AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಫಹಾದ್ ಅಹ್ಮದ್ ಸೋಲಿಗೆ ಇವಿಎಂ ವಿರುದ್ಧ ಆರೋಪ ಮಾಡಿದ ಸ್ವರಾ ಭಾಸ್ಕರ್

ಅನುಶಕ್ತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಸಿಪಿ ಅಭ್ಯರ್ಥಿ ಸನಾ ಮಲಿಕ್ ಅವರು ಸ್ವರಾ ಭಾಸ್ಕರ್ ಅವರ ಪತಿ ಫಹಾದ್ ಅಹ್ಮದ್ ವಿರುದ್ಧ ಭಾರಿ ಮುನ್ನಡೆ ಸಾಧಿಸಿದ್ದಾರೆ. ನವಾಬ್ ಮಲಿಕ್ ಪುತ್ರಿ ಸನಾ 3 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಸನಾ 49,341 ಮತಗಳನ್ನು ಪಡೆದು ಅಹ್ಮದ್ 45,963 ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಚಾರ್ಯ ವಿದ್ಯಾಧರ್ ಮೂರನೇ ಸ್ಥಾನದಲ್ಲಿದ್ದಾರೆ. ಮತ ಎಣಿಕೆ ಇನ್ನೂ ನಡೆಯುತ್ತಿದೆ.

ಪತಿ ಫಹಾದ್ ಅಹ್ಮದ್ ಸೋಲಿಗೆ ಇವಿಎಂ ವಿರುದ್ಧ ಆರೋಪ ಮಾಡಿದ ಸ್ವರಾ ಭಾಸ್ಕರ್
ಸ್ವರಾ ಭಾಸ್ಕರ್
ಸುಷ್ಮಾ ಚಕ್ರೆ
|

Updated on: Nov 23, 2024 | 4:10 PM

Share

ಮುಂಬೈ: ಮಹಾರಾಷ್ಟ್ರದ ಅನುಶಕ್ತಿ ನಗರದಲ್ಲಿ ಹಲವು ಸುತ್ತಿನ ಮತ ಎಣಿಕೆಯಲ್ಲಿ ಮುಂಚೂಣಿಯಲ್ಲಿದ್ದ ಪತಿ ಫಹಾದ್ ಅಹ್ಮದ್ ಅವರಿಗೆ ಹಿನ್ನಡೆಯಾಗುತ್ತಿದ್ದಂತೆ ನಟಿ ಸ್ವರಾ ಭಾಸ್ಕರ್ ಅವರು ಚುನಾವಣಾ ಆಯೋಗಕ್ಕೆ ಇವಿಎಂ ಬಗ್ಗೆ ಆಕ್ಷೇಪ ರವಾನಿಸಿದ್ದಾರೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣದ ಅಭ್ಯರ್ಥಿಯಾಗಿರುವ ಅಹ್ಮದ್ ಅವರು ಪ್ರಸ್ತುತ ಅಜಿತ್ ಪವಾರ್ ಅವರ ಎನ್‌ಸಿಪಿಯ ನಾಮನಿರ್ದೇಶಿತ ಸನಾ ಮಲಿಕ್ ವಿರುದ್ಧ ಸ್ಪರ್ಧಿಸಿದ್ದಾರೆ.

ಶೇ. 99ರಷ್ಟು ಚಾರ್ಜ್ ಹೊಂದಿರುವ ಇವಿಎಂಗಳನ್ನು ತೆರೆಯುವವರೆಗೆ ಮುಂಬೈನ ಅನುಶಕ್ತಿ ನಗರ ಕ್ಷೇತ್ರದಲ್ಲಿ ಫಹಾದ್ ಅಹ್ಮದ್ ಮುನ್ನಡೆ ಸಾಧಿಸಿದ್ದರು ಎಂದು ಸ್ವರಾ ಭಾಸ್ಕರ್ ಹೇಳಿದ್ದಾರೆ. “ಅನುಶಕ್ತಿ ನಗರ ವಿಧಾನ ಸಭೆಯಲ್ಲಿ ಎನ್‌ಸಿಪಿ-ಎಸ್‌ಪಿಯ ಫಹಾದ್ ಜಿರಾರ್ ಅಹ್ಮದ್ ಅವರ ಸ್ಥಿರ ಮುನ್ನಡೆಯ ನಂತರ 17, 18, 19ರ ಸುತ್ತಿನಲ್ಲಿ ಇದ್ದಕ್ಕಿದ್ದಂತೆ 99% ಬ್ಯಾಟರಿ ಚಾರ್ಜರ್ ಇವಿಎಂಗಳನ್ನು ತೆರೆಯಲಾಗಿದೆ. ಈ ವೇಳೆ ಬಿಜೆಪಿ ಬೆಂಬಲಿತ ಎನ್‌ಸಿಪಿ-ಅಜಿತ್ ಪವಾರ್ ಮೈತ್ರಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ-ಜಾರ್ಖಂಡ್​ನಲ್ಲಿ ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ, ಟ್ರೆಂಡ್ ಹೇಗಿದೆ?

“ಇಡೀ ದಿನ ಮತ ಚಲಾಯಿಸಿದ ಯಂತ್ರಗಳು 99% ಚಾರ್ಜ್ ಮಾಡಿದ ಬ್ಯಾಟರಿಗಳನ್ನು ಹೇಗೆ ಹೊಂದುತ್ತವೆ? ಸಂಪೂರ್ಣವಾಗಿ 99% ಚಾರ್ಜ್ ಮಾಡಿದ ಬ್ಯಾಟರಿಗಳು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಏಕೆ ಮತಗಳನ್ನು ನೀಡುತ್ತವೆ?” ಎಂದು ಸ್ವರಾ ಭಾಸ್ಕರ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಶ್ನಿಸಿದ್ದಾರೆ.

ಅಹ್ಮದ್ ಅವರು 17ನೇ ಸುತ್ತಿನವರೆಗೆ ಮುನ್ನಡೆ ಸಾಧಿಸಿದ್ದರು ಎಂದು ಸ್ವರಾ ಟ್ವೀಟ್ ಮಾಡಿದ್ದಾರೆ. ಈ ವಿಷಯದ ಬಗ್ಗೆ ಚುನಾವಣಾ ಆಯೋಗದ ಬಳಿ ಹೋಗುವುದಾಗಿ ಹೇಳಿದ್ದಾರೆ. ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಪುತ್ರಿ ಸನಾ ಮಲಿಕ್ ವಿರುದ್ಧ ಫಹಾದ್ ಅಹಮದ್ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ, ದೇವೇಂದ್ರ ಫಡ್ನವಿಸ್ ಹೇಳಿದ್ದೇನು?

ಮಹಾರಾಷ್ಟ್ರದಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿದ್ದು, 288 ಸ್ಥಾನಗಳ ಸದನದಲ್ಲಿ ಪ್ರಸ್ತುತ 225 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ತಿಂಗಳ ಹಿಂದೆಯಷ್ಟೇ 48 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನ ಗಳಿಸಿದ್ದ ಮಹಾ ವಿಕಾಸ್ ಅಘಾಡಿ ರಾಜ್ಯ ಚುನಾವಣೆಯಲ್ಲಿ 56 ಸ್ಥಾನ ಗಳಿಸುವ ಮೂಲಕ ತೀರಾ ಹಿಂದುಳಿದಿದೆ. 87 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಶರದ್ ಪವಾರ್ ನೇತೃತ್ವದ ಪಕ್ಷ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ