AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್ ಬಳಿ ನನ್ನ ಕಾರು ಕಳ್ಳತನವಾಗಿರುವುದು ನಾಚಿಕೆಗೇಡಿನ ಸಂಗತಿ; ವಿಡಿಯೋ ಶೇರ್ ಮಾಡಿದ ಕಾಂಗ್ರೆಸ್ ನಾಯಕ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ರೀತಿಯ ಅಪರಾಧಗಳು ಬಹಿರಂಗವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಂಕುರಿ ಪಾಠಕ್ ಹೇಳಿದ್ದಾರೆ.

ತಿಹಾರ್ ಬಳಿ ನನ್ನ ಕಾರು ಕಳ್ಳತನವಾಗಿರುವುದು ನಾಚಿಕೆಗೇಡಿನ ಸಂಗತಿ; ವಿಡಿಯೋ ಶೇರ್ ಮಾಡಿದ ಕಾಂಗ್ರೆಸ್ ನಾಯಕ
ಕಾಂಗ್ರೆಸ್ ನಾಯಕನ ಕಾರು ಕಳ್ಳತನದ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 25, 2022 | 1:44 PM

ನವದೆಹಲಿ: ದೆಹಲಿಯ ಜನದಟ್ಟಣೆಯ ರಸ್ತೆಯಲ್ಲಿ ತನ್ನ ಕಾರನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ (Congress) ನಾಯಕರೊಬ್ಬರು ಟ್ವಿಟ್ಟರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪೋಸ್ಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ                      ಪಂಕುರಿ ಪಾಠಕ್ ರಾಷ್ಟ್ರ ರಾಜಧಾನಿಯ ತಿಹಾರ್ (Tihar) ಜೈಲಿನ ಬಳಿ ತನ್ನ ಕಾರನ್ನು ನಿಲ್ಲಿಸಿ ಹೋಗಿದ್ದರು. ಅಲ್ಲಿಂದ ಅವರ ಕಾರನ್ನು ಕಳವು ಮಾಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಘಟನೆಯು ತಿಹಾರ್‌ ಜೈಲಿನ ಮುಂದೆಯೇ ನಡೆದಿರುವುದು ನಾಚಿಕೆಗೇಡಿನ ಸಂಗತಿ. ದೆಹಲಿ ಎಷ್ಟು ಸುರಕ್ಷಿತವಾಗಿದೆ ಎಂದು ನೀವು ಊಹಿಸಬಹುದು ಎಂದು ಪಾಠಕ್ ಫೋಟೋಗಳ ಜೊತೆಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ರಾತ್ರಿ ನಮ್ಮ ಫಾರ್ಚುನರ್ ಕಾರು ಜನಕಪುರಿಯಲ್ಲಿ ಕಳ್ಳತನವಾಗಿದೆ. ಸುಮಾರು ಅರ್ಧ ಗಂಟೆಯ ಕಾಲ ಕಳ್ಳರ ಗುಂಪು ಆ ಸ್ಥಳಕ್ಕೆ ಬರುತ್ತಲೇ ಇದ್ದುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಅವರು ಎಸ್‌ಯುವಿಯನ್ನು ತೆರೆದು ಕದಿಯಲು ಯತ್ನಿಸಿದ್ದಾರೆ. ಹಲವಾರು ಬ್ಯಾಂಕ್‌ಗಳಿರುವ ಕಡೆ ನನ್ನ ಕಾರು ನಿಲ್ಲಿಸಲಾಗಿತ್ತು. ಆದರೂ ದರೋಡೆಕೋರರು ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

ಈ ಘಟನೆಯ ಬಗ್ಗೆ ಇತರರಿಗೆ ತಿಳಿಸಿದಾಗ ಅವರು ದೆಹಲಿಯಲ್ಲಿ ಕಾರು ಕಳ್ಳತನ ಸಾಮಾನ್ಯವಾಗಿದೆ ಎಂದು ನಮಗೆ ಹೇಳಿದರು. ತಿಹಾರ್‌ ಜೈಲಿನ ಮುಂಭಾಗದಲ್ಲಿ ನಿಲ್ಲಿಸಿದಾಗ ನಮ್ಮ ಕಾರು ಕಳ್ಳತನವಾಗಿದೆ ಎಂದಮೇಲೆ ದೆಹಲಿಯ ಉಳಿದ ಭಾಗಗಳ ಪರಿಸ್ಥಿತಿಯನ್ನು ನೀವು ಊಹಿಸಬಹುದು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ರೀತಿಯ ಅಪರಾಧಗಳು ಬಹಿರಂಗವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಂಕುರಿ ಪಾಠಕ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ