AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರದ ಮೇಲೆ ದಾಳಿಗೆ ಸಂಚು; ಉಗ್ರ ಅಬ್ದುಲ್ ಬಂಧನ

ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿಗೆ ಉಗ್ರರು ಸಂಚು ರೂಪಿಸಿದ್ದರು. ಶಂಕಿತ ಭಯೋತ್ಪಾದಕ ಅಬ್ದುಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರ ಅಬ್ದುಲ್ ರಾಮ ಮಂದಿರದ ಮೇಲೆ ಗ್ರೇನೇಡ್ ದಾಳಿಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಹರಿಯಾಣದ ಫರಿದಾಬಾದ್‌ದಲ್ಲಿ ಅಬ್ದುಲ್ ರೆಹಮಾನ್ ಬಂಧಿಸಲಾಗಿದೆ. ಐಎಸ್‌ಐ ಸಂಪರ್ಕದಲ್ಲಿದ್ದ ಅಬ್ದುಲ್ ರೆಹಮಾನ್ ಪಿತೂರಿಯ ಭಾಗವಾಗಿ ಹಲವು ಬಾರಿ ರಾಮ ಮಂದಿರದ ಪರಿಶೀಲನೆ ನಡೆಸಿದ್ದ. ರಾಮಮಂದಿರದ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನದ ಐಎಸ್‌ಐ ಜೊತೆ ಹಂಚಿಕೊಂಡಿದ್ದ. ಆದರೆ ಅವನ ಯೋಜನೆ ಯಶಸ್ವಿಯಾಗುವ ಮೊದಲು ಗುಜರಾತ್ ಎಟಿಎಸ್ ಮತ್ತು ಫರಿದಾಬಾದ್ ಎಸ್‌ಟಿಎಫ್ ಶಂಕಿತ ಭಯೋತ್ಪಾದಕನನ್ನು ಬಂಧಿಸಿದೆ.

ರಾಮಮಂದಿರದ ಮೇಲೆ ದಾಳಿಗೆ ಸಂಚು; ಉಗ್ರ ಅಬ್ದುಲ್ ಬಂಧನ
Abdulla
ಸುಷ್ಮಾ ಚಕ್ರೆ
|

Updated on: Mar 03, 2025 | 7:12 PM

Share

ನವದೆಹಲಿ (ಮಾರ್ಚ್ 3): ಅಯೋಧ್ಯೆ ರಾಮಮಂದಿರದ ಮೇಲೆ ದಾಳಿಗೆ ಯತ್ನಿಸಿದ್ದ ಶಂಕಿತ ಉಗ್ರನನ್ನು ಫರಿದಾಬಾದ್‌ನಲ್ಲಿ ಬಂಧಿಸಲಾಗಿದೆ. ರಾಮ ಮಂದಿರ ಅವನ ಗುರಿಯಾಗಿತ್ತು ಎಂದು ಮೂಲಗಳು ತಿಳಿಸಿವೆ. ಗುಜರಾತ್ ಎಟಿಎಸ್ ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್‌ನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತನನ್ನು ಬಂಧಿಸಿದೆ. ಬಂಧಿತ ಆರೋಪಿ ಉತ್ತರ ಪ್ರದೇಶದ ಫೈಜಾಬಾದ್ ನಿವಾಸಿ. ಗುಜರಾತ್ ಎಟಿಎಸ್, ಕೇಂದ್ರ ಏಜೆನ್ಸಿಗಳು ಮತ್ತು ಪಲ್ವಾಲ್ ಎಸ್‌ಟಿಎಫ್ ಸಹಯೋಗದೊಂದಿಗೆ ಹರಿಯಾಣದ ಫರಿದಾಬಾದ್‌ನ ಶಂಕಿತ ಭಯೋತ್ಪಾದಕನನ್ನು ಬಂಧಿಸಿದೆ. ಭದ್ರತಾ ಪಡೆಗಳು ಅವನ ಬಳಿಯಿದ್ದ 2 ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿವೆ. ಮೂಲಗಳ ಪ್ರಕಾರ, ರಾಮ ಮಂದಿರ ಅವನ ಟಾರ್ಗೆಟ್ ಪಟ್ಟಿಯಲ್ಲಿತ್ತು.

ಶಂಕಿತನನ್ನು ಉತ್ತರ ಪ್ರದೇಶದ ನಿವಾಸಿ 19 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಂಕಿತ ಭಯೋತ್ಪಾದಕನನ್ನು ಭಾನುವಾರ ಬಂಧಿಸಲಾಯಿತು ಮತ್ತು ಗ್ರೆನೇಡ್‌ಗಳನ್ನು ಫರಿದಾಬಾದ್‌ನಲ್ಲಿ ಹರಡಲಾಯಿತು. ಮೂಲಗಳ ಪ್ರಕಾರ, ಗುಜರಾತ್ ಎಟಿಎಸ್‌ನ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ಗುಜರಾತ್ ಎಟಿಎಸ್ ರೆಹಮಾನ್‌ನನ್ನು ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ

ಪೊಲೀಸರ ಪ್ರಕಾರ, ಗುಜರಾತ್ ಎಟಿಎಸ್ ನಿಂದ ರೆಹಮಾನ್ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಜ್ಜಾಗಿದ್ದಾನೆಂದು ಅವರಿಗೆ ಮಾಹಿತಿ ಸಿಕ್ಕಿತು. ಇದಾದ ನಂತರ ಪ್ರಕರಣವನ್ನು ಹರಿಯಾಣ ಪೊಲೀಸರ ಪಲ್ವಾಲ್ ಎಸ್‌ಟಿಎಫ್‌ಗೆ ಹಸ್ತಾಂತರಿಸಲಾಯಿತು. ಎಸ್‌ಟಿಎಫ್ ಕಾರ್ಯಪ್ರವೃತ್ತರಾಗಿ ಗುಜರಾತ್ ಎಟಿಎಸ್ ಹಂಚಿಕೊಂಡ ಅಬ್ದುಲ್‌ನ ಚಿತ್ರದೊಂದಿಗೆ ಪರಿಶೀಲಿಸಲು ಪ್ರಾರಂಭಿಸಿತು. ಪಲ್ವಾಲ್ ಎಸ್‌ಟಿಎಫ್ ಮತ್ತು ಗುಜರಾತ್ ಎಟಿಎಸ್‌ನ ಜಂಟಿ ತಂಡಗಳು ಫರಿದಾಬಾದ್‌ನ ಪಾಲಿಯ ಬನ್ಸ್ ರಸ್ತೆಯಲ್ಲಿ ಅಬ್ದುಲ್‌ನನ್ನು ಬಂಧಿಸಿದವು. ಅವರಿಂದ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಅಬ್ದುಲ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ಹರಿಯಾಣ ಎಸ್‌ಟಿಎಫ್‌ನ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ