SVAMITVA Scheme: ಏನಿದು ಸ್ವಾಮಿತ್ವ ಯೋಜನೆ? ಇನ್ನು ಹಳ್ಳಿ ಜನರು ಬ್ಯಾಂಕ್​ಗಳಲ್ಲಿ ಸಾಲ ಪಡೆಯುವುದು ಸುಲಭ

ಗ್ರಾಮೀಣ ಭಾರತದಲ್ಲಿ ಆಸ್ತಿಗಳನ್ನು ಸಕ್ರಮಗೊಳಿಸಲು ಮತ್ತು ಆರ್ಥಿಕ ಅಭಿವೃದ್ಧಿಯ ಆಧಾರವಾಗಿಸಲು ಸ್ವಾಮಿತ್ವ ಯೋಜನೆಯಡಿ 2.19 ಕೋಟಿ ಆಸ್ತಿ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಯೋಜನೆಯು ಮಾರ್ಚ್ 2026 ರೊಳಗೆ ಪೂರ್ಣಗೊಳ್ಳಲಿದೆ. ಪಂಚಾಯತ್ ರಾಜ್ ಸಚಿವಾಲಯದ ಕಾರ್ಯದರ್ಶಿ ವಿವೇಕ್ ಭಾರದ್ವಾಜ್ ಮಾತನಾಡಿ, ಈ ಯೋಜನೆಯು ಗ್ರಾಮೀಣ ಪ್ರದೇಶದ ಜನರಿಗೆ ಅವರ ಆಸ್ತಿಯ ಹಕ್ಕುಗಳನ್ನು ನೀಡಲು ಮತ್ತು ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಹಾಯ ಮಾಡುತ್ತದೆ ಎಂದಿದ್ದಾರೆ. ಪ್ರಧಾನಿ ಮೋದಿ ಡಿಸೆಂಬರ್ 27 ರಂದು 50 ಸಾವಿರ ಹಳ್ಳಿಗಳಿಗೆ 58 ಲಕ್ಷ ಪ್ರಾಪರ್ಟಿ ಕಾರ್ಡ್​ಗಳನ್ನು ವಿತರಿಸಲಿದ್ದಾರೆ.

SVAMITVA Scheme: ಏನಿದು ಸ್ವಾಮಿತ್ವ ಯೋಜನೆ? ಇನ್ನು ಹಳ್ಳಿ ಜನರು ಬ್ಯಾಂಕ್​ಗಳಲ್ಲಿ ಸಾಲ ಪಡೆಯುವುದು ಸುಲಭ
ನರೇಂದ್ರ ಮೋದಿ

Updated on: Dec 26, 2024 | 1:51 PM

ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಪ್ರಗತಿ ತರಲು 2020ರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ತಂತ್ರಜ್ಞಾನದೊಂದಿಗೆ ಗ್ರಾಮ ಸಮೀಕ್ಷೆ ಮತ್ತು ಮ್ಯಾಪಿಂಗ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದರು. ಈ ಯೋಜನೆಯ ಉದ್ದೇಶವು ಡ್ರೋನ್​ಗಳ ಮೂಲಕ ಭೂಮಿಯನ್ನು ಸಮೀಕ್ಷೆ ಮಾಡುವುದು ಮತ್ತು ಜಿಐಎಸ್ ತಂತ್ರಜ್ಞಾನದ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿಗಳನ್ನು ಗುರುತಿಸುವುದು. ಡಿಸೆಂಬರ್ 27 ರಂದು 10 ರಾಜ್ಯಗಳ 50 ಸಾವಿರ ಹಳ್ಳಿಗಳ 58 ಲಕ್ಷ ಜನರಿಗೆ ಸ್ವಾಮಿತ್ವ ಆಸ್ತಿ ಕಾರ್ಡ್ ವಿತರಿಸಲಾಗುವುದು.

ಭೂ ಮಾಲೀಕತ್ವದ ಹಕ್ಕುಗಳನ್ನು ಖಚಿತಪಡಿಸಿಕೊಳ್ಳುವುದು, ಭೂ ವಿವಾದಗಳನ್ನು ಕಡಿಮೆ ಮಾಡುವುದು ಹಾಗೂ ಗ್ರಾಮ ಮಟ್ಟದ ಯೋಜನೆಗಳಿಗೆ ಇದು ಸಹಕಾರಿ. ಡಿಸೆಂಬರ್ 27 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಎರಡು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಜನರಿಗೆ ಈ ಕಾರ್ಡ್ ಅನ್ನು ನೀಡಲಿದ್ದಾರೆ.

ಗ್ರಾಮೀಣ ಪ್ರದೇಶದ ಭೂ ಮಾಲೀಕರಿಗೆ ಮಾಲೀಕತ್ವದ ಕಾರ್ಡ್ ನೀಡಲು ಕೇಂದ್ರ ಸರ್ಕಾರ ಯೋಜಿಸಿತ್ತು. ಇದಕ್ಕಾಗಿ, ಭೂ ಮಾಲೀಕರಿಗೆ ಮಾಲೀಕತ್ವದ ಹಕ್ಕುಗಳನ್ನು ಹೊಂದಿರುವ ಕಾರ್ಡ್ ಅನ್ನು ನೀಡಲಾಗುತ್ತದೆ. ಅದರ ಸಹಾಯದಿಂದ ಬ್ಯಾಂಕ್‌ಗಳಿಂದ ಸಾಲ ಪಡೆಯುವುದು ಸುಲಭವಾಗುತ್ತದೆ. ಈ ಕಾರ್ಡ್‌ನಲ್ಲಿ ಜನರ ಭೂಮಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗುತ್ತದೆ.

ಮತ್ತಷ್ಟು ಓದಿ: ‘ಉತ್ತಮ ಜಲಸಂಪನ್ಮೂಲವಿರುವ ರಾಷ್ಟ್ರಗಳು ಮಾತ್ರ ಮುನ್ನಡೆಯಲು ಸಾಧ್ಯ’; ಖಜುರಾಹೊದಲ್ಲಿ ಪ್ರಧಾನಿ ಮೋದಿ

ಈ ಹಿಂದೆ ಹಲವು ರಾಜ್ಯಗಳಲ್ಲಿ ಹಳ್ಳಿಗಳ ವಸತಿ ಪ್ರದೇಶಗಳ ನಕ್ಷೆ ಇರಲಿಲ್ಲ ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಇದರಿಂದ ಬ್ಯಾಂಕ್‌ಗಳಿಂದ ಸಾಲ ಪಡೆಯಲು ತೊಂದರೆಯಾಗುತ್ತಿತ್ತು. ಹೊಸ ಪ್ರಯತ್ನದ ನಂತರ, ಅನೇಕ ಆಸ್ತಿ ಮಾಲೀಕರು ತಮ್ಮ ಆಸ್ತಿ ಕಾರ್ಡ್‌ಗಳ ಮೂಲಕ ಬ್ಯಾಂಕ್ ಸಾಲವನ್ನು ಪಡೆಯಲು ಸಮರ್ಥರಾಗಿದ್ದಾರೆ, ಅದು ಈಗ ಕಾನೂನು ಮಾನ್ಯತೆಯನ್ನೂ ಹೊಂದಿದೆ.

ಸಚಿವಾಲಯದ ಕಾರ್ಯದರ್ಶಿ ವಿವೇಕ್ ಭಾರದ್ವಾಜ್ ಮಾತನಾಡಿ, ಸ್ವಾಮಿತ್ವ ಯೋಜನೆಯಡಿ 3.17 ಗ್ರಾಮಗಳಲ್ಲಿ ಡ್ರೋನ್ ಸಮೀಕ್ಷೆ ಪೂರ್ಣಗೊಂಡಿದೆ. ಜನವಸತಿ ಮತ್ತು ಜನವಸತಿ ಇಲ್ಲದ ಪ್ರದೇಶಗಳ ಡ್ರೋನ್ ಸಮೀಕ್ಷೆಯು ಈ ಯೋಜನೆಯ ಮೊದಲ ಹಂತವಾಗಿದೆ. ಇದುವರೆಗೆ 1.49 ಲಕ್ಷ ಗ್ರಾಮಗಳಲ್ಲಿ 2.19 ಕೋಟಿಗೂ ಹೆಚ್ಚು ಆಸ್ತಿ ಕಾರ್ಡ್‌ಗಳನ್ನು ಸೃಷ್ಟಿಸಲಾಗಿದೆ. ಈ ಯೋಜನೆಯಡಿ ಮಾರ್ಚ್ 2026 ರೊಳಗೆ ಎಲ್ಲಾ ಫಲಾನುಭವಿಗಳಿಗೆ ಕಾರ್ಡ್‌ಗಳು ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:50 pm, Thu, 26 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us