AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ 3 ದಿನಗಳ ಪೊಲೀಸ್ ಕಸ್ಟಡಿಗೆ

ಪ್ರಕರಣದಲ್ಲಿ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದ ಒಂದು ದಿನದ ನಂತರ ನ್ಯಾಯಾಲಯದಿಂದ ಈ ಆದೇಶ ಬಂದಿದೆ. ಎಫ್‌ಐಆರ್ ದಾಖಲಿಸುವಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರು ಯಾವುದೇ "ಪೂರ್ವತಯಾರಿ" ಮಾಡಿಲ್ಲ ಮತ್ತು ಅವರ ಆರೋಪಗಳನ್ನು "ತಳ್ಳಿ ಹಾಕಲು" ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ 3 ದಿನಗಳ ಪೊಲೀಸ್ ಕಸ್ಟಡಿಗೆ
ಬಿಭವ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 28, 2024 | 8:19 PM

Share

ದೆಹಲಿ ಮೇ 28: ಸ್ವಾತಿ ಮಲಿವಾಲ್ (Swati Maliwal assault case) ಆಪಾದಿತ ಹಲ್ಲೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಹಾಯಕ ಬಿಭವ್ ಕುಮಾರ್ (Bibhav Kumar) ಅವರನ್ನು ದೆಹಲಿಯ ತೀಸ್ ಹಜಾರಿ ಕೋರ್ಟ್ ಮಂಗಳವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ. ದೆಹಲಿ ಪೊಲೀಸರು ಆರೋಪಿಯನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಕುಮಾರ್ ಅವರ ವಕೀಲರು ದೆಹಲಿ ಪೊಲೀಸರ ಮನವಿಯನ್ನು ವಿರೋಧಿಸಿ ಕಸ್ಟಡಿ ವಿಚಾರಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು. ಪ್ರಕರಣದಲ್ಲಿ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದ ಒಂದು ದಿನದ ನಂತರ ನ್ಯಾಯಾಲಯದಿಂದ ಈ ಆದೇಶ ಬಂದಿದೆ. ಎಫ್‌ಐಆರ್ ದಾಖಲಿಸುವಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರು ಯಾವುದೇ “ಪೂರ್ವ ತಯಾರಿ” ಮಾಡಿಲ್ಲ ಮತ್ತು ಅವರ ಆರೋಪಗಳನ್ನು “ತಳ್ಳಿ ಹಾಕಲು” ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

“ಸಂತ್ರಸ್ತೆ ಮಾಡಿರುವ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅವುಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಎಫ್‌ಐಆರ್ ದಾಖಲಿಸುವಲ್ಲಿ ಕೇವಲ ವಿಳಂಬವು ಪ್ರಕರಣದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಏಕೆಂದರೆ ನಾಲ್ಕು ದಿನಗಳ ನಂತರ ಗಾಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಅಡಿಷನಲ್ ಸೆಷನ್ಸ್ ನ್ಯಾಯಾಧೀಶ ಸುಶೀಲ್ ಅನುಜ್ ತ್ಯಾಗಿ ಹೇಳಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಬಿಭವ್ ಕುಮಾರ್ ಪರ ವಕೀಲ ಎನ್ ಹರಿಹರನ್, ಮೇ 13 ರಂದು ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಘಟನೆಯ ನಂತರ ಮೇ 16 ರಂದು ತನ್ನ ಕಕ್ಷಿದಾರನ ವಿರುದ್ಧ ‘ಸಂಚು ಮಾಡಿ ಹೆಣೆದ’ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ವಾದಿಸಿದರು.

ಎಫ್‌ಐಆರ್‌ನ ಪ್ರಕಾರ, ಮೇ 13 ರಂದು ಸಿಎಂ ನಿವಾಸದಲ್ಲಿ ಕುಮಾರ್ ಯಾವುದೇ ಪ್ರಚೋದನೆಯಿಲ್ಲದೆ ತನಗೆ ಏಳರಿಂದ ಎಂಟು ಬಾರಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮಲಿವಾಲ್ ಆರೋಪಿಸಿದ್ದಾರೆ. ಕೇಜ್ರಿವಾಲ್ ಅವರ ಆಪ್ತ “ತನಗೆ ಕಪಾಳಮೋಕ್ಷ ಮಾಡಿದರು, ಎದೆ ಮತ್ತು ಸೊಂಟಕ್ಕೆ ಒದ್ದು ಉದ್ದೇಶಪೂರ್ವಕವಾಗಿ ತನ್ನ ಅಂಗಿಯನ್ನು ಎಳೆದರು.” ಎಂದು ಎಫ್ಐಆರ್ ನಲ್ಲಿ ಹೇಳಲಾಗಿದೆ.

ಬಿಭವ್ ಕುಮಾರ್ ಅವರನ್ನು ಮೇ 18 ರಂದು ಬಂಧಿಸಿದ್ದು, ಅದೇ ದಿನ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿತು, ಅವರ ಬಂಧನದಿಂದಾಗಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯು ನಿರುಪಯುಕ್ತವಾಗಿದೆ ಎಂದ ಕೋರ್ಟ್, ಕಳೆದ ಶುಕ್ರವಾರ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಇದನ್ನೂ ಓದಿ: ರಾಮಭಕ್ತ ಮಾತ್ರ ದೆಹಲಿ ಸಿಂಹಾಸನ ಆಳುತ್ತಾನೆ; ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ಘರ್ಜನೆ

ಕುಮಾರ್ ವಿರುದ್ಧ ಎಫ್‌ಐಆರ್ ಅನ್ನು ಮೇ 16 ರಂದು ವಿವಿಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ದಾಖಲಿಸಲಾಗಿದೆ, ಇದರಲ್ಲಿ ಕ್ರಿಮಿನಲ್ ಬೆದರಿಕೆ, ಹಲ್ಲೆ ಅಥವಾ ಕ್ರಿಮಿನಲ್ ಬಲದಿಂದ ಮಹಿಳೆಯ ದೌರ್ಜನ್ಯ ಮತ್ತು ನರಹತ್ಯೆಗೆ ಪ್ರಯತ್ನ ಆರೋಪ ಹೊರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು