ಮೋದಿ ಉಪನಾಮ; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ನಾಯಕನಿಗೆ ಪ್ರಮುಖ ಹುದ್ದೆ

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ(Rahul Gandhi) ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ (Purnesh Modi) ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯುನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೋದಿ ಉಪನಾಮ; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ನಾಯಕನಿಗೆ ಪ್ರಮುಖ ಹುದ್ದೆ
ಪೂರ್ಣೇಶ್ ಮೋದಿ
Follow us
|

Updated on: Nov 18, 2023 | 10:19 AM

ದೆಹಲಿ, ನ.18: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ(Rahul Gandhi) ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ (Purnesh Modi) ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯುನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್​​​​ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​​ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್​​​ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದನ್ನೂ ಓದಿ:ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದುರಹಂಕಾರಿ, ಒಂದು ಚೂರು ಪಶ್ಚಾತಾಪವಿಲ್ಲ: ಪೂರ್ಣೇಶ್ ಮೋದಿ

ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್​​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್​​​ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಆಗಸ್ಟ್​​ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ