ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ […]

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ
ಸುಶಾಂತ್ ಸಿಂಗ್ ರಜಪೂತ್
Edited By:

Updated on: Jul 27, 2020 | 2:56 PM

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ ತಿಳಿಸಿದ್ದಾರೆ.

ಈ ಹಿಂದೆ ನಟಿ ಕಂಗನಾ ರನೌತ್​ ಸುಶಾಂತ್​ನ ಚಿತ್ರರಂಗದಲ್ಲಿ ಕಡೆಗಣಿಸಲು ಹಲವರು ಯತ್ನಿಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದರಲ್ಲಿ ಮಹೇಶ್​ ಭಟ್​ ಹಾಗೂ ಕರಣ್​ ಜೋಹರ್​ ಹೆಸರುಗಳು ಸಹ ಉಲ್ಲೇಖಿಸಿದ್ದರು.

Published On - 3:39 pm, Sun, 26 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us