ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲೇ ಅಳಿಯನ ಹತ್ಯೆ; ಕೃತ್ಯವೆಸಗಿದ್ದು ಅಮಾನತುಗೊಂಡ ಪಂಜಾಬ್ ಪೊಲೀಸ್ ಎಐಜಿ

ಮಲ್ವಿಂದರ್ ಸಿಂಗ್ ಅವರು ಹರ್‌ಪ್ರೀತ್ ಸಿಂಗ್​​ ಗೆ ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಮೂರು ಗುಂಡುಗಳನ್ನು ಹಾರಿಸಿದ್ದು ಅವರನ್ನು  ತಕ್ಷಣವೇ ಬಂಧಿಸಲಾಯಿತು. ಸಿಂಗ್ ಹಾರಿಸಿದ ಗುಂಡು ಹರ್‌ಪ್ರೀತ್ ಸಿಂಗ್ ಎದೆಗೆ ನಾಟಿದ್ದು, ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಲ್ವಿಂದರ್ ಕೈಯಿಂದ ಕೃತ್ಯಕ್ಕೆ ಬಳಸಿದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ.

ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲೇ ಅಳಿಯನ ಹತ್ಯೆ; ಕೃತ್ಯವೆಸಗಿದ್ದು ಅಮಾನತುಗೊಂಡ ಪಂಜಾಬ್ ಪೊಲೀಸ್ ಎಐಜಿ
ಪ್ರಾತಿನಿಧಿಕ ಚಿತ್ರ
Follow us
|

Updated on: Aug 03, 2024 | 7:40 PM

ಚಂಡೀಗಢ ಆಗಸ್ಟ್ 03: ಭಾರತೀಯ ಸಿವಿಲ್ ಅಕೌಂಟ್ ಸರ್ವಿಸಸ್ (ICAS) ಅಧಿಕಾರಿಯಾಗಿದ್ದ ಹರ್‌ಪ್ರೀತ್ ಸಿಂಗ್ ಅವರನ್ನು ಅವರ ಮಾವ ಮಲ್ವಿಂದರ್ ಸಿಂಗ್ (Malwinder Singh), ಚಂಡೀಗಢದ (Chandigarh) 43ನೇ ಸೆಕ್ಟರ್‌ನ( ಜಿಲ್ಲಾ ನ್ಯಾಯಾಲಯಲ್ಲಿ ಶನಿವಾರ ಮಧ್ಯಾಹ್ನ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಲ್ವಿಂದರ್ ಸಿಂಗ್ ಪಂಜಾಬ್ ಪೊಲೀಸ್‌ನಲ್ಲಿ ಅಮಾನತು ಆಗಿರುವ ಅಸಿಸ್ಟೆಂಟ್ ಇನ್‌ಸ್ಪೆಕ್ಟರ್ ಜನರಲ್ (AIG) ಆಗಿದ್ದಾರೆ

ಮಲ್ವಿಂದರ್ ಸಿಂಗ್ ಅವರು ಹರ್‌ಪ್ರೀತ್ ಸಿಂಗ್​​ ಗೆ ಪಾಯಿಂಟ್-ಬ್ಲಾಂಕ್ ರೇಂಜ್‌ನಿಂದ ಮೂರು ಗುಂಡುಗಳನ್ನು ಹಾರಿಸಿದ್ದು ಅವರನ್ನು  ತಕ್ಷಣವೇ ಬಂಧಿಸಲಾಯಿತು. ಸಿಂಗ್ ಹಾರಿಸಿದ ಗುಂಡು ಹರ್‌ಪ್ರೀತ್ ಸಿಂಗ್ ಎದೆಗೆ ನಾಟಿದ್ದು, ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಲ್ವಿಂದರ್ ಕೈಯಿಂದ ಕೃತ್ಯಕ್ಕೆ ಬಳಸಿದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ.

ಮಲ್ವಿಂದರ್ ಸಿಂಗ್ ಅವರ ಪುತ್ರಿ ಡಾ.ಅಮಿತೋಜ್ ಕೌರ್ ಮತ್ತು ಹರ್‌ಪ್ರೀತ್ ಸಿಂಗ್ ನಡುವಿನ ವೈವಾಹಿಕ ಸಂಬಂಧದಲ್ಲಿ ಸಮಸ್ಯೆಗಳಿದ್ದು ಈ ವಿಷಯದಲ್ಲಿ ಇದು ನಾಲ್ಕನೇ ಮಧ್ಯಸ್ಥಿಕೆ ವಿಚಾರಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಕುಟುಂಬಗಳು ಮಧ್ಯಸ್ಥಿಕೆ ಮಾತುಕತೆಗಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು, ಈ ಸಮಯದಲ್ಲಿ ಮಲ್ವಿಂದರ್ ಸಿಂಗ್ ಅವರು ವಾಶ್ ರೂಂ ಅನ್ನು ಬಳಸಲು ವಿನಂತಿಸಿದ್ದು ದಾರಿ ತೋರಿಸುವಂತೆ ಹರ್‌ಪ್ರೀತ್  ಅವರಿಗೆ ಹೇಳಿದ್ದರು. ಸ್ವಲ್ಪ ಸಮಯದ ನಂತರ, ಅವರು ಪಿಸ್ತೂಲ್ ತೆಗೆದುಕೊಂಡು ಅವರು ಹರ್‌ಪ್ರೀತ್ ಸಿಂಗ್ ಮೇಲೆ ಗುಂಡು ಹಾರಿಸಿದರು.

ಹರ್‌ಪ್ರೀತ್  ಅವರ ಪೋಷಕರು, ಕೆಲವು ವಕೀಲರೊಂದಿಗೆ ಅವರನ್ನು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆ (PGIMER) ಗೆ ದೌಡಾಯಿಸಿದ್ದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

“2023 ರಿಂದ ಎರಡು ಕುಟುಂಬಗಳ ನಡುವೆ ವಿಚ್ಛೇದನ ಪ್ರಕ್ರಿಯೆಗಳು ನಡೆಯುತ್ತಿವೆ. ಮೊಹಾಲಿ ಜಿಲ್ಲೆಯಲ್ಲಿ ಎರಡೂ ಕಡೆಯವರು ಪರಸ್ಪರ ದೂರುವ ಹಿಂದಿನ ದಾವೆಗಳನ್ನು ಹೊಂದಿದ್ದಾರೆ. ಈ ವಿಷಯವನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಉಲ್ಲೇಖಿಸಲಾಯಿತು, ಅಲ್ಲಿ ನ್ಯಾಯಾಲಯವು ನೇಮಿಸಿದ ಮಧ್ಯವರ್ತಿಯಿಂದ ಪ್ರಕ್ರಿಯೆಗಳನ್ನು ನಡೆಸಲಾಯಿತು. ಹರ್‌ಪ್ರೀತ್ ಸಿಂಗ್ ಮತ್ತು ಅವರ ಹೆತ್ತವರು ಹಾಜರಿದ್ದರು. ಕೆನಡಾದಲ್ಲಿರುವ ಡಾ ಅಮಿತೋಜ್ ಅವರನ್ನು ತಂದೆ ಮಲ್ವಿಂದರ್ ಸಿಂಗ್ ಅವರು ಪ್ರತಿನಿಧಿಸುತ್ತಿದ್ದರು, ”ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಪವರ್ ಜಿಹಾದ್; ಔರಂಗಜೇಬ್ ಅಭಿಮಾನಿಗಳ ಕ್ಲಬ್ ಎಂದ ಅಮಿತ್​ ಶಾಗೆ ಉದ್ಧವ್ ಠಾಕ್ರೆ ತಿರುಗೇಟು

ಕಳೆದ ವರ್ಷ ನವೆಂಬರ್‌ನಲ್ಲಿ, ಪಂಜಾಬ್ ವಿಜಿಲೆನ್ಸ್ ಬ್ಯೂರೋ ಪಂಜಾಬ್ ಪೊಲೀಸರ ಮಾನವ ಹಕ್ಕುಗಳ ಸೆಲ್‌ನಲ್ಲಿ ಎಐಜಿಯಾಗಿ ನೇಮಕಗೊಂಡಿದ್ದ ಮಲ್ವಿಂದರ್ ಸಿಂಗ್ ಅವರ ವಿರುದ್ಧ ವಂಚನೆ ಮತ್ತು ಸುಲಿಗೆ ಆರೋಪದ ಮೇಲೆ ಪ್ರಕರಣ ದಾಖಲಿಸಿತ್ತು ನಂತರ ಅವರನ್ನು ಅಮಾನತುಗೊಳಿಸಲಾಗಿತ್ತು. ಅಂದಿನಿಂದ ಅವರು ಸೇವೆಯಿಂದ ಹೊರಗುಳಿದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?