AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳ: ಅಮಿತ್ ಶಾ ಸಮ್ಮುಖದಲ್ಲಿ ಸುವೇಂದು ಅಧಿಕಾರಿ, 11 ಶಾಸಕರು, 1 ಎಂಪಿ ಬಿಜೆಪಿ ಸೇರ್ಪಡೆ
ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ಪ್ರವಾಸ
TV9 Web
| Edited By: |

Updated on:Apr 06, 2022 | 11:33 PM

Share

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಿಡ್ನಾಪುರ್​ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಅವರು ಭಾಗವಹಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಗೊಳಿಸುವ, ಹಿರಿಯರು ಮೆಚ್ಚುವಂಥಾ ರಾಜ್ಯ ಕಟ್ಟುವ ಆಶಯವನ್ನು ಸುವೇಂದು ಅಧಿಕಾರಿ ಹೇಳಿದ್ದಾರೆ. ಅಧಿಕಾರಿ ಜೊತೆಗೆ ತಪಸಿ ಮೊಂಡಲ್, ಅಶೋಕೆ ದಿಂಡಾ, ಸುದೀಪ್ ಮುಖರ್ಜಿ, ಸಾಯ್ಕತ್ ಪಂಜಾ, ಶಿಲ್​ಭದ್ರ ದತ್ತಾ, ದೀಪಾಲಿ ಬಿಸ್ವಾಸ್, ಸುಕ್ರ ಮುಂಡ, ಶ್ಯಾಮಾಪ್ದ ಮುಖರ್ಜಿ, ಬಿಸ್ವಜಿತ್ ಕುಂಡು, ಬನಸ್ರಿ ಮೈತಿ ಕೂಡ ಬಿಜೆಪಿ ಸೇರಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿದ್ದಾರೆ. ಪಕ್ಷ ಸಂಘಟನೆಯ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಬೆಳಗ್ಗೆ ಕೊಲ್ಕತ್ತಾದ ರಾಮಕೃಷ್ಣ ಆಶ್ರಮ, ಸ್ವಾಮಿ ವಿವೇಕಾನಂದರ ವಂಶಸ್ಥರ ಮನೆಗೆ ಭೇಟಿ ನೀಡಿದ್ದರು. ಬಳಿಕ ಸಿದ್ಧೇಶ್ವರಿ ಮಹಮಾಯಾ ದೇವಾಲಯಕ್ಕೆ ಹಾಗೂ ಕ್ರಾಂತಿಕಾರ ಹೋರಾಟಗಾರ ಖಾದಿರಾಮ್ ಬೋಸ್ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದರು. ಬೆಲಿಜುರಿ ಗ್ರಾಮದ ರೈತರೊಬ್ಬರ ಮನೆಯಲ್ಲಿ ಮಧ್ಯಾಹ್ನ ಭೋಜನ ಸ್ವೀಕರಿಸಿದ್ದಾರೆ.

ಬಿಜೆಪಿ ರ್ಯಾಲಿ ಸಂದರ್ಭ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ನಾಯಕರು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಅಮಿತ್ ಶಾ ಕೂಡ ಸೂಚನೆ ನೀಡಿದ್ದರು. ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅಮಿತ್ ಶಾ ಜೊತೆ ಮಿಡ್ನಾಪುರ್​ಗೆ ಬರುವ ಸಾಧ್ಯತೆ ಇದೆ ಎಂದು ಈ ಮೊದಲೇ ಹೇಳಲಾಗಿತ್ತು.

ರಾಜೀನಾಮೆ ಪರ್ವ: TMCಗೆ ಬೇಡವಾದ ಹಳಸಲುಗಳು ಪಕ್ಷ ತ್ಯಜಿಸಿವೆ- ಮಮತಾ ಬ್ಯಾನರ್ಜಿ

Published On - 4:02 pm, Sat, 19 December 20

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ