Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಮಾಲಿನ್ಯ: ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನವೆಂಬರ್ 3,4 ರಂದು ರಜೆ

ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆ, ವಾಹನಗಳ ಹೊರಸೂಸುವಿಕೆ ಮತ್ತು ಕೈಗಾರಿಕಾ ಮಾಲಿನ್ಯ ಸೇರಿದಂತೆ ಅಂಶಗಳ ಸಂಯೋಜನೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ದೆಹಲಿಯು ಅಪಾಯಕಾರಿ ಗಾಳಿಯ ಗುಣಮಟ್ಟವನ್ನು ಎದುರಿಸುತ್ತಿದೆ, ವಾಯು ಗುಣಮಟ್ಟ ಸೂಚ್ಯಂಕವು (AQI) ತೀವ್ರ ಮಟ್ಟವನ್ನು ತಲುಪಿದೆ.

ವಾಯುಮಾಲಿನ್ಯ: ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ನವೆಂಬರ್ 3,4 ರಂದು ರಜೆ
ವಾಯು ಮಾಲಿನ್ಯ
Follow us
ರಶ್ಮಿ ಕಲ್ಲಕಟ್ಟ
|

Updated on: Nov 02, 2023 | 10:11 PM

ದೆಹಲಿ ನವೆಂಬರ್ 02: ದೆಹಲಿಯಲ್ಲಿ (Delhi) ವಾಯುಮಾಲಿನ್ಯದ (Air pollution) ಮಟ್ಟವು ಆತಂಕಕಾರಿಯಾದ ಉಲ್ಬಣಗೊಂಡ ಹಿನ್ನೆಲೆಯಲ್ಲಿ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಗುರುವಾರ ನಗರದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ಮುಂದಿನ ಎರಡು ದಿನಗಳವರೆಗೆ ಮುಚ್ಚಲಾಗುವುದು ಎಂದು ಘೋಷಿಸಿದ್ದಾರೆ. ಹೆಚ್ಚುತ್ತಿರುವ ಮಾಲಿನ್ಯದ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳನ್ನು ಮುಂದಿನ 2 ದಿನಗಳವರೆಗೆ ಮುಚ್ಚಲಾಗುವುದು ಎಂದು ಕೇಜ್ರಿವಾಲ್ ಎಕ್ಸ್‌ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುವಿಕೆ, ವಾಹನಗಳ ಹೊರಸೂಸುವಿಕೆ ಮತ್ತು ಕೈಗಾರಿಕಾ ಮಾಲಿನ್ಯ ಸೇರಿದಂತೆ ಅಂಶಗಳ ಸಂಯೋಜನೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ದೆಹಲಿಯು ಅಪಾಯಕಾರಿ ಗಾಳಿಯ ಗುಣಮಟ್ಟವನ್ನು ಎದುರಿಸುತ್ತಿದೆ, ವಾಯು ಗುಣಮಟ್ಟ ಸೂಚ್ಯಂಕವು (AQI) ತೀವ್ರ ಮಟ್ಟವನ್ನು ತಲುಪಿದೆ.

ನಗರದ ವಾಯು ಗುಣಮಟ್ಟ ಸೂಚ್ಯಂಕವು (AQI) ಸಂಜೆ 5 ಗಂಟೆಗೆ 402 ಆಗಿತ್ತು, ಇದು ಈ ಋತುವಿನಲ್ಲಿ ಇದುವರೆಗಿನ ಅತ್ಯಂತ ಕೆಟ್ಟದಾಗಿದೆ. 24-ಗಂಟೆಗಳ ಸರಾಸರಿ AQI ಬುಧವಾರ 364, ಮಂಗಳವಾರ 359, ಸೋಮವಾರ 347, ಭಾನುವಾರ 325, ಶನಿವಾರ 304 ಮತ್ತು ಶುಕ್ರವಾರ 261ದಷ್ಟು ದಾಖಲಾಗಿದೆ.

ದಿಲ್ಲಿ-ಎನ್‌ಸಿಆರ್‌ನಲ್ಲಿನ ಏರ್ ಕ್ವಾಲಿಟಿ ಮ್ಯಾನೇಜ್‌ಮೆಂಟ್ ಕಮಿಷನ್ (ಸಿಎಕ್ಯೂಎಂ) ಆದೇಶದಲ್ಲಿ ‘ತೀವ್ರ’ ಗಾಳಿಯ ಗುಣಮಟ್ಟಕ್ಕಾಗಿ GRAPಹಂತ III ರ ಅಡಿಯಲ್ಲಿ ವಿವರಿಸಿರುವ ಎಲ್ಲಾ ಕ್ರಮಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರಾರಂಭಿಸಲಾಗಿದೆ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಈ ಪ್ರಕಟಣೆ ಬಂದಿದೆ. ದೆಹಲಿಯಲ್ಲಿ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) ತೀವ್ರವಾಗಿ ಏರುತ್ತಿದೆ ಮತ್ತು “ಅತ್ಯಂತ ಪ್ರತಿಕೂಲವಾದ ಹವಾಮಾನ ಮತ್ತು ಹವಾಮಾನ ಪರಿಸ್ಥಿತಿಗಳಿಂದಾಗಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ” ಎಂದು ಸಮಿತಿಯು ಗಮನಿಸಿದೆ.

ಇದನ್ನೂ ಓದಿ: ಸದನ ಸಮಿತಿಯಲ್ಲಿ ವೈಯಕ್ತಿಕ ಪ್ರಶ್ನೆ ಕೇಳಲಾಗಿದೆ; ಓಂ ಬಿರ್ಲಾಗೆ ಪತ್ರ ಬರೆದ ಮಹುವಾ ಮೊಯಿತ್ರಾ

GRAP ಕ್ರಮಗಳನ್ನು ನಾಲ್ಕು ಹಂತಗಳಾಗಿ ವರ್ಗೀಕರಿಸುತ್ತದೆ: ಹಂತ I – ‘ಕಳಪೆ’ (AQI 201-300); ಹಂತ II – ‘ಬಹಳ ಕಳಪೆ’ (AQI 301-400); ಹಂತ III – ‘ತೀವ್ರ’ (AQI 401-450); ಮತ್ತು ಹಂತ IV – ‘ತೀವ್ರ ಪ್ಲಸ್’ (AQI 450 ಕ್ಕಿಂತ ಹೆಚ್ಚು).

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ