AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬ್ಯಾಂಕ್ ಎಟಿಎಂ ಕೇಂದ್ರಗಳ ಸೇವೆ ನಾಳೆ ಅಕ್ಟೋಬರ್​ 1ರಿಂದ ಬಂದ್! ಕಾರಣವೇನು? ವಿವರ ಇಲ್ಲಿದೆ

ಬ್ಯಾಂಕ್​​ ಗ್ರಾಹಕರಿಗೆ ಎಟಿಎಂ ಕೇಂದ್ರಗಳು ಅತ್ಯಾಪ್ತ ಸ್ನೇಹಿತನಾಗಿ ಯಾವುದೋ ಕಾಲವಾಗಿದೆ. ಅದಿಲ್ಲದೆ ಬ್ಯಾಂಕ್​ ವಹಿವಾಟು ಕಷ್ಟಕಷ್ಟ ಎನ್ನುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಒಂದು ಬ್ಯಾಂಕ್ ತನ್ನ ಎಟಿಎಂ ಯಂತ್ರಗಳ ಸೇವೆಯನ್ನು ಬಂದ್ ಮಾಡಲು ಹೊರಟಿದೆ. ವಿವರ ಇಲ್ಲಿದೆ:

ಈ ಬ್ಯಾಂಕ್ ಎಟಿಎಂ ಕೇಂದ್ರಗಳ ಸೇವೆ ನಾಳೆ ಅಕ್ಟೋಬರ್​ 1ರಿಂದ ಬಂದ್! ಕಾರಣವೇನು? ವಿವರ ಇಲ್ಲಿದೆ
ನಾಳೆ ಅಕ್ಟೋಬರ್​ 1ರಿಂದ ಈ ಬ್ಯಾಂಕ್ ಎಟಿಎಂ ಯಂತ್ರಗಳು ಸೇವೆ ಬಂದ್! ವಿವರ ಇಲ್ಲಿದೆ
TV9 Web
| Edited By: ಸಾಧು ಶ್ರೀನಾಥ್​|

Updated on:Sep 30, 2021 | 9:57 AM

Share

ಮುಂಬೈ: ಬ್ಯಾಂಕ್​​ ಗ್ರಾಹಕರಿಗೆ ಎಟಿಎಂ ಕೇಂದ್ರಗಳು ಅತ್ಯಾಪ್ತ ಸ್ನೇಹಿತನಾಗಿ ಯಾವುದೋ ಕಾಲವಾಗಿದೆ. ಅದಿಲ್ಲದೆ ಬ್ಯಾಂಕ್​ ವಹಿವಾಟು ಕಷ್ಟಕಷ್ಟ ಎನ್ನುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಒಂದು ಬ್ಯಾಂಕ್ ತನ್ನ ಎಟಿಎಂ ಯಂತ್ರಗಳ ಸೇವೆಯನ್ನು ಬಂದ್ ಮಾಡಲು ಹೊರಟಿದೆ. ವಿವರ ಇಲ್ಲಿದೆ: ಹೌದು ನಾಳೆ ಅಕ್ಟೋಬರ್​ 1ರಿಂದ ಸೂರ್ಯೋದಯ್ ಸ್ಮಾಲ್​ ಫಿನಾನ್ಸ್ ಬ್ಯಾಂಕ್ (Suryoday Small Finance Bank) ತನ್ನ ಎಟಿಎಂ ಯಂತ್ರಗಳು (ATMs) ಮೂಲಕ ಡೆಬಿಟ್​ ಕಾರ್ಡ್​ ಮತ್ತು ಕ್ರೆಡಿಟ್​ ಕಾರ್ಡ್​ಗಳ ವಹಿವಾಟನ್ನು ಸ್ಥಗಿತಗೊಳಿಸಲಿದೆ.

ಕೋವಿಡ್​ 19 (Covid 19) ಅವಕೃಪೆಯಿಂದಾಗಿ 2021 ಜೂನ್​ 30 ರ ತ್ರೈಮಾಸಿಕ ವರದಿಯಲ್ಲಿ 48 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಅದಕ್ಕೂ ಮುನ್ನ ವರ್ಷದ ಹಿಂದೆ 27 ಕೋಟಿ ರೂಪಾಯಿ ನಷ್ಟಕ್ಕೊಳಗಾಗಿತ್ತು.

ಸೂರ್ಯೋದಯ್ ಸ್ಮಾಲ್​ ಫಿನಾನ್ಸ್ ಬ್ಯಾಂಕ್ (SSF Bank) ಷೆಡ್ಯೂಲ್ಡ್​ ಕಮರ್ಷಿಯಲ್​ ಬ್ಯಾಂಕ್​ ಆಗಿದ್ದು 2017ರಿಂದ ಸೇವೆ ಒದಗಸುತ್ತಿದೆ. 13 ರಾಜ್ಯಗಳಲ್ಲಿ ಇದರ ಕಾರ್ಯಚಟುವಟಿಕೆ ವಿಸ್ತರಿಸಿದೆ. 555 ಬ್ಯಾಂಕ್​ ಬ್ರಾಂಚ್​​ಗಳು ಸೇವೆ ಒದಗಿಸುತ್ತಿವೆ. ಮಹಾರಾಷ್ಟ್ರ, ತಮುಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿ ಹೆಚ್ಚಾಗಿ ಕಾರ್ಯಗತವಾಗಿದೆ.

ಕಾರ್ಯಕಾರಿ ಕಾರಣಗಳಿಂದಾಗಿ (operational reasons) ಈ ನಿರ್ಧಾರಕ್ಕೆ ಬರಲಾಗಿದೆ. ಆದರೂ SSF Bank ಬ್ಯಾಂಕ್​​ ಗ್ರಾಹಕರು ತಮ್ಮ ATM/Debit card ಗಳನ್ನು ಇತರೆ ಬ್ಯಾಂಕ್​​ಗಳ ATM ಕೇಂದ್ರಗಳಲ್ಲಿ ಬಳಕೆ ಮಾಡಬಹುದು ಎಂದು ಬ್ಯಾಂಕ್​ ತನ್ನ ವೆಬ್​ಸೈಟ್​​ನಲ್ಲಿ ತಿಳಿಸಿದೆ. ಆದರೂ SSF Bank ಬ್ಯಾಂಕ್​ನ ಇತರೆ ಇಂಟರ್ನೆಟ್​ ಬ್ಯಾಂಕಿಂಗ್​ ಸೇವೆಗಳು ಅಬಾಧಿತವಾಗಿ ಮುಂದುವರಿಯಲಿದೆ.

SSF Bank ಬ್ಯಾಂಕ್ ಕಳೆದ ತಿಂಗಳು ತನ್ನ ಷೇರುದಾರರ ಸಾಮಾನ್ಯ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸುವಾಗ ಭವಿಷ್ಯದಲ್ಲಿ ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಮೌಲ್ಯಯುತ ಸೇವೆ ಒದಗಿಸಿವಂತಾಗಲು ಈ ನಿರ್ಣಾಯ ಅನಿವಾರ್ಯ ಎಂದು ತಿಳಿಸಿತ್ತು.

ಇದನ್ನೂ ಓದಿ: ATM cash: ಸಮಯಕ್ಕೆ ಸರಿಯಾಗಿ ಹಣ ತುಂಬದೆ ಎಟಿಎಂ ಖಾಲಿಯಿದ್ದಲ್ಲಿ ಬ್ಯಾಂಕ್​ಗಳಿಗೆ 10 ಸಾವಿರ ರೂ. ದಂಡ ಇದನ್ನೂ ಓದಿ: SBI ATM: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 873 ಎಟಿಎಂಗಳಿಗೆ ಬಾಗಿಲು

Published On - 9:49 am, Thu, 30 September 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್