AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀ ವೆಂಕಟೇಶ್ವರ ಭಕ್ತಿ ಚಾನಲ್ ಸಿಬ್ಬಂದಿಯಿಂದ ಭಕ್ತರಿಗೆ ಅಶ್ಲೀಲ ವೆಬ್ ಲಿಂಕ್, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸಂಗತಿ!

ಹೈದರಾಬಾದ್: ಕೋಟಿಕೋಟಿ ಭಕ್ತರಿರುವ ತಿಮ್ಮಪ್ಪನ ಆಸ್ಥಾನ ಎಂದರೆ ಭಯ, ಭಕ್ತಿ ಜೊತೆಗೆ ಶದ್ಧೆಯೂ ಹೆಚ್ಚು. ಇಂತಹ ಕಟ್ಟುನಿಟ್ಟಿನ ಜಾಗದಲ್ಲೇ ಕೆಲ ನೀಚರು ಆಶ್ಲೀಲ ವರ್ತನೆ ತೋರಿದ್ದಾರೆ. ಇದ್ರ ಬೆನ್ನುಬಿದ್ದು ತನಿಖೆ ನಡೆಸಿದ ಟಿಟಿಡಿ ಅಧಿಕಾರಿಗಳಿಗೆ ಶಾಕ್ ಸಿಕ್ಕಿದೆ. ಹಾಗಾದ್ರೆ ಅಲ್ಲಿ ನಡೆದಿದ್ದಾದ್ರೂ ಏನು..? ಈ ಸ್ಟೋರಿ ಓದಿ. ಆಂಧ್ರದ ‘ತಿರುಪತಿ ತಿರುಮಲ ದೇವಸ್ಥಾನ ಸಮಿತಿ’ ವತಿಯಿಂದ 2008ರಲ್ಲಿ ಶ್ರೀ ವೆಂಕಟೇಶ್ವರ ಭಕ್ತಿ ಚಾನಲ್ ಆರಂಭಿಸಲಾಗಿತ್ತು. ತಿರುಮಲದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರಿಗೆ ತಲುಪಿಸುವ ಉದ್ದೇಶದಿಂದ ಹಾಗೂ ಆಧ್ಯಾತ್ಮಿಕ […]

ಶ್ರೀ ವೆಂಕಟೇಶ್ವರ ಭಕ್ತಿ ಚಾನಲ್ ಸಿಬ್ಬಂದಿಯಿಂದ ಭಕ್ತರಿಗೆ ಅಶ್ಲೀಲ ವೆಬ್ ಲಿಂಕ್, ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸಂಗತಿ!
ಆಯೇಷಾ ಬಾನು
|

Updated on: Nov 12, 2020 | 7:04 AM

Share

ಹೈದರಾಬಾದ್: ಕೋಟಿಕೋಟಿ ಭಕ್ತರಿರುವ ತಿಮ್ಮಪ್ಪನ ಆಸ್ಥಾನ ಎಂದರೆ ಭಯ, ಭಕ್ತಿ ಜೊತೆಗೆ ಶದ್ಧೆಯೂ ಹೆಚ್ಚು. ಇಂತಹ ಕಟ್ಟುನಿಟ್ಟಿನ ಜಾಗದಲ್ಲೇ ಕೆಲ ನೀಚರು ಆಶ್ಲೀಲ ವರ್ತನೆ ತೋರಿದ್ದಾರೆ. ಇದ್ರ ಬೆನ್ನುಬಿದ್ದು ತನಿಖೆ ನಡೆಸಿದ ಟಿಟಿಡಿ ಅಧಿಕಾರಿಗಳಿಗೆ ಶಾಕ್ ಸಿಕ್ಕಿದೆ. ಹಾಗಾದ್ರೆ ಅಲ್ಲಿ ನಡೆದಿದ್ದಾದ್ರೂ ಏನು..? ಈ ಸ್ಟೋರಿ ಓದಿ.

ಆಂಧ್ರದ ‘ತಿರುಪತಿ ತಿರುಮಲ ದೇವಸ್ಥಾನ ಸಮಿತಿ’ ವತಿಯಿಂದ 2008ರಲ್ಲಿ ಶ್ರೀ ವೆಂಕಟೇಶ್ವರ ಭಕ್ತಿ ಚಾನಲ್ ಆರಂಭಿಸಲಾಗಿತ್ತು. ತಿರುಮಲದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತರಿಗೆ ತಲುಪಿಸುವ ಉದ್ದೇಶದಿಂದ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಜನರಿಗೆ ಪರಿಚಯಿಸಲು, ಧಾರ್ಮಿಕ ಪ್ರಜ್ಞೆ ಬೆಳೆಸಲು ಎಸ್​ವಿಬಿಸಿ ಚಾನೆಲ್ ಆರಂಭವಾಗಿತ್ತು. ಆದ್ರೆ ‘ಎಸ್​ವಿಬಿಸಿ’ಯ ಉದ್ಯೋಗಿಗಳು ಮಾತ್ರ ಗುರಿಮರೆತು ಕಾನೂನು ಬಾಹಿರ ಕೃತ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಭಕ್ತರಿಗೆ ಅಶ್ಲೀಲ ವೆಬ್ ಲಿಂಕ್ ಕಳಿಸಿದ ಸಿಬ್ಬಂದಿ! ಅಷ್ಟಕ್ಕೂ SVBC ಉದ್ಯೋಗಿಯೊಬ್ಬ ಭಕ್ತರಿಗೆ ಚಾನಲ್​ನಲ್ಲಿ ಪ್ರಸಾರವಾದ ಧಾರ್ಮಿಕ ಕಾರ್ಯಕ್ರಮದ ಲಿಂಕ್ ಕಳುಹಿಸಿದ್ದ. ಭಕ್ತರ ಕೋರಿಕೆ ಹಿನ್ನೆಲೆಯಲ್ಲಿ ಕಾರ್ಯಕ್ರದ ಲಿಂಕ್ ಕಳಿಸಿದ್ದ ಸಿಬ್ಬಂದಿ ಮಾಡಬಾರದ ಕೆಲಸ ಮಾಡಿದ್ದ. ಭಕ್ತರಿಗೆ ಧಾರ್ಮಿಕ ಕಾರ್ಯಕ್ರಮದ ಲಿಂಕ್ ಬದಲು ಆತ ಪೋರ್ನ್ ವೆಬ್​ಸೈಟ್ ಲಿಂಕ್ ಕಳುಹಿಸಿದ್ದಾನೆ. ಇನ್ನು ಈ ಘಟನೆಯಿಂದ ಶಾಕ್​ಗೆ ಒಳಗಾದ ಭಕ್ತರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಟಿಟಿಡಿಗೆ ಆಶ್ಚರ್ಯ ಕಾದಿತ್ತು. ಅಲ್ಲದೆ ಇನ್ನೂ ಸ್ಫೋಟಕ ಸಂಗತಿಗಳು ಬಯಲಾಗಿದ್ದವು. ಈ ರೀತಿ ಮಾಡುತ್ತಿರುವುದು ಒಬ್ಬ ಉದ್ಯೋಗಿ ಮಾತ್ರವಲ್ಲ, ಎಸ್​ವಿಬಿಸಿ ಚಾನೆಲ್​ನ ಸುಮಾರು 25ಕ್ಕೂ ಹೆಚ್ಚು ಸಿಬ್ಬಂದಿ ಈ ರೀತಿ ಕಚೇರಿಯಲ್ಲೇ ಪೋರ್ನ್ ಸೈಟ್ ನೋಡುತ್ತಾ ಕಾಲ ಕಳೆಯುತ್ತಿದ್ದಾರೆ ಅನ್ನೋದು ಬಟಾಬಯಲಾಗಿದೆ.

SVBC ವಾಹಿನಿಯಲ್ಲಿ ನಡೆದಿತ್ತು ಎನ್ನಲಾಗಿರುವ ಹಣ ದುರುಪಯೋಗ, ಅಕ್ರಮ ನೇಮಕಾತಿ, ಉದ್ಯೋಗಿಗಳ ಗುಂಪುಗಾರಿಕೆ ಹಾಗೂ ಇನ್ನಿತರ ಸಂಗತಿಗಳ ಹೊರತಾಗಿ ಮತ್ತೊಂದು ಗಂಭೀರ ಆರೋಪ ಈಗ ಕೇಳಿಬಂದಿದೆ. ಸಿಬ್ಬಂದಿ ಮಾಡಿರುವ ಕೃತ್ಯದ ಬಗ್ಗೆ ಟಿಟಿಡಿ ಗಂಭೀರ ಆಲೋಚನೆ ಮಾಡುತ್ತಿದ್ದು, ಕಠಿಣ ಕ್ರಮದ ಭರವಸೆಯನ್ನೂ ನೀಡಿದೆ.

ಒಟ್ನಲ್ಲಿ ದೇವರ ಸೇವೆ ಮಾಡಬೇಕಾದ ಸಿಬ್ಬಂದಿ ಮಾಡಬಾರದ್ದನ್ನ ಮಾಡಿ ಲಾಕ್ ಆಗಿದ್ದಾರೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಅಗತ್ಯತೆ ಇದೆ. ಇಲ್ಲವಾದರೆ ತಿಮ್ಮಪ್ಪನ ಕೋಟ್ಯಂತರ ಭಕ್ತರ ಕೋಪಕ್ಕೆ SVBC ವಾಹಿನಿ ತುತ್ತಾರಿಗೋದು ಗ್ಯಾರಂಟಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ