AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್ ಬಳಿ ನನ್ನ ಕಾರು ಕಳ್ಳತನವಾಗಿರುವುದು ನಾಚಿಕೆಗೇಡಿನ ಸಂಗತಿ; ವಿಡಿಯೋ ಶೇರ್ ಮಾಡಿದ ಕಾಂಗ್ರೆಸ್ ನಾಯಕ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ರೀತಿಯ ಅಪರಾಧಗಳು ಬಹಿರಂಗವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಂಕುರಿ ಪಾಠಕ್ ಹೇಳಿದ್ದಾರೆ.

ತಿಹಾರ್ ಬಳಿ ನನ್ನ ಕಾರು ಕಳ್ಳತನವಾಗಿರುವುದು ನಾಚಿಕೆಗೇಡಿನ ಸಂಗತಿ; ವಿಡಿಯೋ ಶೇರ್ ಮಾಡಿದ ಕಾಂಗ್ರೆಸ್ ನಾಯಕ
ಕಾಂಗ್ರೆಸ್ ನಾಯಕನ ಕಾರು ಕಳ್ಳತನದ ದೃಶ್ಯ
TV9 Web
| Edited By: |

Updated on: Nov 25, 2022 | 1:44 PM

Share

ನವದೆಹಲಿ: ದೆಹಲಿಯ ಜನದಟ್ಟಣೆಯ ರಸ್ತೆಯಲ್ಲಿ ತನ್ನ ಕಾರನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ (Congress) ನಾಯಕರೊಬ್ಬರು ಟ್ವಿಟ್ಟರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪೋಸ್ಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ                      ಪಂಕುರಿ ಪಾಠಕ್ ರಾಷ್ಟ್ರ ರಾಜಧಾನಿಯ ತಿಹಾರ್ (Tihar) ಜೈಲಿನ ಬಳಿ ತನ್ನ ಕಾರನ್ನು ನಿಲ್ಲಿಸಿ ಹೋಗಿದ್ದರು. ಅಲ್ಲಿಂದ ಅವರ ಕಾರನ್ನು ಕಳವು ಮಾಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಘಟನೆಯು ತಿಹಾರ್‌ ಜೈಲಿನ ಮುಂದೆಯೇ ನಡೆದಿರುವುದು ನಾಚಿಕೆಗೇಡಿನ ಸಂಗತಿ. ದೆಹಲಿ ಎಷ್ಟು ಸುರಕ್ಷಿತವಾಗಿದೆ ಎಂದು ನೀವು ಊಹಿಸಬಹುದು ಎಂದು ಪಾಠಕ್ ಫೋಟೋಗಳ ಜೊತೆಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ರಾತ್ರಿ ನಮ್ಮ ಫಾರ್ಚುನರ್ ಕಾರು ಜನಕಪುರಿಯಲ್ಲಿ ಕಳ್ಳತನವಾಗಿದೆ. ಸುಮಾರು ಅರ್ಧ ಗಂಟೆಯ ಕಾಲ ಕಳ್ಳರ ಗುಂಪು ಆ ಸ್ಥಳಕ್ಕೆ ಬರುತ್ತಲೇ ಇದ್ದುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂತರ ಅವರು ಎಸ್‌ಯುವಿಯನ್ನು ತೆರೆದು ಕದಿಯಲು ಯತ್ನಿಸಿದ್ದಾರೆ. ಹಲವಾರು ಬ್ಯಾಂಕ್‌ಗಳಿರುವ ಕಡೆ ನನ್ನ ಕಾರು ನಿಲ್ಲಿಸಲಾಗಿತ್ತು. ಆದರೂ ದರೋಡೆಕೋರರು ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸುರಿಯುತ್ತಿರುವ ಈ ಮಳೆ, ಬೀದಿನಾಯಿಗಳಿಗೆ ಆಶ್ರಯ ನೀಡಿದ ಮಹಿಳೆ, ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ

ಈ ಘಟನೆಯ ಬಗ್ಗೆ ಇತರರಿಗೆ ತಿಳಿಸಿದಾಗ ಅವರು ದೆಹಲಿಯಲ್ಲಿ ಕಾರು ಕಳ್ಳತನ ಸಾಮಾನ್ಯವಾಗಿದೆ ಎಂದು ನಮಗೆ ಹೇಳಿದರು. ತಿಹಾರ್‌ ಜೈಲಿನ ಮುಂಭಾಗದಲ್ಲಿ ನಿಲ್ಲಿಸಿದಾಗ ನಮ್ಮ ಕಾರು ಕಳ್ಳತನವಾಗಿದೆ ಎಂದಮೇಲೆ ದೆಹಲಿಯ ಉಳಿದ ಭಾಗಗಳ ಪರಿಸ್ಥಿತಿಯನ್ನು ನೀವು ಊಹಿಸಬಹುದು. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ರೀತಿಯ ಅಪರಾಧಗಳು ಬಹಿರಂಗವಾಗಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಪಂಕುರಿ ಪಾಠಕ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್