AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನಮಗೆ ಮಾತಾಡೋಕೆ ಬಿಡಲಿಲ್ಲ ಎಂದಿದ್ದ ಮಮತಾ ಬ್ಯಾನರ್ಜಿಗೆ ಮಾಜಿ ಆಪ್ತನಿಂದ ತಿರುಗೇಟು; ವ್ಯಂಗ್ಯ ಮಾಡಿದ ಸುವೇಂದು ಅಧಿಕಾರಿ

ಭೆಯ ಬಳಿಕ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ನಮಗೆ ಮಾತನಾಡಲು ಅವಕಾಶ ಕೊಡಲಿಲ್ಲ. ಬಿಜೆಪಿಯ ಕೆಲವು ಸಚಿವರುಗಳಿಗಷ್ಟೇ ಮೀಟಿಂಗ್​​ನಲ್ಲಿ ಮಾತನಾಡಲು ಸಾಧ್ಯವಾಯಿತು ಎಂದು ಆರೋಪಿಸಿದ್ದರು.

ಪ್ರಧಾನಿ ಮೋದಿ ನಮಗೆ ಮಾತಾಡೋಕೆ ಬಿಡಲಿಲ್ಲ ಎಂದಿದ್ದ ಮಮತಾ ಬ್ಯಾನರ್ಜಿಗೆ ಮಾಜಿ ಆಪ್ತನಿಂದ ತಿರುಗೇಟು; ವ್ಯಂಗ್ಯ ಮಾಡಿದ ಸುವೇಂದು ಅಧಿಕಾರಿ
ಮಮತಾ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ
Lakshmi Hegde
|

Updated on:May 20, 2021 | 11:30 PM

Share

ಕೊವಿಡ್​ 19 ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ನಮಗೆಲ್ಲ ಮಾತನಾಡಲು ಅವಕಾಶ ಕೊಡಲಿಲ್ಲ. ಈ ಮೂಲಕ ಅವಮಾನ ಮಾಡಿದರು ಎಂದು ಹೇಳಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಬಿಜೆಪಿ ಶಾಸಕ, ಟಿಎಂಸಿ ಮಾಜಿ ನಾಯಕ, ಒಂದು ಕಾಲದಲ್ಲಿ ದೀದಿಯ ಆಪ್ತನೇ ಆಗಿದ್ದ ಸುವೇಂದು ಅಧಿಕಾರಿ ಕಟು ತಿರುಗೇಟು ನೀಡಿದ್ದಾರೆ. ಹಿಂದಿನ ಎಲ್ಲ ಸಭೆಗಳನ್ನೂ ತಪ್ಪಿಸಿಕೊಂಡಿರುವ ಮಮತಾ ಬ್ಯಾನರ್ಜಿ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲೂ ರಾಜಕೀಯವನ್ನೇ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮಾತನಾಡಿದ ಮಮತಾ ಬ್ಯಾನರ್ಜಿ ವಿರುದ್ಧ ಟ್ವೀಟ್ ಮಾಡಿರುವ ಸುವೇಂದು ಅಧಿಕಾರಿ, ನಮ್ಮ ಗೌರವಾನ್ವಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಆಡಳಿತದಲ್ಲಿನ ತಮ್ಮ ನಿರಾಸಕ್ತಿಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದ್ದಾರೆ. ಕೊವಿಡ್​ 19 ವಿರುದ್ಧ ಹೋರಾಡಲು ಅಗತ್ಯ ಕ್ರಮ ತೆಗೆದುಕೊಳ್ಳುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ್ದ ಸಭೆಗೂ ರಾಜಕೀಯ ಲೇಪನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಲ್ಲ ರಾಜ್ಯಗಳಲ್ಲಿನ ಕೊರೊನಾ ವೈರಸ್​ ಪರಿಸ್ಥಿತಿಯ ಅವಲೋಕನ ಮಾಡಲು ಕಳೆದ ಹಲವು ತಿಂಗಳುಗಳಿಂದಲೂ ಪ್ರಧಾನಿ ನರೇಂದ್ರ ಮೋದಿಯವರು ಕಾಲಕಾಲಕ್ಕೆ ಮುಖ್ಯಮಂತ್ರಿಗಳೊಟ್ಟಿಗೆ ಸಭೆ ನಡೆಸುತ್ತಿದ್ದಾರೆ. ಅದರಲ್ಲಿ ಎಷ್ಟು ಸಭೆಯಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಂಡಿದ್ದಾರೆ? ಇಲ್ಲ, ಒಂದರಲ್ಲೂ ಪಾಲ್ಗೊಂಡಿರಲಿಲ್ಲ ಎಂದು ಸುವೇಂದು ಅಧಿಕಾರಿ ವ್ಯಂಗ್ಯವಾಡಿದ್ದಾರೆ.

ಇಂದು ಸಭೆಯ ಬಳಿಕ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ನಮಗೆ ಮಾತನಾಡಲು ಅವಕಾಶ ಕೊಡಲಿಲ್ಲ. ಬಿಜೆಪಿಯ ಕೆಲವು ಸಚಿವರುಗಳಿಗಷ್ಟೇ ಮೀಟಿಂಗ್​​ನಲ್ಲಿ ಮಾತನಾಡಲು ಸಾಧ್ಯವಾಯಿತು ಎಂದು ಆರೋಪಿಸಿದ್ದರು. ಅಲ್ಲದೆ, ನಾವೆಲ್ಲ ಅವರ ಕೈಗೊಂಬೆಗಳಂತೆ ಕುಳಿತಿರಬೇಕಾಯಿತು ಎಂದೂ ಕಿಡಿಕಾರಿದ್ದರು.

ಇದನ್ನೂ ಓದಿ: ‘ಸಭೆಯಲ್ಲಿ ನಾವೆಲ್ಲ ಅವರ ಕೈಗೊಂಬೆಗಳಂತೆ ಕುಳಿತಿರಬೇಕು..ಇದು ದೊಡ್ಡ ಅವಮಾನ’-ಪ್ರಧಾನಿ ಮೋದಿ ವಿರುದ್ಧ ದೀದಿ ಅಸಮಾಧಾನ

 ಮದುವೆಗೆ ಹೋದವರಿಗೆ ಫುಲ್​ ಶಾಕ್​ ಕೊಟ್ಟ ಪೊಲೀಸರು; ಕಪ್ಪೆಯಂತೆ ಜಿಗಿಯುತ್ತ ವಾಪಸ್​ ಬಂದ ಅತಿಥಿಗಳು

Published On - 11:29 pm, Thu, 20 May 21

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು