AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Survekshan Awards 2023: ಸತತ 7ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿ

ಸ್ವಚ್ಛ ಸರ್ವೇಕ್ಷಣ್ 2023 ಪ್ರಶಸ್ತಿಗಳ ಭಾಗವಾಗಿ ಮಧ್ಯಪ್ರದೇಶದ ಇಂದೋರ್ ಮತ್ತು ಸೂರತ್​​​ನ್ನು ಭಾರತದ ಸ್ವಚ್ಛ ನಗರಗಳೆಂದು ಗುರುತಿಸಲಾಗಿದೆ. ಇಂದೋರ್ ಏಳನೇ ಬಾರಿಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿಯನ್ನು ಪಡೆದುಕೊಂಡಿದೆ.

Swachh Survekshan Awards 2023: ಸತತ 7ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿ
ಅಕ್ಷಯ್​ ಪಲ್ಲಮಜಲು​​
|

Updated on: Jan 11, 2024 | 5:09 PM

Share

ದೆಹಲಿ, ಜ11: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡಿದ ಸ್ವಚ್ಛ ಸರ್ವೇಕ್ಷಣ್ 2023 (Swachh Survekshan Awards) ಪ್ರಶಸ್ತಿಗಳ ಭಾಗವಾಗಿ ಮಧ್ಯಪ್ರದೇಶದ ಇಂದೋರ್ (Indore) ಮತ್ತು ಸೂರತ್​​​ನ್ನು ಭಾರತದ ಸ್ವಚ್ಛ ನಗರಗಳೆಂದು ಗುರುತಿಸಲಾಗಿದೆ. ಇಂದೋರ್ ಏಳನೇ ಬಾರಿಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿಯನ್ನು ಪಡೆದುಕೊಂಡಿದೆ.

ಸೂರತ್​​​ ಇದೇ ಮೊದಲ ಬಾರಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನವಿ ಮುಂಬೈ ದೇಶದ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ಮಹಾರಾಷ್ಟ್ರವು ಸ್ವಚ್ಛ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ನಂತರ ಸ್ವಚ್ಛ ರಾಜ್ಯ ಪ್ರಶಸ್ತಿ ಮಧ್ಯಪ್ರದೇಶ ಪಡೆದುಕೊಂಡಿದೆ.

ಚಂಡೀಗಢವು ನೈರ್ಮಲ್ಯ ಕಾರ್ಮಿಕರಿಗೆ ಅತ್ಯುತ್ತಮ ಸುರಕ್ಷತಾ ಮಾನದಂಡಗಳನ್ನು ಹೊಂದಿರುವ ನಗರಕ್ಕಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಾರಣಾಸಿಯನ್ನು ಅತ್ಯಂತ ಸ್ವಚ್ಛವಾದ “ಗಂಗಾ ಪಟ್ಟಣ” ಎಂದು ಹೆಸರಿಸಲಾಗಿದೆ. ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಗರ ಮತ್ತು ರಾಜ್ಯಗಳ ಪ್ರತಿನಿಧಿಗಳಿಗೆ ಈ ಪ್ರಶಸ್ತಿಗಳನ್ನು ಹಸ್ತಾಂತರಿಸಿದರು.

ಇದನ್ನೂ ಓದಿ: ಇಂದೋರ್​ ನಗರಕ್ಕೆ ಸತತ 6ನೇ ಬಾರಿ ಸ್ವಚ್ಛ ನಗರಿ ಪಟ್ಟ

ಈ ಪ್ರಶಸ್ತಿಗಳನ್ನು 2016ರಲ್ಲಿ ಸ್ವಚ್ಛ ಭಾರತ್ ಮಿಷನ್-ಅರ್ಬನ್ ಭಾಗವಾಗಿ ಪ್ರಾರಂಭಿಸಲಾಯಿತು. 2023ರ ಪ್ರಶಸ್ತಿಗಳು 4,416 ನಗರ ಸ್ಥಳೀಯ ಸಂಸ್ಥೆಗಳು, 61 ಕಂಟೋನ್ಮೆಂಟ್‌ಗಳು ಮತ್ತು 88 ಗಂಗಾ ಪಟ್ಟಣಗಳನ್ನು ಒಳಗೊಂಡಿವೆ. ಸಚಿವಾಲಯದ ಪ್ರಕಾರ, ಶ್ರೇಯಾಂಕದ ಅಭ್ಯಾಸದ ಭಾಗವಾಗಿ 1.58 ಕೋಟಿ ಆನ್‌ಲೈನ್ ನಾಗರಿಕರ ಪ್ರತಿಕ್ರಿಯೆ ಮತ್ತು 19.82 ಲಕ್ಷ ಮುಖಾಮುಖಿ ವೀಕ್ಷಣೆಗಳನ್ನು ಸ್ವೀಕರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ