AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ಘರ್ ಯೋಜನೆ: 8 ತಿಂಗಳಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ, ಐದೇ ನಿಮಿಷದಲ್ಲಿ ಅರ್ಜಿ ಹಾಕ್ಬಹುದು

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್​ ಬಿಜ್ಲಿ ಯೋಜನೆ (PMSGMBY)ಯಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲು ಮುಂದಾಗಿದೆ. ಡಿಸ್ಕಾಂಗಳು ಈ ಯೋಜನೆಯಡಿ ಈಗಾಗಲೇ 40000 ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿವೆ. ಮುಂದಿನ 8 ತಿಂಗಳಲ್ಲಿ ಹೆಚ್ಚುವರಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲಾಗುವುದು ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಸೂರ್ಯ ಘರ್ ಯೋಜನೆ: 8 ತಿಂಗಳಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ, ಐದೇ ನಿಮಿಷದಲ್ಲಿ ಅರ್ಜಿ ಹಾಕ್ಬಹುದು
ಸೋಲಾರ್Image Credit source: Hindustan Times
Follow us
ನಯನಾ ರಾಜೀವ್
|

Updated on: Dec 05, 2024 | 11:04 AM

ನವದೆಹಲಿ, ಡಿಸೆಂಬರ್ 05: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್​ ಬಿಜ್ಲಿ ಯೋಜನೆ (PMSGMBY)ಯಲ್ಲಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲು ಮುಂದಾಗಿದೆ. ಡಿಸ್ಕಾಂಗಳು ಈ ಯೋಜನೆಯಡಿ ಈಗಾಗಲೇ 40000 ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿವೆ. ಮುಂದಿನ 8 ತಿಂಗಳಲ್ಲಿ ಹೆಚ್ಚುವರಿ 2 ಲಕ್ಷ ತಂತ್ರಜ್ಞರಿಗೆ ತರಬೇತಿ ನೀಡಲಾಗುವುದು ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಜಿನಿಯರ್ ಗಳಿಗೂ ತರಬೇತಿ: ಅಲ್ಲದೇ, 50,000ಕ್ಕೂ ಹೆಚ್ಚು DISCOM ಇಂಜಿನಿಯರ್‌ಗಳು ಮೇಲ್ಛಾವಣಿ ಸೌರ ಸ್ಥಾವರಗಳ ಪರಿಶೀಲನೆ ಮತ್ತು ಕಮಿಷನ್ ಮಾಡಲು ಹಾಗೂ ನೆಟ್ ಮೀಟರ್‌ಗಳನ್ನು ಒದಗಿಸಲು ವಿಶೇಷ ತರಬೇತಿ ಸಹ ಪಡೆಯುತ್ತಿದ್ದಾರೆ.

90ಕ್ಕೂ ಅಧಿಕ ಡಿಸ್ಕಾಂಗಳು ಕಾರ್ಯ ನಿರ್ವಹಣೆ: ದೇಶದಲ್ಲಿ 90ಕ್ಕೂ ಹೆಚ್ಚು ಡಿಸ್ಕಾಂಗಳು ಬ್ಯಾಂಕ್‌ಗಳು ಮತ್ತು ಮಧ್ಯಸ್ಥಗಾರರನ್ನು ಸಂಯೋಜಿಸಲು ಅನುವಾಗುವಂತೆ ಐಟಿ ವ್ಯವಸ್ಥೆ ನಿರ್ಮಿಸುವಲ್ಲಿ ಕಾರ್ಯಾಚರಣೆ ನಡೆಸಿವೆ.

ಸೂರ್ಯ ಘರ್ ಯೋಜನೆ ಫಲಾನುಭವಿಗಳಲ್ಲಿ ವಿದ್ಯುತ್ ಮಾರಾಟಗಾರರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸುಮಾರು 9,000 ಮಾರಾಟಗಾರರು ಸಕ್ರಿಯರಾಗಿದ್ದಾರೆ ಮತ್ತು ಪ್ರತಿ ದಿನ ಹೆಚ್ಚು ಹೆಚ್ಚು ಸೇರ್ಪಡೆಯಾಗುತ್ತಿದ್ದಾರೆ ಎಂದು ಇಂಧನ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ.

ಗುರಿ ಸಾಧನೆಯತ್ತ ಮಹತ್ವದ ಹೆಜ್ಜೆ: PMSGMBY ತನ್ನ ಮಹತ್ವಾಕಾಂಕ್ಷೆಯ ಗುರಿ ಸಾಧನೆಯತ್ತ ಮಹತ್ವದ ಹೆಜ್ಜೆ ಇರಿಸಿದೆ. 2025ರ ಮಾರ್ಚ್ ವೇಳೆಗೆ 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆಗೆ ಗುರಿ ಹಾಕಿಕೊಂಡಿದ್ದು, 2027ರ ವೇಳೆಗೆ ಒಂದು ಕೋಟಿ ಘಟಕಗಳ ಸ್ಥಾಪನೆ ಪೂರೈಸಲು ಮುಂದಾಗಿದೆ.

ಮತ್ತಷ್ಟು ಓದಿ: ಮನೆಮನೆಗೆ ಸೌರಶಕ್ತಿ; ಪಿಎಂ ಸೂರ್ಯಘರ್ ಯೋಜನೆಯಲ್ಲಿ 1.45 ಲಕ್ಷ ನೊಂದಣಿ; ಅರ್ಜಿ ಸಲ್ಲಿಸುವ ಕ್ರಮಗಳ ವಿವರ

ಯೋಜನೆ ಪ್ರಾರಂಭವಾದ ಬಳಿಕ ಮೇಲ್ಛಾವಣಿ ಸೌರ ಘಟಕ ಸ್ಥಾಪನೆ ಮಾಸಿಕವಾಗಿ ಹತ್ತು ಪಟ್ಟು ಹೆಚ್ಚಾಗುತ್ತಿವೆ. ಇನ್ನು ಮೂರು ತಿಂಗಳಲ್ಲಿ 10 ಲಕ್ಷ ಮೀರುವ ನಿರೀಕ್ಷೆಯಿದೆ. 2025ರ ಅಕ್ಟೋಬರ್ ವೇಳೆಗೆ 20 ಲಕ್ಷ, 2026ರ ಮಾರ್ಚ್ ವೇಳೆಗೆ 40 ಲಕ್ಷ ಮತ್ತು 2027ರ ಮಾರ್ಚ್ ವೇಳೆಗೆ ಒಂದು ಕೋಟಿ ಗುರಿ ತಲುಪುತ್ತದೆ ಎಂದು ನವೀಕರಿಸಬಹುದಾದ ಇಂಧನ ಸಚಿವಾಲಯ ವಿವರಣೆ ನೀಡಿದೆ.

9 ತಿಂಗಳಲ್ಲಿ 6.3 ಲಕ್ಷ ಸ್ಥಾಪನೆ: PMSGMBY ಕೇವಲ 9 ತಿಂಗಳಲ್ಲಿ 6.3 ಲಕ್ಷ ಸೌರ ಮೇಲ್ಛಾವಣಿ ಸ್ಥಾಪಿಸಿದೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳು ಅಸಾಧಾರಣ ಪ್ರಗತಿ ಪ್ರದರ್ಶಿಸಿವೆ.

4 ಲಕ್ಷ ಗ್ರಾಹಕರಿಗೆ ಸಬ್ಸಿಡಿ ಸಂದಾಯ: ನವೆಂಬರ್ 2024ರ ವೇಳೆಗೆ 4 ಲಕ್ಷಕ್ಕೂ ಹೆಚ್ಚು ಗ್ರಾಹಕರಿಗೆ ₹ 3,100 ಕೋಟಿಗೂ ಹೆಚ್ಚು ಸಬ್ಸಿಡಿ ಹಣ ವಿತರಿಸಲಾಗಿದೆ. ಮಾಸಿಕ ಸರಾಸರಿ 67,000 ಕುಟುಂಬಗಳು ಸಬ್ಸಿಡಿ ಪಡೆದಿವೆ. ಯೋಜನೆ ಅಳವಡಿಸಿಕೊಂಡ ಮನೆಗಳಿಗೆ 15 ದಿನಗಳಲ್ಲೇ ಸಬ್ಸಿಡಿ ಸಿಗುತ್ತಿರುವುದರಿಂದ ಗಣನೀಯ ಪ್ರಮಾಣದಲ್ಲಿ ಅರ್ಜಿಗಳು ಹರಿದು ಬರುತ್ತಿವೆ. ಈಗಾಗಲೇ ಶೇ.28ರಷ್ಟು ಕುಟುಂಬಗಳು ಶೂನ್ಯ ವಿದ್ಯುತ್ ಬಿಲ್‌ ಪಡೆಯುತ್ತಿವೆ ಎಂದು ಮಾಹಿತಿ ನೀಡಿದೆ ಇಂಧನ ಸಚಿವಾಲಯ.

ಜನ್ ಸಮರ್ಥ್ ಪೋರ್ಟಲ್: ಸೂರ್ಯ ಘರ್ ಯೋಜನೆಯಡಿ ವಿದ್ಯುತ್ ಮಾರಾಟಗಾರರನ್ನು ಪ್ರೋತ್ಸಾಹಿಸಲು 3kW ವರೆಗಿನ ಸಿಸ್ಟಮ್‌ಗಳಿಗಾಗಿ “ಜನ್ ಸಮರ್ಥ್ ಪೋರ್ಟಲ್” ಆರಂಭಿಸಿದ್ದು, ಫಲಾನುಭವಿಗಳಿಗೆ ಇದು ಕೈಗೆಟುಕುವ ಹಣಕಾಸು ಸೌಲಭ್ಯ ಆಯ್ಕೆ ಮಾಡಿಕೊಳ್ಳಲು ಪೂರಕವಾಗಿದೆ.

ಡಿಜಿಟಲಿಕರಣ-ಗ್ರಾಹಕ ಪ್ರಕ್ರಿಯೆ ಸರಳೀಕರಣ: ಗ್ರಾಹಕರ ನೋಂದಣಿ ಪ್ರಕ್ರಿಯೆ ಸರಳಗೊಳಿಸಲಾಗಿದೆ. ಸೂರ್ಯ ಘರ್ ಯೋಜನೆ ನೋಂದಣಿಗೆ ಈ ಹಿಂದೆ, ಅರ್ಜಿದಾರರು ಬಹು ದಾಖಲೆಗಲೊಂದಿಗೆ ಡಿಸ್ಕಾಂ ಕಚೇರಿಗಳಿಗೆ ಅಲೆಯಬೇಕಿತ್ತು. ಈಗ ಆ ತಾಪತ್ರಯವಿಲ್ಲ. ಎಲ್ಲದನ್ನೂ ಡಿಜಿಟಲೀಕರಣಗೊಳಿಸುವ ಮೂಲಕ ಪ್ರಕ್ರಿಯೆ ಸರಳಗೊಳಿಸಲಾಗಿದೆ.

ಐದೇ ನಿಮಿಷದಲ್ಲಿ ಅರ್ಜಿ ಸಲ್ಲಿಸಿ: ಸೂರ್ಯ ಘರ್ ಯೋಜನೆ ಆಕಾಂಕ್ಷಿಗಳು ವೆಬ್ ಸೈಟ್ ಅಲ್ಲಿ ನೇರವಾಗಿ ಮತ್ತು ಅಷ್ಟೇ ತ್ವರಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. www.pmsuryaghar.gov.in ನಲ್ಲಿ ಈಗ ಐದೇ ನಿಮಿಷಗಳಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ತಮ್ಮ ಮೇಲ್ಛಾವಣಿಯನ್ನು ನೋಡಲು ಮತ್ತು ಮೇಲ್ಛಾವಣಿಯ ಸೌರವ್ಯೂಹದ ಸಾಮರ್ಥ್ಯವನ್ನು ಯೋಜಿಸಲು ಪೋರ್ಟಲ್‌ನ GIS ವೈಶಿಷ್ಟ್ಯವನ್ನು ಸಹ ಬಳಸಬಹುದು. ಅಲ್ಲದೇ, ಶೇ.7ರ ಬಡ್ಡಿ ದರದಲ್ಲಿ ಸಾಲವನ್ನು ಸಹ ಈ ಪೋರ್ಟಲ್‌ನಲ್ಲಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಅನುಸ್ಥಾಪನೆ ನಂತರ ವಿವರಗಳನ್ನು ನಿಮಿಷಗಳಲ್ಲಿ ಅಪ್ಲೋಡ್ ಮಾಡಬಹುದು.

ಪೋರ್ಟಲ್ ಸ್ವಯಂ ಚಾಲಿತವಾಗಿ DISCOM ಗೆ ಪರಿಶೀಲಿಸಲು ತಿಳಿಸುತ್ತದೆ. ನಂತರ ಅರ್ಜಿದಾರರು ಪೋರ್ಟಲ್‌ನಲ್ಲಿ ಸಬ್ಸಿಡಿ ಪಡೆದುಕೊಳ್ಳಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್