ನಲ್ಲಿ 100ಕ್ಕೂ ಹೆಚ್ಚು ಬಡವರ ಮನೆಗಳು ನಿಗೂಢವಾಗಿ ಧ್ವಂಸಗೊಂಡಿವೆ. ಸೂರತ್ ಪಾಲಿಕೆ ಹಾಗೂ ಕಂದಾಯ ಇಲಾಖೆ ಜವಾಬ್ದಾರಿ ನಿರಾಕರಿಸಿದ್ದು, ಈ ಕೃತ್ಯದ ಹಿಂದೆ ಭೂಮಾಫಿಯಾ ಕೈವಾಡದ ಶಂಕೆ ವ್ಯಕ್ತವಾಗಿದೆ. ಯಾವುದೇ ನೋಟಿಸ್ ಇಲ್ಲದೆ ಮನೆ ಕಳೆದುಕೊಂಡ ನೂರಾರು ಕುಟುಂಬಗಳು ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

ಗುಜರಾತ್​ನಲ್ಲಿ ರಾತ್ರೋರಾತ್ರಿ ಬುಲ್ಡೋಜರ್ ದಾಳಿಗೆ ಬಿದ್ದ 100 ಮನೆಗಳು; ಅಧಿಕಾರಿಗಳಿಗೂ ಗೊತ್ತಿಲ್ಲ; ಭೂಮಾಫಿಯಾ ಕರಾಮತ್ತಾ?
ಸೂರತ್​ನಲ್ಲಿ ಬುಲ್ಡೋಜರ್ ಕರಾಮತ್ತು. ಕಟ್ಟಡ ಅವಶೇಷಗಳ ಮೇಲೆ ಮಲಗಿರುವ ಒಬ್ಬ ಸಂತ್ರಸ್ತೆImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2026 | 6:01 PM

Share

ಅಹ್ಮದಾಬಾದ್, ಜೂನ್ 7: ಗುಜರಾತ್‌ನ ಸೂರತ್ ನಗರದಲ್ಲಿ ನೂರು ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದ್ದು, ಆದರೆ ಆ ಮನೆಗಳನ್ನು ಉರುಳಿಸಿದ್ದು ಯಾರು ಎಂಬುದು ಯಾರಿಗೂ ತಿಳಿಯದೆ ಒಂದು ನಿಗೂಢ ರಹಸ್ಯವಾಗಿ ಪರಿಣಮಿಸಿದೆ. ಸೂರತ್‌ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕ್ಕೂ ಹೆಚ್ಚು ಕಡುಬಡವರ ಮನೆಗಳನ್ನು ಜೆಸಿಬಿ ಮತ್ತು ಬುಲ್ಡೋಜರ್ ಬಳಸಿ ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಈ ಕಾರ್ಯಾಚರಣೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸೂರತ್ ಮಹಾನಗರ ಪಾಲಿಕೆ (SMC) ಮತ್ತು ಸ್ಥಳೀಯ ಕಂದಾಯ ಇಲಾಖೆ (Revenue Department) ಸಂಪೂರ್ಣವಾಗಿ ಕೈತೊಳೆದುಕೊಂಡಿವೆ. ತಲೆಮಾರುಗಳಿಂದ ಅಲ್ಲಿಯೇ ವಾಸಿಸುತ್ತಿದ್ದ ನೂರಾರು ಕುಟುಂಬಗಳು ಯಾವುದೇ ಮುನ್ಸೂಚನೆ ಇಲ್ಲದೆ ಬೀದಿಗೆ ಬಿದ್ದಿದ್ದು, ತಮಗೆ ನ್ಯಾಯ ಬೇಕೆಂದು ಆಗ್ರಹಿಸುತ್ತಿದ್ದಾರೆ.

ಲಿಂಬಾಯತ್‌ನ ಈ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಬಹುತೇಕರು ದಿನಗೂಲಿ ಕಾರ್ಮಿಕರು ಮತ್ತು ಸಣ್ಣಪುಟ್ಟ ಕೆಲಸ ಮಾಡುವ ಬಡವರಾಗಿದ್ದಾರೆ. ಇತ್ತೀಚಿನ ರಾತ್ರಿಯೊಂದರಲ್ಲಿ ಯಾವುದೇ ಅಧಿಕೃತ ನೋಟಿಸ್ ನೀಡದೆ, ದಿಢೀರನೆ ಬುಲ್ಡೋಜರ್‌ಗಳೊಂದಿಗೆ ಬಂದ ಕೆಲವು ವ್ಯಕ್ತಿಗಳು ಸಾಲು ಸಾಲು ಮನೆಗಳನ್ನು ಧ್ವಂಸಗೊಳಿಸಲು ಪ್ರಾರಂಭಿಸಿದರು. ಸ್ಥಳೀಯರು ವಿರೋಧಿಸಲು ಯತ್ನಿಸಿದರೂ, ಯಾವುದೇ ಕರುಣೆ ತೋರದೆ ಇಡೀ ಬಡಾವಣೆಯನ್ನು ಧ್ವಂಸ ಮಾಡಲಾಯಿತು.

ಇದನ್ನೂ ಓದಿ: ಅಮೆರಿಕದಲ್ಲಿ ಭಾರತೀಯ ಯುವಕನ ಹತ್ಯೆ; ಪೀಜ್ಜಾ ಡೆಲಿವರಿಗೆಂದು ಕರೆಸಿ ಸಾಯಿಸಿದ ಹಂತಕರು

ಯಾರು ಮಾಡಿದ್ದು? ಅಧಿಕಾರಿಗಳೇ ಅಜ್ಞಾತರು

ಸಾಮಾನ್ಯವಾಗಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗಳನ್ನು ಮಹಾನಗರ ಪಾಲಿಕೆ ಅಥವಾ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳ ಆದೇಶದ ಮೇರೆಗೆ ಪೊಲೀಸ್ ರಕ್ಷಣೆಯೊಂದಿಗೆ ಮಾಡಲಾಗುತ್ತದೆ. ಆದರೆ ಈ ಘಟನೆ ನಡೆದ ನಂತರ ಸಂತ್ರಸ್ತರು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಆಘಾತಕಾರಿ ಉತ್ತರ ಲಭಿಸಿದೆ. “ನಾವು ಅಂತಹ ಯಾವುದೇ ತೆರವು ಆದೇಶ ನೀಡಿಲ್ಲ, ಅಲ್ಲಿಗೆ ಯಾವುದೇ ಬುಲ್ಡೋಜರ್ ಕಳುಹಿಸಿಲ್ಲ” ಎಂದು ಸೂರತ್ ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಭೂಮಾಫಿಯಾ ಕೈವಾಡದ ಶಂಕೆ

ಸರ್ಕಾರಿ ಸಂಸ್ಥೆಗಳು ಜವಾಬ್ದಾರಿಯನ್ನು ನಿರಾಕರಿಸಿರುವುದರಿಂದ, ಈ ಜಾಗದ ಮೇಲೆ ಕಣ್ಣಿಟ್ಟಿರುವ ಪ್ರಭಾವಿ ಭೂಮಾಫಿಯಾ (Land Mafia) ಅಥವಾ ಖಾಸಗಿ ಬಿಲ್ಡರ್‌ಗಳು ಗೂಂಡಾಗಳನ್ನು ಬಳಸಿ ಈ ಕೃತ್ಯ ಎಸಗಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಬಡವರನ್ನು ಹೆದರಿಸಿ ಓಡಿಸಲು ಈ ರೀತಿ ಕಾನೂನುಬಾಹಿರವಾಗಿ ಬುಲ್ಡೋಜರ್ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ದೆಹಲಿಯ ಪ್ರಾಧ್ಯಾಪಕಿಯನ್ನು ಕೊಲ್ಲಲು 1,400 ಕಿ.ಮೀ ದೂರದಿಂದ ಬಂದಿದ್ದ ಹಂತಕರು

ಪ್ರತಿಭಟನೆ ಮತ್ತು ತನಿಖೆಗೆ ಆಗ್ರಹ

ಮನೆಗಳನ್ನು ಕಳೆದುಕೊಂಡು ಮಳೆ-ಗಾಳಿಗೆ ಸಿಲುಕಿರುವ ಸಂತ್ರಸ್ತರು ಸೂರತ್ ಜಿಲ್ಲಾಧಿಕಾರಿ ಕಚೇರಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುತ್ತಿದ್ದಾರೆ. “ನಮ್ಮ ಕಣ್ಣೆದುರೇ ನೂರು ಮನೆಗಳು ಉರುಳಿಬಿದ್ದರೂ ಯಾರಿಗೆ ಗೊತ್ತು ಎಂದು ಆಡಳಿತ ವ್ಯವಸ್ಥೆ ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ತಕ್ಷಣವೇ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಈ ಅಕ್ರಮ ಬುಲ್ಡೋಜರ್ ಕಾರ್ಯಾಚರಣೆಯ ಹಿಂದಿರುವ ಕಿಡಿಗೇಡಿಗಳನ್ನು ಬಂಧಿಸಬೇಕು,” ಎಂದು ಸಂತ್ರಸ್ತ ಕುಟುಂಬಗಳು ಕಣ್ಣೀರಿಡುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ