AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachhta Hi Seva: ನಾಳೆ ನಡೆಯಲಿರುವ ಸ್ವಚ್ಛತಾ ಹೀ ಸೇವಾ ಕಾರ್ಯದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿ

ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಭಾಗವಾಗಿ ಅಕ್ಟೋಬರ್ 1 ರಂದು ಡಾ. ಜಿ.ಸಿ. ನಾರಂಗ್ ಮಾರ್ಗ ಎದುರುಗಡೆ ಗಾಂಧಿ ಭವನ್ ನಾರ್ತ್ ಮತ್ತು ಶ್ರೇಯಾ ಮಿಶ್ರಾ ಮಾರ್ಗ, ಪಟೇಲ್ ಚೆಸ್ಟ್ ನಾರ್ತ್ ಕ್ಯಾಂಪಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿಯಾಗಲಿದ್ದಾರೆ.

Swachhta Hi Seva: ನಾಳೆ ನಡೆಯಲಿರುವ ಸ್ವಚ್ಛತಾ ಹೀ ಸೇವಾ ಕಾರ್ಯದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಗಂಗಾಧರ​ ಬ. ಸಾಬೋಜಿ
|

Updated on:Sep 30, 2023 | 10:05 PM

Share

ದೆಹಲಿ, ಸೆಪ್ಟೆಂಬರ್​ 30: ಸ್ವಚ್ಛ ಭಾರತ್ ಮಿಷನ್‌ನ 9ನೇ ವಾರ್ಷಿಕೋತ್ಸವವನ್ನು ಕೇಂದ್ರ ಸರ್ಕಾರ ಆಚರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವಚ್ಛತಾ ಹಿ ಸೇವಾ (Swachhta Hi Seva) ಕಾರ್ಯಕ್ರಮದ ಭಾಗವಾಗಿ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಎಂಬ ಅಭಿಯಾನಕ್ಕೆ ಸಜ್ಜಾಗಿದೆ. ಅಕ್ಟೋಬರ್ 1, 2023 ರಂದು ಬೆಳಿಗ್ಗೆ 10 ಗಂಟೆಯಿಂದ ಒಂದು ಗಂಟೆ ಕಾಲ ಸೇವಾ ಕಾರ್ಯ ನಡೆಯಲಿದ್ದು, ಭಾರತದಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿಯಾಗಲಿದ್ದಾರೆ.

ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಅಭಿಯಾನವನ್ನು ಅಕ್ಟೋಬರ್ 1 ರಂದು ನಡೆಯಲಿದೆ. ಡಾ. ಜಿ.ಸಿ. ನಾರಂಗ್ ಮಾರ್ಗ ಎದುರುಗಡೆ ಗಾಂಧಿ ಭವನ್ ನಾರ್ತ್ ಮತ್ತು ಶ್ರೇಯಾ ಮಿಶ್ರಾ ಮಾರ್ಗ, ಪಟೇಲ್ ಚೆಸ್ಟ್ ನಾರ್ತ್ ಕ್ಯಾಂಪಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವಾ ಕಾರ್ಯ ಆಯೋಜಿಸಿದ್ದು, ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಒಂದು ವಾರದ ‘ಸಂಕಲ್ಪ ಸಪ್ತಾಹ’ಕ್ಕೆ ಪ್ರಧಾನಿ ಮೋದಿ ಚಾಲನೆ

‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಕಾರ್ಯಕ್ರಮ ವಿವರ ಹೀಗಿದೆ

  • ಬೆಳಿಗ್ಗೆ 9:30ಕ್ಕೆ ದೆಹಲಿ ವಿಶ್ವವಿದ್ಯಾಲಯದ ಇಂಟರ್ನ್ಯಾಷನಲ್ ಗೆಸ್ಟ್ ಹೌಸ್​ ಸಚಿವರು ಮತ್ತು ಅತಿಥಿಗಳ ಆಗಮನ
  • 9:55ಕ್ಕೆ ಸೇವೆ ಕಾರ್ಯ ನಡೆಯುವ ಸ್ಥಳಕ್ಕೆ ಹೊರಡುವುದು
  • 10 ರಿಂದ 11ರ ವರೆಗೆ ಡಾ. ಜಿ.ಸಿ. ನಾರಂಗ್ ಮಾರ್ಗ ಎದುರುಗಡೆ ಗಾಂಧಿ ಭವನ್ ನಾರ್ತ್ ಮತ್ತು ಶ್ರೇಯಾ ಮಿಶ್ರಾ ಮಾರ್ಗ, ಪಟೇಲ್ ಚೆಸ್ಟ್ ನಾರ್ತ್ ಕ್ಯಾಂಪಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವಾ ಕಾರ್ಯ ನಡೆಯಲಿದೆ.
  • 11: 15ಕ್ಕೆ ಸೇವಾ ಕಾರ್ಯ ಮುಕ್ತಾಯಗೊಳ್ಳಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:55 pm, Sat, 30 September 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್