AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸದಾ ಮಹಿಳೆಯರ ಪರ; ಸ್ವಾತಿ ಮಲಿವಾಲ್ ಪ್ರಕರಣಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ

ಅರವಿಂದ್ ಕೇಜ್ರಿವಾಲ್ ಅವರ ಭೇಟಿಗಾಗಿ ದೆಹಲಿಯಲ್ಲಿನ ಅವರ ನಿವಾಸಕ್ಕೆ ತೆರಳಿದ್ದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಅವರ ಪಿಎ ಬಿಭವ್ ಕುಮಾರ್ ಹಲ್ಲೆ ನಡೆಸಿದ್ದರು. ಈ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಸದಾ ಮಹಿಳೆಯರ ಪರ; ಸ್ವಾತಿ ಮಲಿವಾಲ್ ಪ್ರಕರಣಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ
ಪ್ರಿಯಾಂಕಾ ಗಾಂಧಿ
ಸುಷ್ಮಾ ಚಕ್ರೆ
|

Updated on: May 16, 2024 | 4:05 PM

Share

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi), ಮಹಿಳೆಯ ಮೇಲೆ ಯಾವುದೇ ದೌರ್ಜನ್ಯ ನಡೆದರೆ ಆಕೆಯೊಂದಿಗೆ ನಾನು ನಿಲ್ಲುವುದಾಗಿ ಹೇಳಿದ್ದಾರೆ.

ರಾಜ್ಯಸಭಾ ಸದಸ್ಯೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮೇಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಹಲ್ಲೆ ನಡೆಸಿದ್ದರು. ಸ್ವಾತಿ ಮಲಿವಾಲ್ ಅವರು ಈ ಕುರಿತು ದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ಹೋಗಿದ್ದರು. ಸಿಎಂ ನಿವಾಸದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಿಎ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ; ಒಪ್ಪಿಕೊಂಡ ಆಮ್ ಆದ್ಮಿ ಪಾರ್ಟಿ

“ಯಾವುದೇ ಮಹಿಳೆಗೆ ಎಲ್ಲಿಯಾದರೂ ಯಾವುದೇ ದೌರ್ಜನ್ಯ ನಡೆದರೆ, ನಾವು ಮಹಿಳೆಯೊಂದಿಗೆ ನಿಲ್ಲುತ್ತೇವೆ. ನಾನು ಯಾವಾಗಲೂ ಮಹಿಳೆಯರ ಪರವಾಗಿ ನಿಲ್ಲುತ್ತೇನೆ. ಅವರು ಯಾವ ಪಕ್ಷದವರಾಗಿದ್ದರೂ ಅದು ಗಣನೆಗೆ ಬರುವುದಿಲ್ಲ. ಈ ಪ್ರಕರಣದ ಕುರಿತು ಆಪ್ ತಮ್ಮ ನಡುವೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಎಂಬುದು ಅವರಿಗೆ ಬಿಟ್ಟದ್ದು” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ತಪ್ಪಿತಸ್ಥರ ವಿರುದ್ಧ ಅರವಿಂದ್ ಕೇಜ್ರಿವಾಲ್ ಅವರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆಮ್ ಆದ್ಮಿ ಪಕ್ಷದ ಪರವಾಗಿ ಹೇಳಿಕೆ ನೀಡಿದ್ದರು. ಸ್ವಾತಿ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಸಿಎಂ ನಿವಾಸಕ್ಕೆ ಬಂದಿದ್ದರು. ಅವರು ಕೇಜ್ರಿವಾಲ್‌ಗಾಗಿ ಡ್ರಾಯಿಂಗ್ ರೂಮ್‌ನಲ್ಲಿ ಕಾಯುತ್ತಿದ್ದಾಗ, ಬಿಭವ್ ಕುಮಾರ್ (ಸಿಎಂ ಅವರ ಆಪ್ತ ಕಾರ್ಯದರ್ಶಿ) ಅಲ್ಲಿಗೆ ಆಗಮಿಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಸ್ವಾತಿ ಮಲಿವಾಲ್ ಮೇಲೆ ದೌರ್ಜನ್ಯ; ಬಿಭವ್ ಕುಮರ್​​ಗೆ ಮಹಿಳಾ ಆಯೋಗದಿಂದ ಸಮನ್ಸ್

ಇದಾದ ನಂತರವೂ ಬುಧವಾರ, ಬಿಭವ್ ಕುಮಾರ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಲಕ್ನೋ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ರಾಷ್ಟ್ರೀಯ ಮಹಿಳಾ ಆಯೋಗವು (NCW) ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರಿಗೆ ಮೇ 17ರಂದು ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ