AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swami Vivekananda Statue: ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪ್ರತಿಮೆಯನ್ನು ಅನಾವರಣಗೊಳಿಸಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪ್ರತಿಮೆಯನ್ನು ಅನಾವರಣಗೊಳಿಸಿದರು, ಜೊತೆಗೆ ಭಾರತ ಮತ್ತು ಮೆಕ್ಸಿಕೋದ ಸಂಬಂಧದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

Swami Vivekananda Statue: ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪ್ರತಿಮೆಯನ್ನು ಅನಾವರಣಗೊಳಿಸಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ
Lok Sabha Speaker Om Birla unveils first statue of Swami Vivekananda in Mexico
TV9 Web
| Edited By: |

Updated on:Sep 03, 2022 | 1:16 PM

Share

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶನಿವಾರ ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ಮಾನವೀಯತೆಗೆ ಅವರ ಬೋಧನೆಗಳು ಭೌಗೋಳಿಕ ಅಡೆತಡೆಗಳು ಮತ್ತು ಸಮಯವನ್ನು ಮೀರಿದೆ ಎಂದು ಹೇಳಿದರು. ಸ್ವಾಮೀ ಜಿಯವರ ಸಂದೇಶ ಮತ್ತು ಮಾನವೀಯತೆಯ ಬೋಧನೆಗಳು ಭೌಗೋಳಿಕ ಅಡೆತಡೆಗಳು ಮತ್ತು ಸಮಯವನ್ನು ಮೀರಿದೆ. ಅವರ ಸಂದೇಶವು ಇಡೀ ಮಾನವಕುಲಕ್ಕೆ. ಇಂದು, ಮೆಕ್ಸಿಕೋದಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ, ನಾವು ಅವರಿಗೆ ನಮ್ಮ ನಮ್ರ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಓಂ ಬಿರ್ಲಾ ಅವರು ಮೆಕ್ಸಿಕೋದ ಚಾಪಿಂಗೋ ವಿಶ್ವವಿದ್ಯಾನಿಲಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಡಾ ಪಾಂಡುರಂಗ್ ಖಂಖೋಜೆ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಲ್ಯಾಟಿನ್ ಅಮೆರಿಕದ ಅತ್ಯಂತ ಹಳೆಯ ಕೃಷಿ ವಿಶ್ವವಿದ್ಯಾಲಯವಾದ ಚಾಪಿಂಗೋ ವಿಶ್ವವಿದ್ಯಾಲಯಕ್ಕೂ ಬಿರ್ಲಾ ಭೇಟಿ ನೀಡಿದರು. ಬಿರ್ಲಾ ಅವರು ಮೆಕ್ಸಿಕೋ ಸ್ಯಾಂಟಿಯಾಗೊ ಕ್ರೀಲ್‌ನಲ್ಲಿರುವ ಚೇಂಬರ್ ಆಫ್ ಡೆಪ್ಯೂಟೀಸ್ ಅಧ್ಯಕ್ಷರನ್ನು ಭೇಟಿ ಮಾಡಿದರು. ಉಭಯ ನಾಯಕರು ಪರಸ್ಪರ ಮಹತ್ವದ ಹಲವು ವಿಷಯಗಳನ್ನು ಚರ್ಚಿಸಿದ್ದಾರೆ.

ಭಾರತ ಮತ್ತು ಮೆಕ್ಸಿಕೋ ಐತಿಹಾಸಿಕವಾಗಿ ನಿಕಟ ಸಂಬಂಧವನ್ನು ಹೊಂದಿದೆ ಮತ್ತು 1947 ರಲ್ಲಿ ಭಾರತವನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸಿದ ಮೊದಲ ದೇಶ ಮೆಕ್ಸಿಕೋ ಎಂದು ಹೇಳಿದರು. ವ್ಯಾಪಾರ, ಆರ್ಥಿಕತೆ ಮತ್ತು ಸಂಸ್ಕೃತಿಯ ವಿಷಯದಲ್ಲಿ ಉಭಯ ದೇಶಗಳ ನಡುವಿನ ಸಂಬಂಧಗಳು ಬಲದಿಂದ ಬೆಳೆದಿವೆ ಎಂದು ಹೇಳಿದರು.

ವಿಶ್ವದಲ್ಲಿ ಸಂಸದೀಯ ಪ್ರಜಾಪ್ರಭುತ್ವವನ್ನು ಬಲಪಡಿಸಲು ಎರಡೂ ದೇಶಗಳು ಉತ್ತಮ ವಿಚಾರಗಳನ್ನು ಹಂಚಿಕೊಳ್ಳುತ್ತಿವೆ ಎಂದು ಬಿರ್ಲಾ ಹೇಳಿದರು. ಇದಕ್ಕೂ ಮುನ್ನ ಲೋಕಸಭಾ ಸ್ಪೀಕರ್ ಅವರು ಮೆಕ್ಸಿಕನ್ ಪಾರ್ಲಿಮೆಂಟ್ ಕಾಂಪ್ಲೆಕ್ಸ್‌ನಲ್ಲಿ ಭಾರತ-ಮೆಕ್ಸಿಕೋ ಸ್ನೇಹ ಉದ್ಯಾನವನ್ನು ಉದ್ಘಾಟಿಸಿದ್ದರು.

ಉಭಯ ದೇಶಗಳ ನಡುವಿನ ಬಾಂಧವ್ಯದ ಹುರುಪಿನ ಪ್ರತೀಕವಾಗಿರುವ ಭಾರತ-ಮೆಕ್ಸಿಕೋ ಫ್ರೆಂಡ್‌ಶಿಪ್ ಪಾರ್ಕ್ ಇಡೀ ಜಗತ್ತಿಗೆ ಪ್ರಜಾಪ್ರಭುತ್ವದ ಶಕ್ತಿ ಪಸರಿಸಲಿ ಎಂದು ಆಶಿಸಿದರು. ಭಾರತದೊಂದಿಗೆ ಬಾಂಧವ್ಯವನ್ನು ಬಲಪಡಿಸುವ ಬದ್ಧತೆಗಾಗಿ ಮೆಕ್ಸಿಕನ್ ಸಂಸತ್ತು ಮತ್ತು ಸರ್ಕಾರಕ್ಕೆ ಅವರು ಧನ್ಯವಾದವನ್ನು ತಿಳಿಸಿದರು.

ಮೆಕ್ಸಿಕೋದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲು ಅವರನ್ನು ಆಹ್ವಾನಿಸಲಾಗಿತ್ತು. ಇದು ಲ್ಯಾಟಿನ್ ಅಮೆರಿಕಾದಲ್ಲಿ ಸ್ವಾಮೀಜಿಯವರ ಮೊದಲ ಪ್ರತಿಮೆಯಾಗಿದೆ. ಈ ಪ್ರತಿಮೆಯು ಈ ದೇಶದ ಯುವಕರಿಗೆ, ತಮ್ಮ ದೇಶವನ್ನು ಹೊಸ ವಿಚಾರಗಳತ್ತ ಕೊಂಡೊಯ್ಯುವ ಕೆಲಸದಲ್ಲಿ ಶ್ರಮಿಸಲು ಸ್ಫೂರ್ತಿಯಾಗಲಿದೆ ಎಂದು ಓಂ ಬಿರ್ಲಾ ಟ್ವೀಟ್ ಮಾಡಿದ್ದಾರೆ.

Published On - 1:13 pm, Sat, 3 September 22

Follow Us
Web contact
Web contact

TV9 Kannada

Read More
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ