AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachh Survekshan Awards 2023: ಸತತ 7ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿ

ಸ್ವಚ್ಛ ಸರ್ವೇಕ್ಷಣ್ 2023 ಪ್ರಶಸ್ತಿಗಳ ಭಾಗವಾಗಿ ಮಧ್ಯಪ್ರದೇಶದ ಇಂದೋರ್ ಮತ್ತು ಸೂರತ್​​​ನ್ನು ಭಾರತದ ಸ್ವಚ್ಛ ನಗರಗಳೆಂದು ಗುರುತಿಸಲಾಗಿದೆ. ಇಂದೋರ್ ಏಳನೇ ಬಾರಿಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿಯನ್ನು ಪಡೆದುಕೊಂಡಿದೆ.

Swachh Survekshan Awards 2023: ಸತತ 7ನೇ ಬಾರಿಗೆ ಇಂದೋರ್​ಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿ
ಅಕ್ಷಯ್​ ಪಲ್ಲಮಜಲು​​
|

Updated on: Jan 11, 2024 | 5:09 PM

Share

ದೆಹಲಿ, ಜ11: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡಿದ ಸ್ವಚ್ಛ ಸರ್ವೇಕ್ಷಣ್ 2023 (Swachh Survekshan Awards) ಪ್ರಶಸ್ತಿಗಳ ಭಾಗವಾಗಿ ಮಧ್ಯಪ್ರದೇಶದ ಇಂದೋರ್ (Indore) ಮತ್ತು ಸೂರತ್​​​ನ್ನು ಭಾರತದ ಸ್ವಚ್ಛ ನಗರಗಳೆಂದು ಗುರುತಿಸಲಾಗಿದೆ. ಇಂದೋರ್ ಏಳನೇ ಬಾರಿಗೆ ಸ್ವಚ್ಛ ನಗರಿ ಪ್ರಶಸ್ತಿ ಗರಿಯನ್ನು ಪಡೆದುಕೊಂಡಿದೆ.

ಸೂರತ್​​​ ಇದೇ ಮೊದಲ ಬಾರಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದೆ. ನವಿ ಮುಂಬೈ ದೇಶದ ಮೂರನೇ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ಮಹಾರಾಷ್ಟ್ರವು ಸ್ವಚ್ಛ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ನಂತರ ಸ್ವಚ್ಛ ರಾಜ್ಯ ಪ್ರಶಸ್ತಿ ಮಧ್ಯಪ್ರದೇಶ ಪಡೆದುಕೊಂಡಿದೆ.

ಚಂಡೀಗಢವು ನೈರ್ಮಲ್ಯ ಕಾರ್ಮಿಕರಿಗೆ ಅತ್ಯುತ್ತಮ ಸುರಕ್ಷತಾ ಮಾನದಂಡಗಳನ್ನು ಹೊಂದಿರುವ ನಗರಕ್ಕಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಾರಣಾಸಿಯನ್ನು ಅತ್ಯಂತ ಸ್ವಚ್ಛವಾದ “ಗಂಗಾ ಪಟ್ಟಣ” ಎಂದು ಹೆಸರಿಸಲಾಗಿದೆ. ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಗರ ಮತ್ತು ರಾಜ್ಯಗಳ ಪ್ರತಿನಿಧಿಗಳಿಗೆ ಈ ಪ್ರಶಸ್ತಿಗಳನ್ನು ಹಸ್ತಾಂತರಿಸಿದರು.

ಇದನ್ನೂ ಓದಿ: ಇಂದೋರ್​ ನಗರಕ್ಕೆ ಸತತ 6ನೇ ಬಾರಿ ಸ್ವಚ್ಛ ನಗರಿ ಪಟ್ಟ

ಈ ಪ್ರಶಸ್ತಿಗಳನ್ನು 2016ರಲ್ಲಿ ಸ್ವಚ್ಛ ಭಾರತ್ ಮಿಷನ್-ಅರ್ಬನ್ ಭಾಗವಾಗಿ ಪ್ರಾರಂಭಿಸಲಾಯಿತು. 2023ರ ಪ್ರಶಸ್ತಿಗಳು 4,416 ನಗರ ಸ್ಥಳೀಯ ಸಂಸ್ಥೆಗಳು, 61 ಕಂಟೋನ್ಮೆಂಟ್‌ಗಳು ಮತ್ತು 88 ಗಂಗಾ ಪಟ್ಟಣಗಳನ್ನು ಒಳಗೊಂಡಿವೆ. ಸಚಿವಾಲಯದ ಪ್ರಕಾರ, ಶ್ರೇಯಾಂಕದ ಅಭ್ಯಾಸದ ಭಾಗವಾಗಿ 1.58 ಕೋಟಿ ಆನ್‌ಲೈನ್ ನಾಗರಿಕರ ಪ್ರತಿಕ್ರಿಯೆ ಮತ್ತು 19.82 ಲಕ್ಷ ಮುಖಾಮುಖಿ ವೀಕ್ಷಣೆಗಳನ್ನು ಸ್ವೀಕರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು