AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ
ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ಪ್ರವಾಸ
TV9 Web
| Edited By: |

Updated on:Apr 06, 2022 | 11:33 PM

Share

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಿಡ್ನಾಪುರ್​ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಅವರು ಭಾಗವಹಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಗೊಳಿಸುವ, ಹಿರಿಯರು ಮೆಚ್ಚುವಂಥಾ ರಾಜ್ಯ ಕಟ್ಟುವ ಆಶಯವನ್ನು ಸುವೇಂದು ಅಧಿಕಾರಿ ಹೇಳಿದ್ದಾರೆ. ಅಧಿಕಾರಿ ಜೊತೆಗೆ ತಪಸಿ ಮೊಂಡಲ್, ಅಶೋಕೆ ದಿಂಡಾ, ಸುದೀಪ್ ಮುಖರ್ಜಿ, ಸಾಯ್ಕತ್ ಪಂಜಾ, ಶಿಲ್​ಭದ್ರ ದತ್ತಾ, ದೀಪಾಲಿ ಬಿಸ್ವಾಸ್, ಸುಕ್ರ ಮುಂಡ, ಶ್ಯಾಮಾಪ್ದ ಮುಖರ್ಜಿ, ಬಿಸ್ವಜಿತ್ ಕುಂಡು, ಬನಸ್ರಿ ಮೈತಿ ಕೂಡ ಬಿಜೆಪಿ ಸೇರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ. ಪಕ್ಷ ಸಂಘಟನೆಯ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆ ಕೊಲ್ಕತ್ತಾದ ರಾಮಕೃಷ್ಣ ಆಶ್ರಮ, ಸ್ವಾಮಿ ವಿವೇಕಾನಂದರ ವಂಶಸ್ಥರ ಮನೆಗೆ ಭೇಟಿ ನೀಡಿದ್ದರು. ಬಳಿಕ ಸಿದ್ಧೇಶ್ವರಿ ಮಹಮಾಯಾ ದೇವಾಲಯಕ್ಕೆ ಹಾಗೂ ಕ್ರಾಂತಿಕಾರ ಹೋರಾಟಗಾರ ಖಾದಿರಾಮ್ ಬೋಸ್ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದರು. ಬೆಲಿಜುರಿ ಗ್ರಾಮದ ರೈತರೊಬ್ಬರ ಮನೆಯಲ್ಲಿ ಮಧ್ಯಾಹ್ನ ಭೋಜನ ಸ್ವೀಕರಿಸಿದ್ದಾರೆ.

ಬಿಜೆಪಿ ರ್ಯಾಲಿ ಸಂದರ್ಭ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ನಾಯಕರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಅಮಿತ್ ಶಾ ಕೂಡ ಸೂಚನೆ ನೀಡಿದ್ದರು. ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅಮಿತ್ ಶಾ ಜೊತೆ ಮಿಡ್ನಾಪುರ್​ಗೆ ಬರುವ ಸಾಧ್ಯತೆ ಇದೆ ಎಂದು ಈ ಮೊದಲೇ ಹೇಳಲಾಗಿತ್ತು.

ರಾಜೀನಾಮೆ ಪರ್ವ: TMCಗೆ ಬೇಡವಾದ ಹಳಸಲುಗಳು ಪಕ್ಷ ತ್ಯಜಿಸಿವೆ- ಮಮತಾ ಬ್ಯಾನರ್ಜಿ

Published On - 4:02 pm, Sat, 19 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!