AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು – ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ

Swachh Bharat Mission: ಸ್ವಚ್ಛ ಭಾರತ ಅಭಿಯಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.

Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ  ಪಾಲ್ಗೊಳ್ಳಬೇಕು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ
Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ
TV9 Web
| Updated By: ಸಾಧು ಶ್ರೀನಾಥ್​|

Updated on: Oct 19, 2022 | 1:11 PM

Share

ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ವಚ್ಛ ಭಾರತ ಅಭಿಯಾನದಲ್ಲಿ (Swachh Bharat Mission) ಹೆಜ್ಜೆ ಇಡುತ್ತಿದೆ. ಈ ಅಭಿಯಾನದಲ್ಲಿ ಮತ್ತೊಮ್ಮೆ ಸ್ವಚ್ಛತಾ ಅಭಿಯಾನದ ಮೂಲಕ.. ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಇದರ ಭಾಗವಾಗಿ, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು (Union Minister Anurag Singh Thakur) ದೆಹಲಿಯ ಚಾಂದಿನಿ ಚೌಕ್‌ನಲ್ಲಿ (Chandani Chowk Delhis) ಸ್ವಚ್ಛ ಭಾರತ 2022 ರ ಅಡಿಯಲ್ಲಿ ಮೆಗಾ ಕ್ಲೀನ್ಲಿನೆಸ್ ಡ್ರೈವ್ ಅನ್ನು ಪ್ರಾರಂಭಿಸಿದರು. ಚಾಂದಿನಿ ಚೌಕ್‌ನ ಮೆಗಾ ಡ್ರೈವ್ ಬಿಡುಗಡೆ ಕಾರ್ಯಕ್ರಮ ಬುಧವಾರ ಬೆಳಿಗ್ಗೆ ನಡೆಯಿತು. ಸ್ವಚ್ಛ ಭಾರತ ಅಭಿಯಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು. ಇದರ ಭಾಗವಾಗಿ, ಯುವ ವ್ಯವಹಾರಗಳ ಇಲಾಖೆ ಮತ್ತು ಅದರ ಅಂಗಸಂಸ್ಥೆಗಳನ್ನು ಸ್ವಚ್ಛ ಭಾರತ 2022 ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಚಾಲನೆಯನ್ನು ಪ್ರಾರಂಭಿಸಲಾಗಿದೆ.

ದೇಶಾದ್ಯಂತ ಒಂದು ತಿಂಗಳ ಕಾಲ ಮುಂದುವರಿಯುವ ಸ್ವಚ್ಛ ಭಾರತ 2022 ಸ್ವಚ್ಛತಾ ಅಭಿಯಾನವು ಉತ್ತರ ಪ್ರದೇಶದ ಪ್ರಯಾಗದಲ್ಲಿ ಈ ತಿಂಗಳ 1 ರಂದು ಪ್ರಾರಂಭವಾಯಿತು. ಒಂದು ತಿಂಗಳೊಳಗೆ ಒಂದು ಕೋಟಿ ಕೆಜಿ ತ್ಯಾಜ್ಯವನ್ನು ಸಂಗ್ರಹಿಸುವ ಗುರಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಠಾಕೂರ್, ಕಳೆದ 18 ದಿನಗಳಲ್ಲಿ 84 ಲಕ್ಷ ಕೆಜಿಗೂ ಹೆಚ್ಚು ತ್ಯಾಜ್ಯ ಸಂಗ್ರಹವಾಗಿದೆ. ಈ ಆಂದೋಲನವನ್ನು ಸಕಾಲದಲ್ಲಿ ಪೂರ್ಣಗೊಳಿಸಲಾಗುವುದು.. ಇದು ಕೇಂದ್ರ ಸರ್ಕಾರ ಘೋಷಿಸಿರುವ ಸ್ವಚ್ಛ ಭಾರತ್ ಗುರಿ ಎಂದರು. ಪ್ರಧಾನಿ ಮೋದಿ ಕರೆ ನೀಡಿರುವ ಸ್ವಚ್ಛ ಭಾರತ್ ಕಾರ್ಯಕ್ರಮ ವಿಶ್ವಕ್ಕೆ ಸ್ಫೂರ್ತಿ ನೀಡಿದೆ ಎಂದು ಅವರು ಹೇಳಿದರು.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?