AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bibhav Kumar: ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ

ಸ್ವಾತಿ ಮಲಿವಾಲ್ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ದೆಹಲಿ ಪೊಲೀಸರು ಬಂಧಿಸಿದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 13 ರಂದು ಕೇಜ್ರಿವಾಲ್ ಅವರ ನಿವಾಸದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಮೇಲಿದೆ

Bibhav Kumar: ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಬಿಭವ್ ಕುಮಾರ್ ಜಾಮೀನು ಅರ್ಜಿ ವಜಾ
ಬಿಭವ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on:May 27, 2024 | 6:12 PM

Share

ದೆಹಲಿ ಮೇ 27: ಸ್ವಾತಿ ಮಲಿವಾಲ್ (Arvind Kejriwal) ಮೇಲೆ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್  (Bibhav Kumar)ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಸ್ವಾತಿ ಮಲಿವಾಲ್ (Swati Maliwal) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ದೆಹಲಿ ಪೊಲೀಸರು ಬಂಧಿಸಿದ ನಂತರ ಕುಮಾರ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 13 ರಂದು ಕೇಜ್ರಿವಾಲ್ ಅವರ ನಿವಾಸದಲ್ಲಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪ ಬಿಭವ್ ಕುಮಾರ್ ಮೇಲಿದೆ.

ಜಾಮೀನು ವಿಚಾರಣೆ ವೇಳೆ ಬಿಭವ್ ಕುಮಾರ್ ಪರ ವಾದಿಸಿದ ವಕೀಲರು ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಈ ಆರೋಪಕ್ಕಾಗಿ ದೆಹಲಿ ಮುಖ್ಯಮಂತ್ರಿಯವರ ನಿವಾಸದಲ್ಲಿ ಸಿಸಿಟಿವಿ ಇಲ್ಲದ ಜಾಗವನ್ನೇ ಆಯ್ಕೆ ಮಾಡಿಕೊಂಡರು. ಅಲ್ಲಿ ಸಿಸಿಟಿವಿ ಇರುತ್ತಿದ್ದರೆ ಘಟನೆ ದಾಖಲಾಗುತ್ತಿತ್ತು ಎಂದಿದ್ದಾರೆ. ವಕೀಲರು ಹೀಗೆ ಹೇಳುತ್ತಿದ್ದಂತೆ ಸ್ವಾತಿ ನ್ಯಾಯಾಲಯದಲ್ಲಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಆಮ್ ಆದ್ಮಿ ಪಕ್ಷದ  ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಮೇ 13ರಂದು ಕೇಜ್ರಿವಾಲ್ ನಿವಾಸದಲ್ಲಿ ಭಿಭವ್ ಕುಮಾರ್ ಹಲ್ಲೆ ನಡೆಸಿದ್ದರು. ಎಎಪಿಯ “ಟ್ರೋಲ್‌ ಆರ್ಮಿ”ಯನ್ನು ಟೀಕಿಸಿದ ಸ್ವಾತಿ ಮಲಿವಾಲ್ ತನ್ನ ಮೇಲೆ, ಹೆಚ್ಚುತ್ತಿರುವ ಅತ್ಯಾಚಾರ ಮತ್ತು ಮರಣದ ಬೆದರಿಕೆಗಳಿಗೆ ಜನಪ್ರಿಯ ಯೂಟ್ಯೂಬರ್ ನ್ನೂ ದೂಷಿಸಿದ್ದಾರೆ. ಬಿಭವ್ ಕುಮಾರ್‌ಗೆ ಜಾಮೀನು ನೀಡಿದರೆ, “ನನ್ನ ಜೀವಕ್ಕೆ ಮತ್ತು ನನ್ನ ಕುಟುಂಬಕ್ಕೆ ಅಪಾಯವಿದೆ” ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ.

ತಮ್ಮ ಕಕ್ಷಿದಾರರ ಪರವಾಗಿ ಮಾತನಾಡಿದ ಬಿಭವ್ ಕುಮಾರ್ ಅವರ ವಕೀಲರು, “ಇದೆಲ್ಲ ಪೂರ್ವಯೋಜಿತವಾಗಿತ್ತು. ಆಕೆ ಮುಖ್ಯಮಂತ್ರಿಯನ್ನು ಭೇಟಿಯಾಗದಿರುವುದಕ್ಕೆ ನಾನೇ ಹೊಣೆ ಎಂದು ಭಾವಿಸಿದ್ದಕ್ಕಾಗಿ ಆಕೆ ಯಾವುದೇ ಕಾರಣಕ್ಕಾಗಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ” ಎಂದು ಹೇಳಿದರು.

“ಡ್ರಾಯಿಂಗ್ ರೂಮ್ (ಕೇಜ್ರಿವಾಲ್ ಅವರ ನಿವಾಸದಲ್ಲಿ) ಘಟನೆ ನಡೆದಿತ್ತು ಎಂದು ಹೇಳಿದ್ದಾರೆ, ಅಲ್ಲಿ ಯಾವುದೇ ಸಿಸಿಟಿವಿ ಇಲ್ಲ. ಅದಕ್ಕಾಗಿಯೇ ಆಕೆ ಆ ಸ್ಥಳವನ್ನು ಆರಿಸಿಕೊಂಡಳು. ಸಿಸಿಟಿವಿ ಇಲ್ಲ ಎಂದು ಆಕೆಗೆ ಗೊತ್ತು. ಹಾಗಾಗಿ ಅಲ್ಲಿ ಘಟನೆ ನಡೆದಿದೆ ಎಂದು ಹೇಳುವುದು ಸುಲಭ ಮತ್ತು ಈ ರೀತಿ ಆರೋಪಗಳನ್ನು ಮಾಡಬಹುದು” ಎಂದು ವಕೀಲರು ಹೇಳಿದ್ದು, ಮೇ 13 ರಂದು ಸ್ವಾತಿ ಮಲಿವಾಲ್ ಮಾಡಿದ್ದು “ಅತಿಕ್ರಮಣ” ಎಂದಿದ್ದಾರೆ.

“ಯಾರಾದರೂ ಏಕಾಏಕಿ ಹೀಗೆ ಪ್ರವೇಶಿಸಬಹುದೇ? ಅದು ಮುಖ್ಯಮಂತ್ರಿಗಳ ನಿವಾಸ. ಸಂಸದರಾಗಿರುವುದರಿಂದ ನಿಮಗೆ ತೋಚಿದ್ದನ್ನು ಮಾಡಲು ಪರವಾನಗಿ ನೀಡುವುದಿಲ್ಲ. ಅವರ ಕಡೆಯಿಂದ ಪ್ರಚೋದನೆ ಇತ್ತು. ಆಕೆ ತೊಂದರೆ ಉಂಟುಮಾಡುವ ಪೂರ್ವಭಾವಿ ಉದ್ದೇಶದಿಂದ ಬಂದಿದ್ದರು. ಅವರು ಆಗಾಗ್ಗೆ ಭೇಟಿ ನೀಡುತ್ತಿದ್ದರು. ಆದರೆ ಅದು ಆಕೆಗೆ ಅತಿಕ್ರಮಣ ಮಾಡುವ ಹಕ್ಕನ್ನು ನೀಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬಿಭವ್ ಕುಮಾರ್‌ಗೆ ಜಾಮೀನು ನೀಡಿದರೆ ಜೀವಕ್ಕೆ ಅಪಾಯವಿದೆ, ನ್ಯಾಯಾಲಯದಲ್ಲಿ ಕಣ್ಣೀರು ಹಾಕಿದ ಸ್ವಾತಿ ಮಲಿವಾಲ್

ನ್ಯಾಯಾಲಯವನ್ನುದ್ದೇಶಿಸಿ ಮಾತನಾಡಿದ ಸ್ವಾತಿ ಮಲಿವಾಲ್, ಹಲ್ಲೆಯ ಬಗ್ಗೆ ವರದಿ ಮಾಡಿದಾಗಿನಿಂದ ಆಕೆಯನ್ನು ಬಿಜೆಪಿ ಏಜೆಂಟ್ ಎಂದು ಪದೇ ಪದೇ ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ. “ಅವರು (ಎಎಪಿ) ಟ್ರೋಲ್‌ ಆರ್ಮಿ ಹೊಂದಿದ್ದಾರೆ. ಇಡೀ ಪಕ್ಷವನ್ನು ಇದಕ್ಕಾಗಿ ನಿಯೋಜಿಸಲಾಗಿದೆ. ನನ್ನ ವಿರುದ್ಧ ನಿರಂತರ ಪತ್ರಿಕಾಗೋಷ್ಠಿಗಳು ನಡೆದವು. ಈ ವ್ಯಕ್ತಿ (ಬಿಭವ್ ಕುಮಾರ್) ಸಾಮಾನ್ಯನಲ್ಲ” ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Mon, 27 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್