AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಅಧಿಕಾರಿಗಳಿಂದ ರಾತ್ರೋರಾತ್ರಿ ಶಾಲೆಯ ಹಾಸ್ಟೆಲ್​ ತಪಾಸಣೆ, 89 ವಿದ್ಯಾರ್ಥಿನಿಯರು ಇರಲೇ ಇಲ್ಲ

ಉತ್ತರ ಪ್ರದೇಶದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಅಧಿಕಾರಿಗಳು ರಾತ್ರೋ ರಾತ್ರಿ ತಪಾಸಣೆ ನಡೆಸಿದ್ದು, 89 ಬಾಲಕಿಯರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಲ್ಲಿ ದಾಖಲಾಗಿದ್ದ ಒಟ್ಟು 100 ವಿದ್ಯಾರ್ಥಿನಿಯರ ಪೈಕಿ 11 ಮಂದಿ ಮಾತ್ರ ರಾತ್ರಿ ಹಠಾತ್ ತಪಾಸಣೆ ವೇಳೆ ಆವರಣದಲ್ಲಿ ಹಾಜರಿದ್ದುದು ಕಂಡುಬಂತು

ಉತ್ತರ ಪ್ರದೇಶ: ಅಧಿಕಾರಿಗಳಿಂದ ರಾತ್ರೋರಾತ್ರಿ ಶಾಲೆಯ ಹಾಸ್ಟೆಲ್​ ತಪಾಸಣೆ, 89 ವಿದ್ಯಾರ್ಥಿನಿಯರು ಇರಲೇ ಇಲ್ಲ
ಹಾಸ್ಟೆಲ್Image Credit source: NDTV
ನಯನಾ ರಾಜೀವ್
|

Updated on: Aug 23, 2023 | 8:10 AM

Share

ಉತ್ತರ ಪ್ರದೇಶದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಅಧಿಕಾರಿಗಳು ರಾತ್ರೋ ರಾತ್ರಿ ತಪಾಸಣೆ ನಡೆಸಿದ್ದು, 89 ಬಾಲಕಿಯರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಲ್ಲಿ ದಾಖಲಾಗಿದ್ದ ಒಟ್ಟು 100 ವಿದ್ಯಾರ್ಥಿನಿಯರ ಪೈಕಿ 11 ಮಂದಿ ಮಾತ್ರ ರಾತ್ರಿ ಹಠಾತ್ ತಪಾಸಣೆ ವೇಳೆ ಆವರಣದಲ್ಲಿ ಹಾಜರಿದ್ದುದು ಕಂಡುಬಂತು. ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಬಾಲಕಿಯರ ಶಾಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆ ನಡೆಸಲಾಯಿತು ಎಂದು ಜಿಲ್ಲಾಧಿಕಾರಿ ನೇಹಾ ಶರ್ಮಾ ತಿಳಿಸಿದ್ದಾರೆ.

ಅಲ್ಲಿ ಒಟ್ಟು 100 ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದಾರೆ, ಆದರೆ 11 ವಿದ್ಯಾರ್ಥಿನಿಯರು ಮಾತ್ರ ಶಾಲೆಯಲ್ಲಿ ಹಾಜರಿರುವುದು ಕಂಡುಬಂದಿದೆ. 89 ವಿದ್ಯಾರ್ಥಿನಿಯರ ಗೈರುಹಾಜರಿಯ ಬಗ್ಗೆ ವಾರ್ಡನ್ ಸರಿತಾ ಸಿಂಗ್ ಅವರನ್ನು ಕೇಳಿದಾಗ ತೃಪ್ತಿಕರ ಉತ್ತರವನ್ನು ನೀಡಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತ್ತಷ್ಟು ಓದಿ: ಕಾರವಾರ: ಅಧಿಕಾರ ಸ್ವೀಕರಿಸಲು ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಬಾಗಿಲು ಮುರಿದು ದಾಂಧಲೆ

ಈಗ ಆ 89 ವಿದ್ಯಾರ್ಥಿನಿಯರು ಎಲ್ಲಿದ್ದಾರೆ ಎನ್ನುವ ಮಾಹಿತಿಯನ್ನು ಕಲೆ ಹಾಕಬೇಕಿದೆ. ಇದು ಗಂಭೀರ ನಿರ್ಲಕ್ಷ್ಯ, ವಸತಿ ಬಾಲಕಿಯರ ಶಾಲೆಗಳನ್ನು ಈ ರೀತಿ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಾಲಾ ವಾರ್ಡನ್, ಪೂರ್ಣಾವಧಿ ಶಿಕ್ಷಕ, ಕಾವಲುಗಾರ ಮತ್ತು ಪ್ರಾಂತೀಯ ರಕ್ಷಣಾ ದಳದ (ಪಿಆರ್‌ಡಿ) ಜವಾನನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಪ್ರೇಮ್ ಚಂದ್ ಯಾದವ್ ತಿಳಿಸಿದ್ದಾರೆ.

ಇದರೊಂದಿಗೆ ನೌಕರರ ವಿರುದ್ಧವೂ ಇಲಾಖಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಕರ್ತವ್ಯದಲ್ಲಿರುವ ಸಿಬ್ಬಂದಿ ವಿರುದ್ಧ ಇಲಾಖಾ ಕ್ರಮಕ್ಕಾಗಿ ಜಿಲ್ಲಾ ಯುವ ಕಲ್ಯಾಣಾಧಿಕಾರಿಗೆ ಪ್ರತ್ಯೇಕ ಪತ್ರ ಬರೆಯಲಾಗಿದೆ ಎಂದು ಬಿಎಸ್‌ಎ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ