AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ ಸುವೇಂದು ಅಧಿಕಾರಿ ನೀಡಿದ ರಾಜಿನಾಮೆ ಅಂಗೀಕಾರವಾಗಿದೆ. ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ
ಸಾಂದರ್ಭಿಕ ಚಿತ್ರ
guruganesh bhat
| Updated By: ಸಾಧು ಶ್ರೀನಾಥ್​|

Updated on: Nov 28, 2020 | 1:36 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ, ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ರಾಜೀನಾಮೆ ನೀಡಿದ್ದಾರೆ. ಇ ಮೇಲ್ ಮೂಲಕ ಕಳಿಸಿದ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಖಾರ್​  ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಚಳುವಳಿ ಹಿನ್ನೆಲೆಯ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ದೀದೀ ನಂತರ ಸುವೇಂದು ಅಧಿಕಾರಿಯವರ ಹೆಸರು ಕೇಳಿಬರುತ್ತಿತ್ತು. ನಂದಿಗ್ರಾಮ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿ, 2011ರಲ್ಲಿ ಮಮತಾ ಬ್ಯಾನರ್ಜಿ ಅಧಿಕಾರ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ‘ಪಕ್ಷದ ಇತ್ತೀಚಿನ ತೀರ್ಮಾನಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ನಾನು ನೇರವಾಗಿ ಈ ಹಂತಕ್ಕೆ ತಲುಪಿಲ್ಲ. ಚಳುವಳಿ, ಹೋರಾಟಗಳು ನನ್ನನ್ನು ಬೆಳೆಸಿವೆ’ ಎಂದು ಅವರು ಹೇಳಿಕೆ ನೀಡಿದ್ದರು.

ಬಿಜೆಪಿಯಿಂದ ಆಹ್ವಾನ ಸುವೇಂದು ಅಧಿಕಾರಿಯವರ ರಾಜೀನಾಮೆ ಬೆನ್ನಲ್ಲೇ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನ ಯುಗ ಮುಗಿಯುತ್ತಿದೆ. ಟಿಎಂಸಿ ತೊರೆಯುವ ಎಲ್ಲ ನಾಯಕರಿಗೂ ಬಿಜೆಪಿಗೆ ಮುಕ್ತ ಸ್ವಾಗತವಿದೆ ಎಂದು ಘೋಷಿಸಿದ್ದಾರೆ. ಅಲ್ಲದೇ, ಇನ್ನೋರ್ವ ಟಿಎಂಸಿ ಶಾಸಕ ಮಿಹಿರ್ ಗೋಸ್ವಾಮಿ ಸಹ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಸುವೇಂದು ಎಲ್ಲಿಗೂ ಹೋಗಲ್ಲ ಎಂದ ಟಿಎಂಸಿ ಈ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ, ‘ಸುವೇಂದು ಅಧಿಕಾರಿ ಎಂದಿಗೂ ಪಕ್ಷ ತೊರೆಯುವುದಿಲ್ಲ. ಅವರ ಬಿಜೆಪಿ ಸೇರ್ಪಡೆ ಸುದ್ದಿಗಳು ಕೇವಲ ಊಹಾಪೋಹಗಳಷ್ಟೇ. ಅವರ ಅಸಮಾಧಾನವನ್ನು ಸದ್ಯದಲ್ಲೇ ಪರಿಹರಿಸಲಾಗುವುದು’ ಎಂದು ತಿಳಿಸಿದೆ.

ಜೊತೆಗೆ, 2021ರ ಎಪ್ರಿಲ್-ಮೇಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಡಿಸೆಂಬರ್ 7ರಿಂದ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ ಎಂದು ಟಿಎಂಸಿ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ:  ತಾಕತ್ತಿದ್ದರೆ ಅರೆಸ್ಟ್ ಮಾಡಿ, ಜೈಲಲ್ಲಿ ಇದ್ದುಕೊಂಡೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ; ಬಿಜೆಪಿಗೆ ದೀದಿ ಓಪನ್​ ಚಾಲೆಂಜ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ