AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳ ಬಗ್ಗೆ ಹೇಳಿಕೆ; ರಾಹುಲ್ ಗಾಂಧಿಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಬೆಂಬಲ

ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ನಾವು ಗಮನವಿಟ್ಟು ಆಲಿಸಿದ್ದೇವೆ. ಹಿಂದೂ ಧರ್ಮ ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ" ಎಂದು ಕಾಂಗ್ರೆಸ್ ನಾಯಕನ ಭಾಷಣ ಬಗ್ಗೆ ಪ್ರತಿಕ್ರಿಯಿಸಿದ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಹಿಂದೂಗಳ ಬಗ್ಗೆ ಹೇಳಿಕೆ; ರಾಹುಲ್ ಗಾಂಧಿಗೆ ಸ್ವಾಮಿ ಅವಿಮುಕ್ತೇಶ್ವರಾನಂದ ಬೆಂಬಲ
ಸ್ವಾಮಿ ಅವಿಮುಕ್ತೇಶ್ವರಾನಂದ - ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Jul 08, 2024 | 6:09 PM

Share

ದೆಹಲಿ ಜುಲೈ 08: ಲೋಕಸಭೆಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರ ಅಬ್ಬರದ ಭಾಷಣದ ನಂತರ, ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ (Swami Avimukteshwarananda) ಅವರು ಕಾಂಗ್ರೆಸ್ (Congress) ನಾಯಕರ ಬೆಂಬಲಕ್ಕೆ ನಿಂತಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ನಾಯಕರು ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಭಾಷಣವನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಅವರು “ಇಡೀ ಹಿಂದೂ ಸಮುದಾಯವನ್ನು ಹಿಂಸಾ ಪ್ರವೃತ್ತಿಯವರು” ಎಂದು ದೂಷಿಸಿದ್ದಾರೆ ಎಂದು ಹೇಳಿದ್ದರು. ಈ ಆರೋಪವು ಸಂಸತ್ತಿನಲ್ಲಿ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದ್ದಲ್ಲದೆ ಸ್ಪೀಕರ್ ಅವರು ದಾಖಲೆಗಳಿಂದ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ತೆಗೆದುಹಾಕಿದ್ದರು.

ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದೇನು?

ಇದೀಗ ಹಿಂದೂಗಳಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಶಂಕರಾಚಾರ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ನಾವು ಗಮನವಿಟ್ಟು ಆಲಿಸಿದ್ದೇವೆ. ಹಿಂದೂ ಧರ್ಮ ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ” ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ, ಮಠಾಧೀಶರು ರಾಹುಲ್ ಗಾಂಧಿಯವರ ಭಾಷಣದ ಆಯ್ದ ಪ್ರಸಾರವನ್ನು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಯ ತುಣುಕುಗಳನ್ನು ಮಾತ್ರ ಪ್ರಸ್ತುತಪಡಿಸುವುದು ತಪ್ಪುದಾರಿಗೆಳೆಯುತ್ತದೆ. ಅದೇ ವೇಳೆ ಅದು ಅನೈತಿಕವಾಗಿದೆ” ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ಅಸ್ಸಾಂನಲ್ಲಿ ನಿರಾಶ್ರಿತ ಮಣಿಪುರ ನಿವಾಸಿಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದೆ ಹಾಗೂ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ತಮ್ಮ ಸಹೋದರನ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ. “ರಾಹುಲ್ ಎಂದಿಗೂ ಹಿಂದೂಗಳ ವಿರುದ್ಧ ಮಾತನಾಡಲು ಸಾಧ್ಯವಿಲ್ಲ, ಅವರ ಹೇಳಿಕೆಗಳು ಬಿಜೆಪಿ ಮತ್ತು ಅದರ ನಾಯಕರನ್ನು ಗುರಿಯಾಗಿರಿಸಿಕೊಂಡಿವೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ