AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ ಮದ್ಯ ಸೇವನೆ ಶಂಕೆ: ಮಧ್ಯಪ್ರದೇಶದಲ್ಲಿ 11 ಸಾವು, 8 ಮಂದಿ ಅಸ್ವಸ್ಥ

ಸೋಮವಾರ ರಾತ್ರಿ ಮನುಪುರ್ ಮತ್ತು ಪಹವಲಿ ಗ್ರಾಮದಲ್ಲಿ ಮದ್ಯ ಸೇವಿಸಿದ 11 ಮಂದಿ ಸಾವಿಗೀಡಾಗಿದ್ದು, ಮದ್ಯ ವಿಷಪೂರಿತವಾಗಿತ್ತೇ ಎಂಬುದು ಇನ್ನೂ ಖಚಿತವಾಗಿಲ್ಲ.

ವಿಷ ಮದ್ಯ ಸೇವನೆ ಶಂಕೆ: ಮಧ್ಯಪ್ರದೇಶದಲ್ಲಿ 11 ಸಾವು, 8 ಮಂದಿ ಅಸ್ವಸ್ಥ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Jan 12, 2021 | 1:29 PM

Share

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಮನುಪುರ್ ಮತ್ತು ಪಹವಲಿ ಗ್ರಾಮದಲ್ಲಿ ಶಂಕಿತ  ವಿಷ ಮದ್ಯ ಸೇವಿಸಿ 11 ಮಂದಿ ಸಾವಿಗೀಡಾಗಿದ್ದು 8 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮೊರೆನಾ ಎಸ್​ಪಿ ಅನುರಾಗ್ ಸುಜನಿಯಾ, ಸೋಮವಾರ ರಾತ್ರಿ ಈ ಘಟನೆ ಸಂಭವಿಸಿದೆ. ಗ್ರಾಮದ ಕೆಲವು ಜನರು ಬಿಳಿ ಬಣ್ಣದ ಮದ್ಯ  ಸೇವಿಸಿದ್ದು ಇದು ವಿಷ ಮದ್ಯ ಎಂದು ಶಂಕಿಸಲಾಗಿದೆ ಎಂದಿದ್ದಾರೆ. ಮದ್ಯ ಸೇವಿಸಿ ತೀವ್ರ ಅಸ್ವಸ್ಥರಾಗಿರುವ ಎಂಟು ಮಂದಿಯನ್ನು ಗ್ವಾಲಿಯರ್​ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ವರದಿ ಬಂದ ನಂತರವೇ ಜನರು ಸೇವಿಸಿದ ಮದ್ಯ ವಿಷಯುಕ್ತವಾಗಿತ್ತೇ ಎಂಬುದನ್ನು ಖಚಿತವಾಗಿ ಹೇಳಬಹುದು ಎಂದಿದ್ದಾರೆ ಅಧಿಕಾರಿಗಳು. 

ಈ ಘಟನೆಯಿಂದ ನನಗೆ ದುಃಖವಾಗಿದೆ.  ಪೊಲೀಸ್  ಠಾಣೆಯ ಉಸ್ತುವಾರಿ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡಲಾಗುವುದು. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಈ ತಂಡ ತನಿಖೆ ನಡೆಸಲಿದೆ. ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು  ಎಂದು  ಮಧ್ಯ ಪ್ರದೇಶದ ಸಚಿವ ನರೋಟ್ಟಂ ಮಿಶ್ರಾ ಹೇಳಿದ್ದಾರೆ.

ವಿಷಪೂರಿತ ಮದ್ಯ ಸೇವನೆ: ನಾಲ್ವರ ಸಾವು, 15 ಜನರು ಅಸ್ವಸ್ಥ

Published On - 11:52 am, Tue, 12 January 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​