AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉಪನಾಮ; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ನಾಯಕನಿಗೆ ಪ್ರಮುಖ ಹುದ್ದೆ

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ(Rahul Gandhi) ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ (Purnesh Modi) ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯುನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೋದಿ ಉಪನಾಮ; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ನಾಯಕನಿಗೆ ಪ್ರಮುಖ ಹುದ್ದೆ
ಪೂರ್ಣೇಶ್ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Nov 18, 2023 | 10:19 AM

Share

ದೆಹಲಿ, ನ.18: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ(Rahul Gandhi) ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ (Purnesh Modi) ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯುನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್​​​​ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​​ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್​​​ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದನ್ನೂ ಓದಿ:ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದುರಹಂಕಾರಿ, ಒಂದು ಚೂರು ಪಶ್ಚಾತಾಪವಿಲ್ಲ: ಪೂರ್ಣೇಶ್ ಮೋದಿ

ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್​​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್​​​ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಆಗಸ್ಟ್​​ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್