AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬ್ಯಾಂಕ್ ಎಟಿಎಂ ಕೇಂದ್ರಗಳ ಸೇವೆ ನಾಳೆ ಅಕ್ಟೋಬರ್​ 1ರಿಂದ ಬಂದ್! ಕಾರಣವೇನು? ವಿವರ ಇಲ್ಲಿದೆ

ಬ್ಯಾಂಕ್​​ ಗ್ರಾಹಕರಿಗೆ ಎಟಿಎಂ ಕೇಂದ್ರಗಳು ಅತ್ಯಾಪ್ತ ಸ್ನೇಹಿತನಾಗಿ ಯಾವುದೋ ಕಾಲವಾಗಿದೆ. ಅದಿಲ್ಲದೆ ಬ್ಯಾಂಕ್​ ವಹಿವಾಟು ಕಷ್ಟಕಷ್ಟ ಎನ್ನುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಒಂದು ಬ್ಯಾಂಕ್ ತನ್ನ ಎಟಿಎಂ ಯಂತ್ರಗಳ ಸೇವೆಯನ್ನು ಬಂದ್ ಮಾಡಲು ಹೊರಟಿದೆ. ವಿವರ ಇಲ್ಲಿದೆ:

ಈ ಬ್ಯಾಂಕ್ ಎಟಿಎಂ ಕೇಂದ್ರಗಳ ಸೇವೆ ನಾಳೆ ಅಕ್ಟೋಬರ್​ 1ರಿಂದ ಬಂದ್! ಕಾರಣವೇನು? ವಿವರ ಇಲ್ಲಿದೆ
ನಾಳೆ ಅಕ್ಟೋಬರ್​ 1ರಿಂದ ಈ ಬ್ಯಾಂಕ್ ಎಟಿಎಂ ಯಂತ್ರಗಳು ಸೇವೆ ಬಂದ್! ವಿವರ ಇಲ್ಲಿದೆ
TV9 Web
| Edited By: |

Updated on:Sep 30, 2021 | 9:57 AM

Share

ಮುಂಬೈ: ಬ್ಯಾಂಕ್​​ ಗ್ರಾಹಕರಿಗೆ ಎಟಿಎಂ ಕೇಂದ್ರಗಳು ಅತ್ಯಾಪ್ತ ಸ್ನೇಹಿತನಾಗಿ ಯಾವುದೋ ಕಾಲವಾಗಿದೆ. ಅದಿಲ್ಲದೆ ಬ್ಯಾಂಕ್​ ವಹಿವಾಟು ಕಷ್ಟಕಷ್ಟ ಎನ್ನುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಒಂದು ಬ್ಯಾಂಕ್ ತನ್ನ ಎಟಿಎಂ ಯಂತ್ರಗಳ ಸೇವೆಯನ್ನು ಬಂದ್ ಮಾಡಲು ಹೊರಟಿದೆ. ವಿವರ ಇಲ್ಲಿದೆ: ಹೌದು ನಾಳೆ ಅಕ್ಟೋಬರ್​ 1ರಿಂದ ಸೂರ್ಯೋದಯ್ ಸ್ಮಾಲ್​ ಫಿನಾನ್ಸ್ ಬ್ಯಾಂಕ್ (Suryoday Small Finance Bank) ತನ್ನ ಎಟಿಎಂ ಯಂತ್ರಗಳು (ATMs) ಮೂಲಕ ಡೆಬಿಟ್​ ಕಾರ್ಡ್​ ಮತ್ತು ಕ್ರೆಡಿಟ್​ ಕಾರ್ಡ್​ಗಳ ವಹಿವಾಟನ್ನು ಸ್ಥಗಿತಗೊಳಿಸಲಿದೆ.

ಕೋವಿಡ್​ 19 (Covid 19) ಅವಕೃಪೆಯಿಂದಾಗಿ 2021 ಜೂನ್​ 30 ರ ತ್ರೈಮಾಸಿಕ ವರದಿಯಲ್ಲಿ 48 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಅದಕ್ಕೂ ಮುನ್ನ ವರ್ಷದ ಹಿಂದೆ 27 ಕೋಟಿ ರೂಪಾಯಿ ನಷ್ಟಕ್ಕೊಳಗಾಗಿತ್ತು.

ಸೂರ್ಯೋದಯ್ ಸ್ಮಾಲ್​ ಫಿನಾನ್ಸ್ ಬ್ಯಾಂಕ್ (SSF Bank) ಷೆಡ್ಯೂಲ್ಡ್​ ಕಮರ್ಷಿಯಲ್​ ಬ್ಯಾಂಕ್​ ಆಗಿದ್ದು 2017ರಿಂದ ಸೇವೆ ಒದಗಸುತ್ತಿದೆ. 13 ರಾಜ್ಯಗಳಲ್ಲಿ ಇದರ ಕಾರ್ಯಚಟುವಟಿಕೆ ವಿಸ್ತರಿಸಿದೆ. 555 ಬ್ಯಾಂಕ್​ ಬ್ರಾಂಚ್​​ಗಳು ಸೇವೆ ಒದಗಿಸುತ್ತಿವೆ. ಮಹಾರಾಷ್ಟ್ರ, ತಮುಳುನಾಡು ಮತ್ತು ಒಡಿಶಾ ರಾಜ್ಯಗಳಲ್ಲಿ ಹೆಚ್ಚಾಗಿ ಕಾರ್ಯಗತವಾಗಿದೆ.

ಕಾರ್ಯಕಾರಿ ಕಾರಣಗಳಿಂದಾಗಿ (operational reasons) ಈ ನಿರ್ಧಾರಕ್ಕೆ ಬರಲಾಗಿದೆ. ಆದರೂ SSF Bank ಬ್ಯಾಂಕ್​​ ಗ್ರಾಹಕರು ತಮ್ಮ ATM/Debit card ಗಳನ್ನು ಇತರೆ ಬ್ಯಾಂಕ್​​ಗಳ ATM ಕೇಂದ್ರಗಳಲ್ಲಿ ಬಳಕೆ ಮಾಡಬಹುದು ಎಂದು ಬ್ಯಾಂಕ್​ ತನ್ನ ವೆಬ್​ಸೈಟ್​​ನಲ್ಲಿ ತಿಳಿಸಿದೆ. ಆದರೂ SSF Bank ಬ್ಯಾಂಕ್​ನ ಇತರೆ ಇಂಟರ್ನೆಟ್​ ಬ್ಯಾಂಕಿಂಗ್​ ಸೇವೆಗಳು ಅಬಾಧಿತವಾಗಿ ಮುಂದುವರಿಯಲಿದೆ.

SSF Bank ಬ್ಯಾಂಕ್ ಕಳೆದ ತಿಂಗಳು ತನ್ನ ಷೇರುದಾರರ ಸಾಮಾನ್ಯ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸುವಾಗ ಭವಿಷ್ಯದಲ್ಲಿ ತನ್ನ ಗ್ರಾಹಕರಿಗೆ ಇನ್ನೂ ಹೆಚ್ಚಿನ ಮೌಲ್ಯಯುತ ಸೇವೆ ಒದಗಿಸಿವಂತಾಗಲು ಈ ನಿರ್ಣಾಯ ಅನಿವಾರ್ಯ ಎಂದು ತಿಳಿಸಿತ್ತು.

ಇದನ್ನೂ ಓದಿ: ATM cash: ಸಮಯಕ್ಕೆ ಸರಿಯಾಗಿ ಹಣ ತುಂಬದೆ ಎಟಿಎಂ ಖಾಲಿಯಿದ್ದಲ್ಲಿ ಬ್ಯಾಂಕ್​ಗಳಿಗೆ 10 ಸಾವಿರ ರೂ. ದಂಡ ಇದನ್ನೂ ಓದಿ: SBI ATM: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 873 ಎಟಿಎಂಗಳಿಗೆ ಬಾಗಿಲು

Published On - 9:49 am, Thu, 30 September 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್