AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ ಸುವೇಂದು ಅಧಿಕಾರಿ ನೀಡಿದ ರಾಜಿನಾಮೆ ಅಂಗೀಕಾರವಾಗಿದೆ. ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Nov 28, 2020 | 1:36 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ, ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ರಾಜೀನಾಮೆ ನೀಡಿದ್ದಾರೆ. ಇ ಮೇಲ್ ಮೂಲಕ ಕಳಿಸಿದ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಖಾರ್​  ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಚಳುವಳಿ ಹಿನ್ನೆಲೆಯ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ದೀದೀ ನಂತರ ಸುವೇಂದು ಅಧಿಕಾರಿಯವರ ಹೆಸರು ಕೇಳಿಬರುತ್ತಿತ್ತು. ನಂದಿಗ್ರಾಮ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿ, 2011ರಲ್ಲಿ ಮಮತಾ ಬ್ಯಾನರ್ಜಿ ಅಧಿಕಾರ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ‘ಪಕ್ಷದ ಇತ್ತೀಚಿನ ತೀರ್ಮಾನಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ನಾನು ನೇರವಾಗಿ ಈ ಹಂತಕ್ಕೆ ತಲುಪಿಲ್ಲ. ಚಳುವಳಿ, ಹೋರಾಟಗಳು ನನ್ನನ್ನು ಬೆಳೆಸಿವೆ’ ಎಂದು ಅವರು ಹೇಳಿಕೆ ನೀಡಿದ್ದರು.

ಬಿಜೆಪಿಯಿಂದ ಆಹ್ವಾನ ಸುವೇಂದು ಅಧಿಕಾರಿಯವರ ರಾಜೀನಾಮೆ ಬೆನ್ನಲ್ಲೇ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನ ಯುಗ ಮುಗಿಯುತ್ತಿದೆ. ಟಿಎಂಸಿ ತೊರೆಯುವ ಎಲ್ಲ ನಾಯಕರಿಗೂ ಬಿಜೆಪಿಗೆ ಮುಕ್ತ ಸ್ವಾಗತವಿದೆ ಎಂದು ಘೋಷಿಸಿದ್ದಾರೆ. ಅಲ್ಲದೇ, ಇನ್ನೋರ್ವ ಟಿಎಂಸಿ ಶಾಸಕ ಮಿಹಿರ್ ಗೋಸ್ವಾಮಿ ಸಹ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಸುವೇಂದು ಎಲ್ಲಿಗೂ ಹೋಗಲ್ಲ ಎಂದ ಟಿಎಂಸಿ ಈ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ, ‘ಸುವೇಂದು ಅಧಿಕಾರಿ ಎಂದಿಗೂ ಪಕ್ಷ ತೊರೆಯುವುದಿಲ್ಲ. ಅವರ ಬಿಜೆಪಿ ಸೇರ್ಪಡೆ ಸುದ್ದಿಗಳು ಕೇವಲ ಊಹಾಪೋಹಗಳಷ್ಟೇ. ಅವರ ಅಸಮಾಧಾನವನ್ನು ಸದ್ಯದಲ್ಲೇ ಪರಿಹರಿಸಲಾಗುವುದು’ ಎಂದು ತಿಳಿಸಿದೆ.

ಜೊತೆಗೆ, 2021ರ ಎಪ್ರಿಲ್-ಮೇಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಡಿಸೆಂಬರ್ 7ರಿಂದ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ ಎಂದು ಟಿಎಂಸಿ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ:  ತಾಕತ್ತಿದ್ದರೆ ಅರೆಸ್ಟ್ ಮಾಡಿ, ಜೈಲಲ್ಲಿ ಇದ್ದುಕೊಂಡೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ; ಬಿಜೆಪಿಗೆ ದೀದಿ ಓಪನ್​ ಚಾಲೆಂಜ್

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ