AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ ಸುವೇಂದು ಅಧಿಕಾರಿ ನೀಡಿದ ರಾಜಿನಾಮೆ ಅಂಗೀಕಾರವಾಗಿದೆ. ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Nov 28, 2020 | 1:36 PM

Share

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ, ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ರಾಜೀನಾಮೆ ನೀಡಿದ್ದಾರೆ. ಇ ಮೇಲ್ ಮೂಲಕ ಕಳಿಸಿದ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಖಾರ್​  ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಚಳುವಳಿ ಹಿನ್ನೆಲೆಯ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ದೀದೀ ನಂತರ ಸುವೇಂದು ಅಧಿಕಾರಿಯವರ ಹೆಸರು ಕೇಳಿಬರುತ್ತಿತ್ತು. ನಂದಿಗ್ರಾಮ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿ, 2011ರಲ್ಲಿ ಮಮತಾ ಬ್ಯಾನರ್ಜಿ ಅಧಿಕಾರ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ‘ಪಕ್ಷದ ಇತ್ತೀಚಿನ ತೀರ್ಮಾನಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ನಾನು ನೇರವಾಗಿ ಈ ಹಂತಕ್ಕೆ ತಲುಪಿಲ್ಲ. ಚಳುವಳಿ, ಹೋರಾಟಗಳು ನನ್ನನ್ನು ಬೆಳೆಸಿವೆ’ ಎಂದು ಅವರು ಹೇಳಿಕೆ ನೀಡಿದ್ದರು.

ಬಿಜೆಪಿಯಿಂದ ಆಹ್ವಾನ ಸುವೇಂದು ಅಧಿಕಾರಿಯವರ ರಾಜೀನಾಮೆ ಬೆನ್ನಲ್ಲೇ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನ ಯುಗ ಮುಗಿಯುತ್ತಿದೆ. ಟಿಎಂಸಿ ತೊರೆಯುವ ಎಲ್ಲ ನಾಯಕರಿಗೂ ಬಿಜೆಪಿಗೆ ಮುಕ್ತ ಸ್ವಾಗತವಿದೆ ಎಂದು ಘೋಷಿಸಿದ್ದಾರೆ. ಅಲ್ಲದೇ, ಇನ್ನೋರ್ವ ಟಿಎಂಸಿ ಶಾಸಕ ಮಿಹಿರ್ ಗೋಸ್ವಾಮಿ ಸಹ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಸುವೇಂದು ಎಲ್ಲಿಗೂ ಹೋಗಲ್ಲ ಎಂದ ಟಿಎಂಸಿ ಈ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ, ‘ಸುವೇಂದು ಅಧಿಕಾರಿ ಎಂದಿಗೂ ಪಕ್ಷ ತೊರೆಯುವುದಿಲ್ಲ. ಅವರ ಬಿಜೆಪಿ ಸೇರ್ಪಡೆ ಸುದ್ದಿಗಳು ಕೇವಲ ಊಹಾಪೋಹಗಳಷ್ಟೇ. ಅವರ ಅಸಮಾಧಾನವನ್ನು ಸದ್ಯದಲ್ಲೇ ಪರಿಹರಿಸಲಾಗುವುದು’ ಎಂದು ತಿಳಿಸಿದೆ.

ಜೊತೆಗೆ, 2021ರ ಎಪ್ರಿಲ್-ಮೇಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಡಿಸೆಂಬರ್ 7ರಿಂದ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ ಎಂದು ಟಿಎಂಸಿ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ:  ತಾಕತ್ತಿದ್ದರೆ ಅರೆಸ್ಟ್ ಮಾಡಿ, ಜೈಲಲ್ಲಿ ಇದ್ದುಕೊಂಡೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ; ಬಿಜೆಪಿಗೆ ದೀದಿ ಓಪನ್​ ಚಾಲೆಂಜ್

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು